AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Reliance Industries: ರಿಲಯನ್ಸ್​ ಇಂಡಸ್ಟ್ರೀಸ್​ಗೆ ಸೆಪ್ಟೆಂಬರ್​ ತ್ರೈಮಾಸಿಕದಲ್ಲಿ ದಾಖಲೆಯ 15,479 ಕೋಟಿ ರೂ. ಲಾಭ

ಪ್ರಸಕ್ತ ಹಣಕಾಸು ವರ್ಷದ ಜುಲೈನಿಂದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ದಾಖಲೆಯ ಕ್ರೋಡೀಕೃತ ಲಾಭವಾದ ರೂ. 15,479 ಕೋಟಿಗಳನ್ನು ದಾಖಲಿಸಿದೆ. ಆ ಬಗ್ಗೆ ವಿವರ ಇಲ್ಲಿದೆ.

Reliance Industries: ರಿಲಯನ್ಸ್​ ಇಂಡಸ್ಟ್ರೀಸ್​ಗೆ ಸೆಪ್ಟೆಂಬರ್​ ತ್ರೈಮಾಸಿಕದಲ್ಲಿ ದಾಖಲೆಯ 15,479 ಕೋಟಿ ರೂ. ಲಾಭ
ಮುಕೇಶ್ ಅಂಬಾನಿ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Oct 22, 2021 | 9:37 PM

2021ರ ಸೆಪ್ಟೆಂಬರ್​ಗೆ (ಜುಲೈನಿಂದ ಸೆಪ್ಟೆಂಬರ್) ಕೊನೆಯಾದ ತ್ರೈಮಾಸಿಕಕ್ಕೆ ರಿಲಯನ್ಸ್ ಇಂಡಸ್ಟ್ರೀಸ್​ನಿಂದ ದಾಖಲೆಯ ಕ್ರೋಡೀಕೃತ ಲಾಭವಾದ 15,479 ಕೋಟಿ ರೂಪಾಯಿ ದಾಖಲಿಸಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದಲ್ಲಿ ಶೇ 46ರಷ್ಟು ಹೆಚ್ಚಳವಾಗಿದೆ. ರೀಟೇಲ್, ಡಿಜಿಟಲ್, ತೈಲದಿಂದ ರಾಸಾಯನಿಕದ ತನಕ (O2C) ಸೆಗ್ಮೆಂಟ್​ಗಳು ತಮ್ಮ ಕೊಡುಗೆ ನೀಡಿವೆ. ಎಲ್ಲ ಉದ್ಯಮವು ಕೊವಿಡ್ ಮುಂಚಿನ ಹಂತಕ್ಕಿಂತ ಹೆಚ್ಚಿನ ಬೆಳವಣಿಗೆ ಕಂಡಿದೆ. ಎರಡನೇ ತ್ರೈಮಾಸಿಕದಲ್ಲಿ ಡಿಜಿಟಲ್​ ಸರ್ವೀಸಸ್ ದಾಖಲೆಯ ವ್ಯಾಪಾರವನ್ನು ಮಾಡಿದೆ. ವರ್ಷದ ಹಿಂದೆ ಅವಧಿಯಲ್ಲಿ 10,602 ಕೋಟಿ ರೂಪಾಯಿ ಬಂದಿತ್ತು. 2021ರ ಏಪ್ರಿಲ್​ನಿಂದ ಜೂನ್​ ತ್ರೈಮಾಸಿಕದಲ್ಲಿ 13,806 ಕೋಟಿ ಲಾಭ ಆಗಿದ್ದು, ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ ಶೇ 12.1ರಷ್ಟು ಲಾಭದಲ್ಲಿ ಬೆಳವಣಿಗೆ ಆಗಿದೆ.

2021ರ ಸೆಪ್ಟೆಂಬರ್​ನಲ್ಲಿ ಕ್ರೋಡೀಕೃತ ಆದಾಯ 1.74 ಲಕ್ಷ ಕೋಟಿ ರೂಪಾಯಿ ಬಂದಿದೆ. ಒಂದು ವರ್ಷದ ಹಿಂದೆ ಬಂದಿದ್ದ 1.16 ಲಕ್ಷ ಕೋಟಿ ರೂಪಾಯಿಗೆ ಹೋಲಿಸಿದರೆ ಶೇ 49.8ರಷ್ಟು ಹೆಚ್ಚಳವಾಗಿದೆ ಎಂದು ಬಿಎಸ್​ಇ ಫೈಲಿಂಗ್​ನಲ್ಲಿ ರಿಲಯನ್ಸ್​ ಇಂಡಸ್ಟ್ರೀಸ್ ತಿಳಿಸಿದೆ. ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ ಶೇ 20.6ರಷ್ಟು ಬೆಳವಣಿಗೆ ದಾಖಲಿಸಿದೆ. “Q2FY22ರಲ್ಲಿ ರಿಲಯನ್ಸ್ ಪ್ರಬಲ ಪ್ರದರ್ಶನವನ್ನು ನೀಡಿದೆ. ಇದು ನಮ್ಮ ಉದ್ಯಮದ ಬಲವನ್ನು ತೋರಿಸುತ್ತದೆ ಹಾಗೂ ಭಾರತೀಯ ಮತ್ತು ಜಾಗತಿಕ ಚೇತರಿಕೆಗೆ ಉತ್ತೇಜನ ನೀಡಿದೆ. ನಮ್ಮ ಎಲ್ಲ ಉದ್ಯಮವು ಕೊವಿಡ್ ಮುಂಚಿನ ಮಟ್ಟಕ್ಕಿಂತ ಬೆಳವಣಿಗೆ ಕಂಡಿದೆ,” ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಮುಕೇಶ್ ಅಂಬಾನಿ ಹೇಳಿದ್ದಾರೆ.

ಕಾರ್ಯನಿರ್ವಹಣೆ ಮತ್ತು ಹಣಕಾಸು ಪ್ರದರ್ಶನವು ರೀಟೇಲ್ ಸೆಗ್ಮೆಂಟ್​ ಮತ್ತು ತೈಲದಿಂದ ರಾಸಾಯನಿಕದ ತನ (O2C) ಹಾಗೂ ಡಿಜಿಟಲ್ ಸೇವೆ ಉದ್ಯಮದಲ್ಲಿ ಸುಸ್ಥಿರವಾದ ಬೆಳವಣಿಗೆ ದಾಖಲಿಸಿದೆ ಎಂದು ಅವರು ತಿಳಿಸಿದ್ದಾರೆ. ಜಿಯೋ ಭಾರತದ ಬ್ರಾಡ್​ಬ್ಯಾಂಡ್​ ಮಾರುಕಟ್ಟೆಯಲ್ಲಿ ಬದಲಾವಣೆ ತರುತ್ತಿದೆ ಮತ್ತು ಈ ವಲಯದಲ್ಲಿ ಹೊಸ ಬೆಂಚ್​ಮಾರ್ಕ್ ಸಿದ್ಧಪಡಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೀಕೃತ ಲಾಭ ಕಂಪೆನಿಯದು ಶೇ 44.1ರಷ್ಟು ಬೆಳವಣಿಗೆ ಆಗಿದ್ದು, 9228 ಕೋಟಿ ರೂಪಾಯಿ ಆಗಿದ್ದು, ಸಗಟು ಆದಾಯ ವರ್ಷದಿಂದ ವರ್ಷಕ್ಕೆ ಶೇ 68.8ರಷ್ಟು ಹೆಚ್ಚಾಗಿದ್ದು, 1.08 ಲಕ್ಷ ರೂಪಾಯಿ ಆಗಿದೆ.

ಅಕ್ಟೋಬರ್ 19ನೇ ತಾರೀಕಿನಂದು ರಿಲಯನ್ಸ್ ಇಂಡಸ್ಟ್ರೀಸ್ ಬೆಲೆ 2750 ರೂಪಾಯಿ ತಲಯಪಿದ ಮೇಲೆ ಕಂಪೆನಿಯ ಮಾರುಕಟ್ಟೆ ಬಂಡವಾಳ ಮೌಲ್ಯವು 18 ಲಕ್ಷ ಕೋಟಿ ರೂಪಾಯಿ ಮುಟ್ಟಿತು. ಸೌರಶಕ್ತಿ ಉದ್ಯಮದಲ್ಲಿ ಹಲವು ವ್ಯವಹಾರಗಳು ಬಂದ ಹಿನ್ನೆಲೆಯಲ್ಲಿ ಈ ಸ್ಟಾಕ್ ಜುಲೈ ಆರಂಭದಿಂದ ಈಚೆಗೆ ಶೇ 24ರಷ್ಟು ಏರಿಕೆ ಕಂಡಿದ್ದು, ಮಾರುಕಟ್ಟೆ ಬಂಡವಾಳ ಮೌಲ್ಯ 18.3 ಲಕ್ಷ ಕೋಟಿ ರೂಪಾಯಿ ಮುಟ್ಟಿತು.

ರಿಲಯನ್ಸ್ ಇಂಡಸ್ಟ್ರೀಸ್ ಅಂಗಸಂಸ್ಥೆಯಾದ ರಿಲಯನ್ಸ್ ಜಿಯೋ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ನಿವ್ವಳ ಲಾಭ 3528 ಕೋಟಿ ಬಂದಿದೆ. 2021ರ ಜೂನ್ ತ್ರೈಮಾಸಿಕದಲ್ಲಿ 3501 ಕೋಟಿ ರೂ. ಲಾಭ ಬಂದಿತ್ತು. ಆದಾಯವು ಕಳೆದ ತ್ರೈಮಾಸಿಕಕ್ಕಿಂತ ಶೇ 4ರಷ್ಟು ಹೆಚ್ಚಾಗಿ 18735 ಕೋಟಿ ತಲುಪಿದೆ. ಜಿಯೀ ಆವರೇಜ್ ರೆವೆನ್ಯೂ ಪರ್ ಯೂಸರ್ (ARPU) ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಒಬ್ಬ ಸಬ್​ಸ್ಕ್ರೈಬರ್​ಗೆ ತಿಂಗಳಿಗೆ 143.60 ರೂಪಾಯಿ ಆಗಿದೆ. ಒಟ್ಟಾರೆ ಡೇಟಾ ಟ್ರಾಫಿಕ್ ಈ ತ್ರೈಮಾಸಿಕದಲ್ಲಿ ಶೇ 50.9ರಷ್ಟು ಹೆಚ್ಚಾಗಿ 23.0 ಬಿಲಿಯನ್ ಜಿಬಿ ಡೇಟಾ ಬಳಕೆ ಆಗಿದೆ. ಇನ್ನು ಈ ತ್ರೈಮಾಸಿಕದಲ್ಲಿ 2.38 ಕೋಟಿ ಗ್ರಾಹಕರು ಸೇರ್ಪಡೆ ಆಗಿ, ಒಟ್ಟು ಸಂಖ್ಯೆ 42.95 ಕೋಟಿ ತಲುಪಿದ್ದಾರೆ.

ರಿಲಯನ್ಸ್ ರೀಟೇಲ್ ಆದಾಯ ಶೇ 18ರಷ್ಟು ಹೆಚ್ಚಾಗಿ 45,450 ಕೋಟಿ ಆಗಿದೆ. ಹಿಂದಿನ ತ್ರೈಮಾಸಿಕದಲ್ಲಿ 38,563 ಕೋಟಿ ರೂ. ಆಗಿತ್ತು. ಕಳೆದ ವರ್ಷದ ಇದೇ ಅವಧಿಯಲ್ಲಿ 41,124 ಕೋಟಿ ರೂ ಆಗಿತ್ತು. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 74ರಷ್ಟು ನಿವ್ವಳ ಲಾಭ ಹೆಚ್ಚಾಗಿ 1695 ಕೋಟಿ ರೂಪಾಯಿ ಮುಟ್ಟಿದೆ.

ಇದನ್ನೂ ಓದಿ: Reliance Industries: ಫೋರ್ಬ್ಸ್​ನಿಂದ ಭಾರತದ ಟಾಪ್ 1 ಉದ್ಯೋಗದಾತ ಸಂಸ್ಥೆಯಾಗಿ ರಿಲಯನ್ಸ್​ ಇಂಡಸ್ಟ್ರೀಸ್ ಆಯ್ಕೆ

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್