AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Reliance Industries: ಅಬುಧಾಬಿ ಗ್ಲೋಬಲ್ ಮಾರ್ಕೆಟ್​ನಲ್ಲಿ RINL ಸೇರ್ಪಡೆ ಮಾಡಿದ ರಿಲಯನ್ಸ್ ಇಂಡಸ್ಟ್ರೀಸ್

ರಿಲಯನ್ಸ್ ಇಂಡಸ್ಟ್ರೀಸ್​​ನಿಂದ ಯುಎಇಯಲ್ಲಿ ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್​ ಅನ್ನು ಇನ್​ಕಾರ್ಪೊರೇಟ್​ ಮಾಡಲಾಗಿದೆ. ಆ ಬಗ್ಗೆ ವಿವರ ಇಲ್ಲಿದೆ.

Reliance Industries: ಅಬುಧಾಬಿ ಗ್ಲೋಬಲ್ ಮಾರ್ಕೆಟ್​ನಲ್ಲಿ RINL ಸೇರ್ಪಡೆ ಮಾಡಿದ ರಿಲಯನ್ಸ್ ಇಂಡಸ್ಟ್ರೀಸ್
ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 02, 2021 | 5:24 PM

Share

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ (RIL)ನಿಂದ ಸಂಪೂರ್ಣ ಒಡೆತನದ ಅಂಗ ಸಂಸ್ಥೆಯಾದ ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್ (RINL) ಎಂಬುದನ್ನು ಯುನೈಟೆಡ್ ಅರಬ್ ಎಮಿರೇಟ್ಸ್​ನ (UAE) ಅಬುಧಾಬಿ ಗ್ಲೋಬಲ್ ಮಾರ್ಕೆಟ್​ನಲ್ಲಿ ಸೇರ್ಪಡೆ (Incorporate) ಮಾಡಲಾಗಿದೆ. ಕಂಪೆನಿಯು 7.42 ಕೋಟಿ ರೂಪಾಯಿ ಅಥವಾ 10 ಲಕ್ಷ ಅಮೆರಿಕನ್ ಡಾಲರ್ ನಗದನ್ನು ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್​ನ ತಲಾ 1 ಯುಎಸ್​ಡಿಯ 10 ಲಕ್ಷ ಈಕ್ವಿಟಿ ಷೇರುಗಳಲ್ಲಿ ಹೂಡಿಕೆ ಮಾಡಿದೆ, ಎಂದು ಶನಿವಾರ ಫೈಲಿಂಗ್​ನಲ್ಲಿ ತಿಳಿಸಲಾಗಿದೆ. ಕಚ್ಚಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ಪೆಟ್ರೋಕೆಮಿಕಲ್ಸ್ ಮತ್ತು ಕೃಷಿ ಪದಾರ್ಥಗಳಲ್ಲಿ ವಹಿವಾಟು ನಡೆಸುವುದಕ್ಕೆ ಈ ಅಂಗಸಂಸ್ಥೆಯನ್ನು ಸ್ಥಾಪಿಸಲಾಗಿದೆ. ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್ ವಾಣಿಜ್ಯ ಕಾರ್ಯ ಚಟುವಟಿಕೆ ಇನ್ನಷ್ಟೇ ಆರಂಭಗೊಳ್ಳಬೇಕಿದೆ. ಅಬುಧಾಬಿ ನ್ಯಾಷನಲ್ ಆಯಿಲ್ ಕಂಪೆನಿ ಯೋಜನೆಯಲ್ಲಿ ಹೂಡಿಕೆ ಮಾಡುವುದಾಗಿ ಕಳೆದ ಜೂನ್​ನಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಘೋಷಣೆ ಮಾಡಿತ್ತು. ಆಗಿನ ಯೋಜನೆಯ ಬೆನ್ನಿಗೆ ಈ ಬೆಳವಣಿಗೆ ಆಗಿದೆ.

ಕಂಪೆನಿಯು ಹೇಳಿರುವಂತೆ, ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್ ಹೂಡಿಕೆಯು ಸಂಬಂಧಪಟ್ಟ ವ್ಯಕ್ತಿಗಳ ವಹಿವಾಟಿಗೆ ಬರುವುದಿಲ್ಲ ಎಂದು ಕಂಪೆನಿ ಹೇಳಿದೆ. ಜತೆಗೆ ಪ್ರವರ್ತಕರು ಅಥವಾ ಪ್ರವರ್ತಕರ ಸಮೂಹ ಅಥವಾ ಸಮೂಹದ ಕಂಪೆನಿಗಳು ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್​ನಲ್ಲಿ ಯಾವುದೇ ಆಸಕ್ತಿ ಹೊಂದಿಲ್ಲ ಎಂದು ತಿಳಿಸಲಾಗಿದೆ.

ಈಗಿನ ಹೂಡಿಕೆಗೆ ಸರ್ಕಾರದ ಅಥವಾ ನಿಯಂತ್ರಕರ ಅನುಮತಿಯ ಅಗತ್ಯ ಇಲ್ಲ ಎನ್ನಲಾಗಿದೆ. ರಿಲಯನ್ಸ್ ಕಂಪೆನಿಯಿಂದ ವಿಶ್ವದ ಅತಿ ದೊಡ್ಡ ತೈಲ ರಿಫೈನಿಂಗ್ ಸಮುಚ್ಚಯವನ್ನು ಗುಜರಾತ್​ನಲ್ಲಿ ನಡೆಸುತ್ತಿದೆ. ರಿಲಯನ್ಸ್ ಇಂಡಸ್ಟ್ರೀಸ್ ಕಂಪೆನಿಯ ಷೇರು ಶುಕ್ರವಾರದಂದು ಎನ್​ಎಸ್​ಇಯಲ್ಲಿ ವಾರದ ಕೊನೆಗೆ ರೂ. 2,525ಕ್ಕೆ ವಾರಾಂತ್ಯ ಕಂಡಿದೆ.

ಇದನ್ನೂ ಓದಿ: RRVL: ಜಸ್ಟ್​ ಡಯಲ್​ನಲ್ಲಿ ಶೇ 67ರಷ್ಟು ಷೇರು ಖರೀದಿಸಲಿದೆ ರಿಲಯನ್ಸ್ ರೀಟೇಲ್ ವೆಂಚರ್ಸ್

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ