AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manappuram Finance: ಮಣಪ್ಪುರಂ ಫೈನಾನ್ಸ್​ಗೆ 17.6 ಲಕ್ಷ ರೂಪಾಯಿ ದಂಡ ವಿಧಿಸಿದ ಆರ್​ಬಿಐ

ನಿಯಮಾವಳಿಯನ್ನು ಅನುಸರಿಸದ ಕಾರಣಕ್ಕೆ ಮಣಪ್ಪುರಂ ಫೈನಾನ್ಸ್​ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು 17.6 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

Manappuram Finance: ಮಣಪ್ಪುರಂ ಫೈನಾನ್ಸ್​ಗೆ 17.6 ಲಕ್ಷ ರೂಪಾಯಿ ದಂಡ ವಿಧಿಸಿದ ಆರ್​ಬಿಐ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Apr 18, 2022 | 6:48 PM

Share

ಕೆಲವು ನಿಬಂಧನೆಗಳನ್ನು ಅನುಸರಿಸದಿದ್ದ ಕಾರಣಕ್ಕಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಏಪ್ರಿಲ್ 18ರ ಸೋಮವಾರದಂದು ಮಣಪ್ಪುರಂ ಫೈನಾನ್ಸ್‌ಗೆ 17.6 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಪ್ರಿಪೇಯ್ಡ್ ಪಾವತಿ ಉಪಕರಣಗಳ ವಿತರಣೆ ಮತ್ತು ಕಾರ್ಯಾಚರಣೆಗೆ ಸಂಬಂಧಿಸಿದಂತೆ (PPI) ಹಾಗೂ ನಿಮ್ಮ ಗ್ರಾಹಕರನ್ನು ತಿಳಿಯಿರಿ (KYC) ನಿಯಮಗಳು ಉಲ್ಲಂಘನೆಯಾಗಿದೆ ಎಂದು ಆರ್​ಬಿಐ ಹೇಳಿಕೆಯಲ್ಲಿ ತಿಳಿಸಿದೆ. “ಪಾವತಿ ಮತ್ತು ಸೆಟ್ಲ್‌ಮೆಂಟ್ ಸಿಸ್ಟಮ್ಸ್ ಆಕ್ಟ್, 2007ರ ಸೆಕ್ಷನ್ 30ರ ಅಡಿಯಲ್ಲಿ ಆರ್‌ಬಿಐಗೆ ಇರುವ ಅಧಿಕಾರ ವ್ಯಾಪ್ತಿಯನ್ನು ಬಳಸಿಕೊಂಡು ದಂಡವನ್ನು ವಿಧಿಸಲಾಗಿದೆ,” ಎಂದು ಕೇಂದ್ರ ಬ್ಯಾಂಕ್​ನಿಂದ ಸೇರಿಸಲಾಗಿದೆ.

ಈ ಕ್ರಮವು ನಿಯಂತ್ರಕ ಅನುಸರಣೆಯಲ್ಲಿನ ನ್ಯೂನತೆಗಳನ್ನು ಆಧರಿಸಿದೆಯೇ ವಿನಾ ಮತ್ತು ತನ್ನ ಗ್ರಾಹಕರೊಂದಿಗೆ ಮಣಪ್ಪುರಂ ಮಾಡಿಕೊಂಡಿರುವ ಯಾವುದೇ ವಹಿವಾಟು ಅಥವಾ ಒಪ್ಪಂದದ ಸಿಂಧುತ್ವದ ಮೇಲೆ ತೆಗೆದುಕೊಂಡ ಕ್ರಮ ಅಲ್ಲ ಎಂದು ಆರ್‌ಬಿಐ ಹೇಳಿದೆ. KYC ಮತ್ತು ಸಣ್ಣ PPI ಅವಶ್ಯಕತೆಗಳ ಕುರಿತು ಆರ್​ಬಿಐ ಹೊರಡಿಸಿದ ನಿರ್ದೇಶನಗಳನ್ನು ಮಣಪ್ಪುರಂ ಫೈನಾನ್ಸ್ ಅನುಸರಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದೆ ಎಂದು ಆರ್​ಬಿಐ ಹೇಳಿದೆ. ಅದರಂತೆ, ಕೇಂದ್ರ ಬ್ಯಾಂಕ್​ನ ನಿರ್ದೇಶನಗಳನ್ನು ಅನುಸರಿಸದಿದ್ದ ಕಾರಣಕ್ಕಾಗಿ ದಂಡವನ್ನು ಏಕೆ ವಿಧಿಸಬಾರದು ಎಂಬುದಕ್ಕೆ ಸಮಜಾಯಿಷಿಯನ್ನು ನೀಡಲು ಸಲಹೆ ನೀಡಿ, ನೋಟಿಸ್ ಕೊಡಲಾಗಿತ್ತು.

ಮಣಪ್ಪುರಂ ಫೈನಾನ್ಸ್ ಪ್ರತಿಕ್ರಿಯೆಯನ್ನು ಪರಿಗಣಿಸಿ ಮತ್ತು ಅದನ್ನು ವೈಯಕ್ತಿಕ ವಿಚಾರಣೆ ನೀಡಿದ ನಂತರ, ಆರ್​ಬಿಐ ನಿರ್ದೇಶನಗಳನ್ನು ಅನುಸರಿಸದಿರುವ ಮೇಲಿನ ಆರೋಪವು ದೃಢೀಕರಿಸಲ್ಪಟ್ಟಿದೆ ಮತ್ತು ವಿತ್ತೀಯ ದಂಡವನ್ನು ವಿಧಿಸಲು ಸಮರ್ಥವಾಗಿದೆ ಎಂದು ತೀರ್ಮಾನಿಸಲಾಗಿದೆ ಎಂದು ಆರ್​ಬಿಐ ಹೇಳಿದೆ.

ಇದನ್ನೂ ಓದಿ: Stock Market Timings: ಏಪ್ರಿಲ್ 18ರಿಂದ ಬದಲಾಗಲಿದೆ ಆರ್​ಬಿಐ ನಿಯಂತ್ರಿಸುವ ಎಲ್ಲ ಮಾರುಕಟ್ಟೆಗಳ ವಹಿವಾಟಿನ ಸಮಯ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ