AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Repo Rate: ರೆಪೋ ದರ ಶೇ. 6.5ರಲ್ಲೇ ಮುಂದುವರಿಕೆ; ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆರ್ಥಿಕ ಬೆಳವಣಿಗೆ ಬಗ್ಗೆ ಸಮಾಧಾನಕರ ಮಾತು

RBI Governor Shaktikanta Das Press Meet: ರೆಪೋ ದರ ನಿರೀಕ್ಷೆಯಂತೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ರೆಪೋ ದರ ಶೇ. 6.5ರಲ್ಲಿ ಮುಂದುವರಿಸಲು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪ್ರಕಟಿಸಿದ್ದಾರೆ.

Repo Rate: ರೆಪೋ ದರ ಶೇ. 6.5ರಲ್ಲೇ ಮುಂದುವರಿಕೆ; ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆರ್ಥಿಕ ಬೆಳವಣಿಗೆ ಬಗ್ಗೆ ಸಮಾಧಾನಕರ ಮಾತು
ಶಕ್ತಿಕಾಂತ ದಾಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 08, 2023 | 10:49 AM

Share

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಜೂನ್ 6ರಿಂದ 3 ದಿನಗಳ ಕಾಲ ನಡೆದ ಆರ್​ಬಿಐನ ಹಣಕಾಸು ನೀತಿ ಸಮಿತಿ ಸಭೆ (RBI Monetary Policy Committee) ಇಂದು ಮುಕ್ತಾಗೊಂಡ ಬಳಿಕ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ನಡೆಸಿ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಹಣದುಬ್ಬರ ಕಡಿಮೆ ಆಗಿರುವುದರಿಂದ ಈ ಬಾರಿ ಬಡ್ಡಿ ದರ ಏರಿಕೆಯನ್ನು ನಿಲ್ಲಿಸಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು. ರೆಪೋ ದರ ಮಾತ್ರವಲ್ಲ ರಿವರ್ಸ್ ರಿಪೋ ಮತ್ತಿತರ ದರಗಳಲ್ಲೂ ಬದಲಾವಣೆಗಳಾಗಿಲ್ಲ.

ಪತ್ರಿಕಾಗೋಷ್ಠಿಯಲ್ಲಿ ಶಕ್ತಿಕಾಂತ ದಾಸ್ ಅವರು ಹಣದುಬ್ಬರ ಇಳಿಕೆಯಾದರೂ ಸಮಾಧಾನಪಡುವಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ ಎಂದೂ ಎಚ್ಚರಿಸಿದ್ದಾರೆ. ಹೆಡ್​ಲೈನ್ ಹಣದುಬ್ಬರವು ಕಡಿಮೆ ಆಗಿದ್ದರೂ ಅದು ನಮ್ಮ ಗುರಿಗಿಂತ ಮೇಲ್ಮಟ್ಟದಲ್ಲೇ ಇದೆ. ಈ ಹಣದುಬ್ಬರದ ಬಗ್ಗೆ ಅರ್ಜುನನ ಕಣ್ಣಿಡುವುದು ಅವಶ್ಯಕತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸೇರಿ ಎಂಪಿಸಿಯ 6 ಸದಸ್ಯರು 3 ದಿನಗಳ ಕಾಲ ನಡೆಸಿದ ಸಭೆಯಲ್ಲಿ ರೆಪೋ ದರ ಯಥಾಸ್ಥಿತಿಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತದ ನಿರ್ಧಾರ ಕೈಗೊಂಡರೆನ್ನಲಾಗಿದೆ. ಕಳೆದ ಮೇ ತಿಂಗಳಿಂದೀಚೆ ರೆಪೋ ದರವನ್ನು ಸತತವಾಗಿ ಏರಿಸುತ್ತಾ ಬರಲಾಗಿದೆ. ಈ ಅವಧಿಯಲ್ಲಿ 250 ಬೇಸಿಸ್ ಪಾಯಿಂಟ್​ಗಳಷ್ಟು ಏರಿಕೆ ಮಾಡಲಾಗಿದೆ. ಶೇ. 7ಕ್ಕಿಂತ ಹೆಚ್ಚು ಇದ್ದ ಹಣದುಬ್ಬರ ಏಪ್ರಿಲ್ ತಿಂಗಳಲ್ಲಿ ಶೇ. 4.7ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ರೆಪೋ ದರದ ಏರಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಇದನ್ನೂ ಓದಿ: India Born CEO Ivan’s Death: ಜಾನಿ ವಾಕರ್ ರೂವಾರಿ ಮರಣ; ವಿಶ್ವದ ಅತಿದೊಡ್ಡ ಮದ್ಯಕಂಪನಿ ಡಿಯಾಜೀಯೋದ ಸಿಇಒ ಭಾರತ ಸಂಜಾತ ಇವಾನ್ ಮೆನಜೆಸ್ ನಿಧನ

ಏನಿದು ರೆಪೋ ದರ?

ರೆಪೋ ದರ ಎಂಬುದು ಕಮರ್ಷಿಯಲ್ ಬ್ಯಾಂಕುಗಳು ಆರ್​ಬಿಐನಿಂದ ಪಡೆಯುವ ಸಾಲಕ್ಕೆ ತೆರಬೇಕಾದ ಬಡ್ಡಿ ದರ. ಇದರಲ್ಲಿ ಹೆಚ್ಚಳವಾದರೆ ಬ್ಯಾಂಕುಗಳಲ್ಲಿನ ಸಾಲದ ಮೇಲಿನ ಬಡ್ಡಿಯೂ ಹೆಚ್ಚಾಗಬಹುದು. ಇನ್ನು, ರಿವರ್ಸ್ ರಿಪೋ ಎಂಬುದು ಕಮರ್ಷಿಯಲ್ ಬ್ಯಾಂಕುಗಳು ಆರ್​ಬಿಐನಲ್ಲಿ ಇಡುವ ಠೇವಣಿಗಳಿಗೆ ಸಿಗುವ ಬಡ್ಡಿ ದರ.

ಈ ಹಣಕಾಸು ವರ್ಷದಲ್ಲಿ, ಅಂದರೆ 2023-24ರ ವರ್ಷದಲ್ಲಿ ಭಾರತದಲ್ಲಿ ಹಣದುಬ್ಬರ ಶೇ. 5.1ರಷ್ಟು ಇರಬಹುದು ಎಂದು ಆರ್​ಬಿಐ ಅಂದಾಜು ಮಾಡಿದೆ. ಇದು ಆರ್​ಬಿಐನ ಹಣದುಬ್ಬರ ತಾಳಿಕೆ ಮಿತಿಯೊಳಗೆ ಇದೆಯಾದರೂ ಮುಂಗಾರು ಮಳೆ ಸರಿಯಾಗಿ ಆಗದೇ ಹೋದರೆ ಹಣದುಬ್ಬರ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ ಎನ್ನಲಾಗಿದೆ. ಇನ್ನು, ಆರ್​​ಬಿಐನ ಮುಂದಿನ ಮಾನಿಟರಿ ಪಾಲಿಸಿ ಕಮಿಟಿ ಸಭೆ 2023 ಆಗಸ್ಟ್ 8ರಿಂದ 10ರವರೆಗೂ ನಡೆಯಲಿದೆ.

ಇದನ್ನೂ ಓದಿ: Sandesara Brothers: ಭಾರತದಲ್ಲಿ ವಂಚಕರು, ನೈಜೀರಿಯಾದಲ್ಲಿ ಹೀರೋಗಳು… 14,000 ಕೋಟಿ ಪಂಗನಾಮಿ ಹಾಕಿ ಪರಾರಿಯಾದ ಸಂದೇಸರ ಸಹೋದರರ ಕರ್ಮಕಾಂಡ

ಗರಿಗೆದರಿದ ಷೇರುಮಾರುಕಟ್ಟೆಗಳು

ಇಂದು ಆರ್​ಬಿಐ ಎಂಪಿಸಿ ಸಭೆಯ ನಿರ್ಧಾರಗಳು ಪ್ರಕಟವಾಗುವ ಮುನ್ನ ಷೇರುಪೇಟೆ ಗರಿಗೆದರಿತ್ತು. ನಿನ್ನೆ ಜೂನ್ 6ರಂದು ಸೆನ್ಸೆಕ್ಸ್ ಸೂಚ್ಯಂಕ 63,000 ಅಂಕಗಳ ಮಟ್ಟಕ್ಕೆ ಹೋಗಿತ್ತು. ಇಂದೂ ಕೂಡ 300 ಅಂಕಗಳಷ್ಟು ಹೆಚ್ಚಿಗೆ ಆಗಿತ್ತು. ಇತಿಹಾಸದಲ್ಲೇ ಮೊದಲ ಬಾರಿಗೆ ಸೆನ್ಸೆಕ್ಸ್ ಈ ಮಟ್ಟ ಮುಟ್ಟಿದ್ದು. ಇನ್ನು, ನಿಫ್ಟಿ50 ಸೂಚ್ಯಂಕ ಕಳೆದ ಬಾರಿಯ ಆರ್​ಬಿಐ ಎಂಪಿಸಿ ಸಭೆಯಲ್ಲಿದ್ದುದಕ್ಕಿಂತ ಈ ಬಾರಿ 1,000 ಅಂಕಗಳನ್ನು ಹೆಚ್ಚು ಮಾಡಿಕೊಂಡಿರುವುದು ವಿಶೇಷ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:20 am, Thu, 8 June 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ