AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm crisis: ಪೇಟಿಎಂ ವ್ಯಾಲಟ್ ವ್ಯವಹಾರ ಖರೀದಿಸಲು ಮುಂದಾದರಾ ಮುಕೇಶ್ ಅಂಬಾನಿ; ಇಲ್ಲಿದೆ ಜಿಯೋ ಫೈನಾನ್ಷಿಯಲ್ ಸರ್ವಿಸಸ್ ನೀಡಿದ ಹೇಳಿಕೆ

Jio Financial Services statement: ಪೇಟಿಎಂನ ವ್ಯಾಲಟ್ ಬಿಸಿನೆಸ್ ಅನ್ನು ಖರೀದಿಸಲು ಎಚ್​ಡಿಎಫ್​ಸಿ ಬ್ಯಾಂಕ್, ಜಿಯೋ ಫೈನಾನ್ಷಿಯಲ್ ಸರ್ವಿಸಸ್ ಮೊದಲಾದ ಸಂಸ್ಥೆಗಳು ಮುಂದಾಗಿರುವ ಸುದ್ದಿ ಇದೆ. ಆದರೆ, ಮುಕೇಶ್ ಅಂಬಾನಿ ಮಾಲಕತ್ವದ ಜಿಯೋ ಫೈನಾನ್ಷಿಯಲ್ ಈ ವರದಿಯನ್ನು ತಳ್ಳಿಹಾಕಿದೆ. ಅಂಥದ್ದೇನಾದರೂ ಬೆಳವಣಿಗೆ ಇದ್ದರೆ ಅದನ್ನು ಬಹಿರಂಗಪಡಿಸುವುದು ತಮ್ಮ ಹೊಣೆಗಾರಿಕೆ ಎಂದು ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ಜಿಯೊ ತಿಳಿಸಿದೆ.

Paytm crisis: ಪೇಟಿಎಂ ವ್ಯಾಲಟ್ ವ್ಯವಹಾರ ಖರೀದಿಸಲು ಮುಂದಾದರಾ ಮುಕೇಶ್ ಅಂಬಾನಿ; ಇಲ್ಲಿದೆ ಜಿಯೋ ಫೈನಾನ್ಷಿಯಲ್ ಸರ್ವಿಸಸ್ ನೀಡಿದ ಹೇಳಿಕೆ
ಮುಕೇಶ್ ಅಂಬಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 06, 2024 | 3:06 PM

Share

ಮುಂಬೈ, ಫೆಬ್ರುವರಿ 6: ಆರ್​ಬಿಐನಿಂದ ನಿರ್ಬಂಧಕ್ಕೊಳಗಾಗಿ ಪೇಟಿಎಂ ಸಂಕಷ್ಟದಲ್ಲಿರುವಂತೆಯೇ ಮುಕೇಶ್ ಅಂಬಾನಿ ಹೆಸರು ಮುನ್ನೆಲೆಗೆ ಬಂದಿದೆ. ವರದಿಗಳ ಪ್ರಕಾರ, ಪೇಟಿಎಂನ ವ್ಯಾಲಟ್ ವ್ಯವಹಾರಗಳನ್ನು (Paytm’s wallet business) ಖರೀದಿಸಲು ಕೆಲ ಸಂಸ್ಥೆಗಳು ಕಣ್ಣು ಹಾಕಿದ್ದು, ಅದರಲ್ಲಿ ಜಿಯೋ ಫೈನಾನ್ಷಿಯಲ್ ಸರ್ವಿಸಸ್ ಕೂಡ ಒಂದು ಎಂದು ಹೇಳಲಾಗುತ್ತಿದೆ. ಆದರೆ, ಮುಕೇಶ್ ಅಂಬಾನಿ ಮಾಲಕತ್ವದ ಜಿಯೋ ಫೈನಾನ್ಷಿಯಲ್ ಸರ್ವಿಸಸ್ (Jio Financial Services) ಈ ವರದಿಯನ್ನು ತಳ್ಳಿಹಾಕಿದ್ದು, ತಾನು ಅಂಥ ಪ್ರಯತ್ನಕ್ಕೆ ಕೈಹಾಕಿಲ್ಲ ಎಂದು ಸ್ಪಷ್ಟಪಡಿಸಿದೆ.

ಪೇಟಿಎಂನ ವ್ಯಾಲಟ್ ಬಿಸಿನೆಸ್ ಖರೀದಿಸಲು ಮುಂದಾಗಿರುವ ಪ್ರಮುಖ ಕಂಪನಿಗಳಲ್ಲಿ ಎಚ್​ಡಿಎಫ್​ಸಿ ಬ್ಯಾಂಕ್ ಮತ್ತು ಜಿಯೋ ಫೈನಾನ್ಷಿಯಲ್ ಸರ್ವಿಸಸ್ ಸೇರಿವೆ. ಬ್ಲ್ಯಾಕ್​ರಾಕ್ ಫೈನಾನ್ಷಿಯಲ್ ಮ್ಯಾನೇಜ್ಮೆಂಟ್ ಸಂಸ್ಥೆ ಜೊತೆ ಸೇರಿ ಸಹಭಾಗಿತ್ವದಲ್ಲಿ ಮ್ಯುಚುವಲ್ ಫಂಡ್ ವ್ಯವಹಾರ ನಡೆಸುತ್ತೇವೆ ಎಂದು ಜಿಯೋ ಫೈನಾನ್ಷಿಯಲ್ ಸರ್ವಿಸಸ್ ಅನುಮೋದನೆಗಾಗಿ ಅರ್ಜಿಯನ್ನೂ ಹಾಕಿದೆ. ಈ ಎರಡೂ ಸಂಸ್ಥೆಗಳು ತಲಾ 150 ಮಿಲಿಯನ್ ಡಾಲರ್ ಹೂಡಿಕೆ ಮಾಡಲು ಯೋಜಿಸಿವೆ ಎಂದು ದಿ ಹಿಂದೂ ಬಿಸಿನೆಸ್ ಲೈನ್ ಪತ್ರಿಕೆಯಲ್ಲಿ ವರದಿಯೊಂದು ಪ್ರಕಟವಾಗಿದೆ.

‘ಕೆವೈಸಿ ಸಂಬಂಧಿತ ಸಮಸ್ಯೆಗಳಿಂದ ಬಾಧಿತವಾಗಿರುವ ಪೇಟಿಎಂ, 2022ಕ್ಕೆ ಮುನ್ನ ವ್ಯಾಲಟ್ ವ್ಯವಹಾರದಲ್ಲಿ ಹೊಂದಿದ್ದ ಹುಮ್ಮಸ್ಸು ಈಗ ಹೊಂದಿಲ್ಲ. ಜಿಯೋ ಮೌಲ್ಯಮಾಪನ ಸಮಾಧಾನಕರವಾಗಿದ್ದರೆ ಇಷ್ಟರಲ್ಲಾಗಲೇ ಮಾತುಕತೆ ಫಲಪ್ರದವಾಗಿರುತ್ತಿತ್ತು,’ ಎಂದು ಆ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಪಾತಾಳಕ್ಕೆ ಕುಸಿದ ಪೇಟಿಎಂ ಷೇರು ಖರೀದಿಸಿದ ಮಾರ್ಗನ್ ಸ್ಟಾನ್ಲೀ ನಡೆಯ ಮರ್ಮವೇನು? ನೆಟ್ಟಿಗರ ರಿಯಾಕ್ಷನ್ಸ್ ಇವು?

ಈ ವರದಿ ಬಂದ ಬೆನ್ನಲ್ಲೇ ಜಿಯೋ ಫೈನಾನ್ಷಿಯಲ್ ಸರ್ವಿಸಸ್ ಮತ್ತು ಒನ್97 ಕಮ್ಯೂನಿಕೇಶನ್ಸ್ (ಪೇಟಿಂ) ಸಂಸ್ಥೆಗಳೆರಡರ ಷೇರುಬೆಲೆ ಫೆ. 6, ಮಂಗಳವಾರದಂದು ಏರಿಕೆ ಕಂಡಿದ್ದು ವಿಶೇಷ. ಆದರೆ, ಜಿಯೋ ಫೈನಾನ್ಷಿಯಲ್ ಸರ್ವಿಸಸ್ ಈ ವರದಿಯ ವಿಷಯಗಳನ್ನು ತಳ್ಳಿಹಾಕಿದೆ.

ತನ್ನ ಬಾಧ್ಯತೆಗಳಿಗೆ ಅನುಗುಣವಾಗಿ ಈ ಹಿಂದೆಯೂ ಬಹಿರಂಗಪಡಿಸಿದ್ದೆವೆ, ಈಗಲೂ ಬಹಿರಂಗಪಡಿಸುವುದನ್ನು ಮುಂದುವರಿಸುತ್ತೇವೆ ಎಂದು ರಿಲಾಯನ್ಸ್ ಗ್ರೂಪ್​ಗೆ ಸೇರಿದ ಜಿಯೋ ಫೈನಾನ್ಷಿಯಲ್ ಸರ್ವಿಸಸ್ ತಿಳಿಸಿದೆ.

ಪೇಟಿಎಂ ಬ್ಯಾಂಕ್​ಗೆ ನಿರ್ಬಂಧ

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಆರ್​ಬಿಐ ನಿರ್ಬಂಧ ಹಾಕಿದೆ. ಅಂದರೆ ಪೇಮೆಂಟ್ಸ್ ಬ್ಯಾಂಕ್ ವ್ಯವಹಾರ ಮುಗಿದಂತೆ. ಯಾವುದೇ ಹೊಸ ಡೆಪಾಸಿಟ್ ಅನ್ನು ಅದು ಪಡೆಯುವಂತಿಲ್ಲ. ಅದರಲ್ಲಿ ಖಾತೆ ಹೊಂದಿರುವವರು ತಮ್ಮ ಹಣವನ್ನು ಮರಳಿ ಪಡೆದುಕೊಳ್ಳಬಹುದು, ಅಥವಾ ಬಳಕೆ ಮಾಡಬಹುದು. ಫೆಬ್ರುವರಿ 29ರವರೆಗೂ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಗಡುವು ಕೊಡಲಾಗಿದೆ. ಪೇಟಿಎಂನ ಯಾವುದೇ ಚಟುವಟಿಕೆ ಅಥವಾ ವಹಿವಾಟಿನಲ್ಲಿ ಪೇಮೆಂಟ್ಸ್ ಬ್ಯಾಂಕ್ ಪಾತ್ರ ಇರುವಂತಿಲ್ಲ. ನೋಡಲ್ ಅಕೌಂಟ್​ಗಳನ್ನು ಅಲ್ಲಿಂದ ತೆರವುಗೊಳಿಸಬೇಕು.

ಇದನ್ನೂ ಓದಿ: ಇಂಡಸ್​ಇಂಡ್ ಷೇರು ಖರೀದಿಸಲು ಎಚ್​ಡಿಎಫ್​ಸಿಗೆ ಸಿಕ್ತು ಆರ್​ಬಿಐ ಅನುಮತಿ; ಷೇರುದಾರರದ್ದು ಇಲ್ಲವಾ ಸಮ್ಮತಿ?

ಈಗ ಪೇಟಿಎಂ ತನ್ನ ಯುಪಿಐ ಮತ್ತು ವ್ಯಾಲಟ್ ಸೇವೆಗೆ ಬೇರೆ ಬ್ಯಾಂಕ್ ಜೊತೆ ಸಹಭಾಗಿತ್ವ ಮಾಡಿಕೊಳ್ಳಬೇಕಾಗುತ್ತದೆ. ಇದಾದ ಬಳಿಕ ಪೇಮೆಂಟ್ಸ್ ಬ್ಯಾಂಕ್ ಬಿಟ್ಟರೆ ಪೇಟಿಎಂ ಉಳಿದೆಲ್ಲಾ ಚಟುವಟಿಕೆಗಳು ಮತ್ತು ಸೇವೆಗಳು ಯಥಾಪ್ರಕಾರ ಮುಂದುವರಿಯುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ