AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KYC deadline extension: ಕೆವೈಸಿ ಅಪ್​ಡೇಟ್​ಗಾಗಿ 2022ರ ಮಾರ್ಚ್​ ತನಕ ಅವಧಿ ವಿಸ್ತರಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಬ್ಯಾಂಕ್ ಗ್ರಾಹಕರ ಕೆವೈಸಿ ಅಪ್​ಡೇಟ್ ಮಾಡುವುದಕ್ಕೆ ಗಡುವನ್ನು 2022ರ ಮಾರ್ಚ್​ಗೆ ವಿಸ್ತರಣೆ ಮಾಡಿದೆ.

KYC deadline extension: ಕೆವೈಸಿ ಅಪ್​ಡೇಟ್​ಗಾಗಿ 2022ರ ಮಾರ್ಚ್​ ತನಕ ಅವಧಿ ವಿಸ್ತರಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Dec 30, 2021 | 5:05 PM

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ ಬ್ಯಾಂಕ್‌ಗಳಲ್ಲಿ ಪೀರಿಯಾಡಿಕ್ KYC (ನೋ ಯುವರ್ ಕಸ್ಟಮರ್) ಅಪ್‌ಡೇಟ್‌ಗಾಗಿ ಮಾರ್ಚ್ 31, 2022ರ ವರೆಗೆ ಮೂರು ತಿಂಗಳ ಕಾಲ ಗಡುವನ್ನು ವಿಸ್ತರಿಸಿದೆ. ಕೊವಿಡ್-19ನ ಹೊಸ ರೂಪಾಂತರದಿಂದಾಗಿ (ವೇರಿಯಂಟ್) ಪ್ರಚಲಿತದಲ್ಲಿರುವ ಅನಿಶ್ಚಿತತೆ ದೃಷ್ಟಿಯಿಂದ ವಿಸ್ತರಣೆಯನ್ನು ನೀಡಲಾಗಿದೆ, ಎಂದು ಆರ್​ಬಿಐ ಹೇಳಿದೆ.

ಈ ವರ್ಷದ ಮೇ ತಿಂಗಳಲ್ಲಿ ದೇಶದಲ್ಲಿ ಕೊವಿಡ್-19ನ ಎರಡನೇ ಅಲೆ ಮತ್ತು ವಿವಿಧ ರಾಜ್ಯಗಳಲ್ಲಿ ಅದರ ಕಾರಣಕ್ಕೆ ಹೇರಿದ್ದ ನಿರ್ಬಂಧಗಳ ನಡುವೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಬ್ಯಾಂಕ್​ಗಳು ಮತ್ತು ಇತರ ನಿಯಂತ್ರಿತ ಹಣಕಾಸು ಸಂಸ್ಥೆಗಳನ್ನು ವರ್ಷಾಂತ್ಯದವರೆಗೆ ಕೆವೈಸಿ ಅಪ್​ಡೇಟ್ ಮಾಡಲು​ ವಿಫಲವಾದ ಗ್ರಾಹಕರ ವಿರುದ್ಧ ಯಾವುದೇ ದಂಡ ಹಾಕುವ ಕ್ರಮಕ್ಕೆ ಮುಂದಾಗದಂತೆ ನಿರ್ದೇಶಿಸಿದೆ.

ಪ್ರಕಟಣೆಯ ಭಾಗವಾಗಿ ಮಾಲೀಕತ್ವ ಸಂಸ್ಥೆಗಳು, ಅಧಿಕೃತ ಸಹಿದಾರರು ಮತ್ತು ಕಾನೂನು ಸಂಸ್ಥೆಗಳ ಲಾಭದಾಯಕ ಮಾಲೀಕರಂತಹ ಹೊಸ ವರ್ಗದ ಗ್ರಾಹಕರಿಗೆ ವಿಡಿಯೋ ಕೆವೈಸಿ ಅಥವಾ V-CIP (ವಿಡಿಯೋ ಆಧಾರಿತ ಗ್ರಾಹಕ ಗುರುತಿಸುವಿಕೆ ಪ್ರಕ್ರಿಯೆ) ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಬ್ಯಾಂಕ್ ನಿರ್ಧರಿಸಿದೆ.

ಇದನ್ನೂ ಓದಿ: ಸರ್ಕಾರದ ವ್ಯವಹಾರಗಳನ್ನು ನಡೆಸಲು ಪೇಮೆಂಟ್ಸ್ ಬ್ಯಾಂಕ್​ಗಳು, ಸಣ್ಣ ಹಣಕಾಸು ಬ್ಯಾಂಕ್​ಗಳಿಗೆ ಆರ್​ಬಿಐ ಅವಕಾಶ

Published On - 5:04 pm, Thu, 30 December 21

ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು