AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Reliance Jio 5G: 5ಜಿ ಆಧಾರಿತ ಸಾರ್ವಜನಿಕ ವೈಫೈ ಸೇವೆ ಆರಂಭಿಸಿದ ರಿಲಯನ್ಸ್ ಜಿಯೋ

5ಜಿ ಆಧಾರಿತ ಸಾರ್ವಜನಿಕ ವೈಫೈ ಸೇವೆಯನ್ನು ರಿಲಯನ್ಸ್ ಜಿಯೋ ಆರಂಭಿಸಿದೆ.

Reliance Jio 5G: 5ಜಿ ಆಧಾರಿತ ಸಾರ್ವಜನಿಕ ವೈಫೈ ಸೇವೆ ಆರಂಭಿಸಿದ ರಿಲಯನ್ಸ್ ಜಿಯೋ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 22, 2022 | 3:43 PM

Share

ನವದೆಹಲಿ: 5ಜಿ (5G) ಆಧಾರಿತ ಸಾರ್ವಜನಿಕ ವೈಫೈ ಸೇವೆಯನ್ನು ರಿಲಯನ್ಸ್ ಜಿಯೋ (Reliance Jio) ಆರಂಭಿಸಿದೆ. ರಾಜಸ್ಥಾನದ ದೇಗುಲ ನಗರಿ ನಾಥ್​ದ್ವಾರಾದಲ್ಲಿ ಸಾರ್ವಜನಿಕ ವೈಫೈ ಸೇವೆ ಆರಂಭಿಸಲಾಗಿದೆ. ಮುಂಬರುವ ದಿನಗಳಲ್ಲಿ ರೈಲು ನಿಲ್ದಾಣ, ಶೈಕ್ಷಣಿಕ ಸಂಸ್ಥೆಗಳು ಮತ್ತಿತರ ಕಡೆಗಳಲ್ಲಿ ಸೇವೆ ಲಭ್ಯವಾಗಲಿದೆ ಎಂದು ಕಂಪನಿ ಶನಿವಾರ ತಿಳಿಸಿದೆ.

ಚೆನ್ನೈ ನಗರದಲ್ಲಿ ಕೂಡ ಜಿಯೋ 5ಜಿ ಸೇವೆ (JioTrue5G) ಆರಂಭಿಸಿದೆ. ಜಿಯೋ ವೆಲ್​ಕಮ್ ಆಫರ್​ ಅನ್ನು ನಗರದಲ್ಲಿ ಪರಿಚಯಿಸಲಾಗಿದೆ. ಈ ಆಫರ್ ಮೂಲಕ ಗ್ರಾಹಕರು ಬೆಟಾ ಟ್ರಯಲ್ ಸಂದರ್ಭದಲ್ಲಿ 5ಜಿ ಸೇವೆ ಪಡೆಯಬಹುದಾಗಿದ್ದು, ಸೆಕಂಡ್​ಗೆ 1 ಗಿಗಾಬೈಟ್ ವೇಗದಲ್ಲಿ ಇಂಟರ್​ನೆಟ್ ಸಿಗಲಿದೆ.

‘ಶ್ರೀನಾಥ್ ದೇಗುಲ ನಗರವಾದ ನಾಥ್​ದ್ವಾರದಲ್ಲಿ ನಾವಿಂದು 5ಜಿ ಆಧಾರಿತ ವೈಫೈ ಸೇವೆ ಆರಂಭಿಸಿದ್ದೇವೆ. ಇದರೊಂದಿಗೆ, ಇನ್ನೂ ಅನೇಕ ಪ್ರದೇಶಗಳಿಗೆ ನಮ್ಮ ಸೇವೆಯನ್ನು ವಿಸ್ತರಿಸಲಿದ್ದೇವೆ. ಚೆನ್ನೈ ನಗರದಲ್ಲಿ ಕೂಡ ಜಿಯೋ ಟ್ರೂ5ಜಿ ವೆಲ್​ಕಮ್ ಆಫರ್ ನೀಡಲಾಗಿದೆ’ ಎಂದು ರಿಲಯನ್ಸ್ ಜಿಯೋ ಅಧ್ಯಕ್ಷ ಆಕಾಶ್ ಎಂ ಅಂಬಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 5G Service: 5ಜಿ ಸೇವೆ ಒದಗಿಸಲು ರಿಲಯನ್ಸ್ ಜಿಯೊ ಜತೆ ಎರಿಕ್ಸನ್ ಒಪ್ಪಂದ

ರೈಲು ನಿಲ್ದಾಣ, ಧಾರ್ಮಿಕ ಸ್ಥಳಗಳು, ಬಸ್ಸು ನಿಲ್ದಾಣ, ವಾಣಿಜ್ಯ ಹಬ್​ಗಳು ಹಾಗೂ ಇತರ ಪ್ರದೇಶಗಳಲ್ಲಿ ಟ್ರೂ5ಜಿ ವೈಫೈ ಸೇವೆಯನ್ನು ಜಿಯೋ ಪರಿಚಯಿಸುತ್ತಿದೆ.

‘5ಜಿ ಕೆಲವೊಬ್ಬರಿಗೆ ಮಾತ್ರ ಅಥವಾ ದೊಡ್ಡ ನಗರಗಳ ಜನರಿಗೆ ಮಾತ್ರ ಸಿಗುವ ಸೇವೆಯಾಗಿ ಪರಿಣಮಿಸಬಾರದು. ಅದು ಪ್ರತಿಯೊಬ್ಬ ನಾಗರಿಕನಿಗೂ, ಪ್ರತಿ ಮನೆಗೂ ಹಾಗೂ ದೇಶದಾದ್ಯಂತ ಎಲ್ಲ ಉದ್ಯಮಗಳಿಗೂ ದೊರೆಯುಂತಾಗಬೇಕು’ ಎಂದು ಅಂಬಾನಿ ಹೇಳಿದ್ದಾರೆ.

ದೇಶದಲ್ಲಿ 5ಜಿ ಸೇವೆ ಒದಗಿಸಲು ರಿಲಯನ್ಸ್ ಜಿಯೋ ಹಾಗೂ ಎರಿಕ್ಸನ್ ಇತ್ತೀಚೆಗೆ ಒಪ್ಪಂದ ಮಾಡಿಕೊಂಡಿದ್ದವು. 5ಜಿ ಸೇವೆಗಾಗಿ ಎರಿಕ್ಸನ್ ಜತೆ ಸಹಭಾಗಿತ್ವ ಹೊಂದಿರುವುದು ಸಂತಸದ ವಿಚಾರ. ಎಲ್​ಟಿಇ ಸೇವೆ ಆರಂಭಿಸುವ ಮೂಲಕ 2016ರಲ್ಲಿ ಭಾರತದಲ್ಲಿ ಜಿಯೊ ಡಿಜಿಟಲ್​ ಕ್ರಾಂತಿಗೆ ಹೊಸ ಆಯಾಮ ನೀಡಿತ್ತು. 5ಜಿ ಸೇವೆಯು ಭಾರತದ ಡಿಜಿಟಲೀಕರಣ ಪ್ರಕ್ರಿಯೆಗೆ ಮತ್ತಷ್ಟು ವೇಗ ನೀಡಲಿದೆ. ಡಿಜಿಟಲ್ ಇಂಡಿಯಾ ದೃಷ್ಟಿಕೋನಕ್ಕೆ ಪೂರಕವಾಗಲಿದೆ ಎಂಬ ಭರವಸೆ ನಮಗಿದೆ ಎಂದು ಆಕಾಶ್ ಅಂಬಾನಿ ಹೇಳಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ