AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KYC deadline extension: ಕೆವೈಸಿ ಅಪ್​ಡೇಟ್​ಗಾಗಿ 2022ರ ಮಾರ್ಚ್​ ತನಕ ಅವಧಿ ವಿಸ್ತರಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಬ್ಯಾಂಕ್ ಗ್ರಾಹಕರ ಕೆವೈಸಿ ಅಪ್​ಡೇಟ್ ಮಾಡುವುದಕ್ಕೆ ಗಡುವನ್ನು 2022ರ ಮಾರ್ಚ್​ಗೆ ವಿಸ್ತರಣೆ ಮಾಡಿದೆ.

KYC deadline extension: ಕೆವೈಸಿ ಅಪ್​ಡೇಟ್​ಗಾಗಿ 2022ರ ಮಾರ್ಚ್​ ತನಕ ಅವಧಿ ವಿಸ್ತರಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 30, 2021 | 5:05 PM

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ ಬ್ಯಾಂಕ್‌ಗಳಲ್ಲಿ ಪೀರಿಯಾಡಿಕ್ KYC (ನೋ ಯುವರ್ ಕಸ್ಟಮರ್) ಅಪ್‌ಡೇಟ್‌ಗಾಗಿ ಮಾರ್ಚ್ 31, 2022ರ ವರೆಗೆ ಮೂರು ತಿಂಗಳ ಕಾಲ ಗಡುವನ್ನು ವಿಸ್ತರಿಸಿದೆ. ಕೊವಿಡ್-19ನ ಹೊಸ ರೂಪಾಂತರದಿಂದಾಗಿ (ವೇರಿಯಂಟ್) ಪ್ರಚಲಿತದಲ್ಲಿರುವ ಅನಿಶ್ಚಿತತೆ ದೃಷ್ಟಿಯಿಂದ ವಿಸ್ತರಣೆಯನ್ನು ನೀಡಲಾಗಿದೆ, ಎಂದು ಆರ್​ಬಿಐ ಹೇಳಿದೆ.

ಈ ವರ್ಷದ ಮೇ ತಿಂಗಳಲ್ಲಿ ದೇಶದಲ್ಲಿ ಕೊವಿಡ್-19ನ ಎರಡನೇ ಅಲೆ ಮತ್ತು ವಿವಿಧ ರಾಜ್ಯಗಳಲ್ಲಿ ಅದರ ಕಾರಣಕ್ಕೆ ಹೇರಿದ್ದ ನಿರ್ಬಂಧಗಳ ನಡುವೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಬ್ಯಾಂಕ್​ಗಳು ಮತ್ತು ಇತರ ನಿಯಂತ್ರಿತ ಹಣಕಾಸು ಸಂಸ್ಥೆಗಳನ್ನು ವರ್ಷಾಂತ್ಯದವರೆಗೆ ಕೆವೈಸಿ ಅಪ್​ಡೇಟ್ ಮಾಡಲು​ ವಿಫಲವಾದ ಗ್ರಾಹಕರ ವಿರುದ್ಧ ಯಾವುದೇ ದಂಡ ಹಾಕುವ ಕ್ರಮಕ್ಕೆ ಮುಂದಾಗದಂತೆ ನಿರ್ದೇಶಿಸಿದೆ.

ಪ್ರಕಟಣೆಯ ಭಾಗವಾಗಿ ಮಾಲೀಕತ್ವ ಸಂಸ್ಥೆಗಳು, ಅಧಿಕೃತ ಸಹಿದಾರರು ಮತ್ತು ಕಾನೂನು ಸಂಸ್ಥೆಗಳ ಲಾಭದಾಯಕ ಮಾಲೀಕರಂತಹ ಹೊಸ ವರ್ಗದ ಗ್ರಾಹಕರಿಗೆ ವಿಡಿಯೋ ಕೆವೈಸಿ ಅಥವಾ V-CIP (ವಿಡಿಯೋ ಆಧಾರಿತ ಗ್ರಾಹಕ ಗುರುತಿಸುವಿಕೆ ಪ್ರಕ್ರಿಯೆ) ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಬ್ಯಾಂಕ್ ನಿರ್ಧರಿಸಿದೆ.

ಇದನ್ನೂ ಓದಿ: ಸರ್ಕಾರದ ವ್ಯವಹಾರಗಳನ್ನು ನಡೆಸಲು ಪೇಮೆಂಟ್ಸ್ ಬ್ಯಾಂಕ್​ಗಳು, ಸಣ್ಣ ಹಣಕಾಸು ಬ್ಯಾಂಕ್​ಗಳಿಗೆ ಆರ್​ಬಿಐ ಅವಕಾಶ

Published On - 5:04 pm, Thu, 30 December 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ