AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manappuram Finance: ಮಣಪ್ಪುರಂ ಫೈನಾನ್ಸ್​ಗೆ 17.6 ಲಕ್ಷ ರೂಪಾಯಿ ದಂಡ ವಿಧಿಸಿದ ಆರ್​ಬಿಐ

ನಿಯಮಾವಳಿಯನ್ನು ಅನುಸರಿಸದ ಕಾರಣಕ್ಕೆ ಮಣಪ್ಪುರಂ ಫೈನಾನ್ಸ್​ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು 17.6 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

Manappuram Finance: ಮಣಪ್ಪುರಂ ಫೈನಾನ್ಸ್​ಗೆ 17.6 ಲಕ್ಷ ರೂಪಾಯಿ ದಂಡ ವಿಧಿಸಿದ ಆರ್​ಬಿಐ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Apr 18, 2022 | 6:48 PM

ಕೆಲವು ನಿಬಂಧನೆಗಳನ್ನು ಅನುಸರಿಸದಿದ್ದ ಕಾರಣಕ್ಕಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಏಪ್ರಿಲ್ 18ರ ಸೋಮವಾರದಂದು ಮಣಪ್ಪುರಂ ಫೈನಾನ್ಸ್‌ಗೆ 17.6 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಪ್ರಿಪೇಯ್ಡ್ ಪಾವತಿ ಉಪಕರಣಗಳ ವಿತರಣೆ ಮತ್ತು ಕಾರ್ಯಾಚರಣೆಗೆ ಸಂಬಂಧಿಸಿದಂತೆ (PPI) ಹಾಗೂ ನಿಮ್ಮ ಗ್ರಾಹಕರನ್ನು ತಿಳಿಯಿರಿ (KYC) ನಿಯಮಗಳು ಉಲ್ಲಂಘನೆಯಾಗಿದೆ ಎಂದು ಆರ್​ಬಿಐ ಹೇಳಿಕೆಯಲ್ಲಿ ತಿಳಿಸಿದೆ. “ಪಾವತಿ ಮತ್ತು ಸೆಟ್ಲ್‌ಮೆಂಟ್ ಸಿಸ್ಟಮ್ಸ್ ಆಕ್ಟ್, 2007ರ ಸೆಕ್ಷನ್ 30ರ ಅಡಿಯಲ್ಲಿ ಆರ್‌ಬಿಐಗೆ ಇರುವ ಅಧಿಕಾರ ವ್ಯಾಪ್ತಿಯನ್ನು ಬಳಸಿಕೊಂಡು ದಂಡವನ್ನು ವಿಧಿಸಲಾಗಿದೆ,” ಎಂದು ಕೇಂದ್ರ ಬ್ಯಾಂಕ್​ನಿಂದ ಸೇರಿಸಲಾಗಿದೆ.

ಈ ಕ್ರಮವು ನಿಯಂತ್ರಕ ಅನುಸರಣೆಯಲ್ಲಿನ ನ್ಯೂನತೆಗಳನ್ನು ಆಧರಿಸಿದೆಯೇ ವಿನಾ ಮತ್ತು ತನ್ನ ಗ್ರಾಹಕರೊಂದಿಗೆ ಮಣಪ್ಪುರಂ ಮಾಡಿಕೊಂಡಿರುವ ಯಾವುದೇ ವಹಿವಾಟು ಅಥವಾ ಒಪ್ಪಂದದ ಸಿಂಧುತ್ವದ ಮೇಲೆ ತೆಗೆದುಕೊಂಡ ಕ್ರಮ ಅಲ್ಲ ಎಂದು ಆರ್‌ಬಿಐ ಹೇಳಿದೆ. KYC ಮತ್ತು ಸಣ್ಣ PPI ಅವಶ್ಯಕತೆಗಳ ಕುರಿತು ಆರ್​ಬಿಐ ಹೊರಡಿಸಿದ ನಿರ್ದೇಶನಗಳನ್ನು ಮಣಪ್ಪುರಂ ಫೈನಾನ್ಸ್ ಅನುಸರಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದೆ ಎಂದು ಆರ್​ಬಿಐ ಹೇಳಿದೆ. ಅದರಂತೆ, ಕೇಂದ್ರ ಬ್ಯಾಂಕ್​ನ ನಿರ್ದೇಶನಗಳನ್ನು ಅನುಸರಿಸದಿದ್ದ ಕಾರಣಕ್ಕಾಗಿ ದಂಡವನ್ನು ಏಕೆ ವಿಧಿಸಬಾರದು ಎಂಬುದಕ್ಕೆ ಸಮಜಾಯಿಷಿಯನ್ನು ನೀಡಲು ಸಲಹೆ ನೀಡಿ, ನೋಟಿಸ್ ಕೊಡಲಾಗಿತ್ತು.

ಮಣಪ್ಪುರಂ ಫೈನಾನ್ಸ್ ಪ್ರತಿಕ್ರಿಯೆಯನ್ನು ಪರಿಗಣಿಸಿ ಮತ್ತು ಅದನ್ನು ವೈಯಕ್ತಿಕ ವಿಚಾರಣೆ ನೀಡಿದ ನಂತರ, ಆರ್​ಬಿಐ ನಿರ್ದೇಶನಗಳನ್ನು ಅನುಸರಿಸದಿರುವ ಮೇಲಿನ ಆರೋಪವು ದೃಢೀಕರಿಸಲ್ಪಟ್ಟಿದೆ ಮತ್ತು ವಿತ್ತೀಯ ದಂಡವನ್ನು ವಿಧಿಸಲು ಸಮರ್ಥವಾಗಿದೆ ಎಂದು ತೀರ್ಮಾನಿಸಲಾಗಿದೆ ಎಂದು ಆರ್​ಬಿಐ ಹೇಳಿದೆ.

ಇದನ್ನೂ ಓದಿ: Stock Market Timings: ಏಪ್ರಿಲ್ 18ರಿಂದ ಬದಲಾಗಲಿದೆ ಆರ್​ಬಿಐ ನಿಯಂತ್ರಿಸುವ ಎಲ್ಲ ಮಾರುಕಟ್ಟೆಗಳ ವಹಿವಾಟಿನ ಸಮಯ

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?