AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KYC deadline extension: ಕೆವೈಸಿ ಅಪ್​ಡೇಟ್​ಗಾಗಿ 2022ರ ಮಾರ್ಚ್​ ತನಕ ಅವಧಿ ವಿಸ್ತರಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಬ್ಯಾಂಕ್ ಗ್ರಾಹಕರ ಕೆವೈಸಿ ಅಪ್​ಡೇಟ್ ಮಾಡುವುದಕ್ಕೆ ಗಡುವನ್ನು 2022ರ ಮಾರ್ಚ್​ಗೆ ವಿಸ್ತರಣೆ ಮಾಡಿದೆ.

KYC deadline extension: ಕೆವೈಸಿ ಅಪ್​ಡೇಟ್​ಗಾಗಿ 2022ರ ಮಾರ್ಚ್​ ತನಕ ಅವಧಿ ವಿಸ್ತರಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 30, 2021 | 5:05 PM

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ ಬ್ಯಾಂಕ್‌ಗಳಲ್ಲಿ ಪೀರಿಯಾಡಿಕ್ KYC (ನೋ ಯುವರ್ ಕಸ್ಟಮರ್) ಅಪ್‌ಡೇಟ್‌ಗಾಗಿ ಮಾರ್ಚ್ 31, 2022ರ ವರೆಗೆ ಮೂರು ತಿಂಗಳ ಕಾಲ ಗಡುವನ್ನು ವಿಸ್ತರಿಸಿದೆ. ಕೊವಿಡ್-19ನ ಹೊಸ ರೂಪಾಂತರದಿಂದಾಗಿ (ವೇರಿಯಂಟ್) ಪ್ರಚಲಿತದಲ್ಲಿರುವ ಅನಿಶ್ಚಿತತೆ ದೃಷ್ಟಿಯಿಂದ ವಿಸ್ತರಣೆಯನ್ನು ನೀಡಲಾಗಿದೆ, ಎಂದು ಆರ್​ಬಿಐ ಹೇಳಿದೆ.

ಈ ವರ್ಷದ ಮೇ ತಿಂಗಳಲ್ಲಿ ದೇಶದಲ್ಲಿ ಕೊವಿಡ್-19ನ ಎರಡನೇ ಅಲೆ ಮತ್ತು ವಿವಿಧ ರಾಜ್ಯಗಳಲ್ಲಿ ಅದರ ಕಾರಣಕ್ಕೆ ಹೇರಿದ್ದ ನಿರ್ಬಂಧಗಳ ನಡುವೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಬ್ಯಾಂಕ್​ಗಳು ಮತ್ತು ಇತರ ನಿಯಂತ್ರಿತ ಹಣಕಾಸು ಸಂಸ್ಥೆಗಳನ್ನು ವರ್ಷಾಂತ್ಯದವರೆಗೆ ಕೆವೈಸಿ ಅಪ್​ಡೇಟ್ ಮಾಡಲು​ ವಿಫಲವಾದ ಗ್ರಾಹಕರ ವಿರುದ್ಧ ಯಾವುದೇ ದಂಡ ಹಾಕುವ ಕ್ರಮಕ್ಕೆ ಮುಂದಾಗದಂತೆ ನಿರ್ದೇಶಿಸಿದೆ.

ಪ್ರಕಟಣೆಯ ಭಾಗವಾಗಿ ಮಾಲೀಕತ್ವ ಸಂಸ್ಥೆಗಳು, ಅಧಿಕೃತ ಸಹಿದಾರರು ಮತ್ತು ಕಾನೂನು ಸಂಸ್ಥೆಗಳ ಲಾಭದಾಯಕ ಮಾಲೀಕರಂತಹ ಹೊಸ ವರ್ಗದ ಗ್ರಾಹಕರಿಗೆ ವಿಡಿಯೋ ಕೆವೈಸಿ ಅಥವಾ V-CIP (ವಿಡಿಯೋ ಆಧಾರಿತ ಗ್ರಾಹಕ ಗುರುತಿಸುವಿಕೆ ಪ್ರಕ್ರಿಯೆ) ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಬ್ಯಾಂಕ್ ನಿರ್ಧರಿಸಿದೆ.

ಇದನ್ನೂ ಓದಿ: ಸರ್ಕಾರದ ವ್ಯವಹಾರಗಳನ್ನು ನಡೆಸಲು ಪೇಮೆಂಟ್ಸ್ ಬ್ಯಾಂಕ್​ಗಳು, ಸಣ್ಣ ಹಣಕಾಸು ಬ್ಯಾಂಕ್​ಗಳಿಗೆ ಆರ್​ಬಿಐ ಅವಕಾಶ

Published On - 5:04 pm, Thu, 30 December 21

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು