AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಆರ್​ಬಿಐ ಎಂಪಿಸಿ ಸಭೆ; ಆಗಸ್ಟ್ 10ರಂದು ಪ್ರಮುಖ ಘೋಷಣೆಗಳು; ಬಡ್ಡಿದರ ಏರಿಸುತ್ತಾ ರಿಸರ್ವ್ ಬ್ಯಾಂಕ್?

RBI MPC Meeting: ಆರ್​ಬಿಐನ ಎಂಪಿಸಿ ಸಭೆ ಆಗಸ್ಟ್ 8ರಿಂದ 10ರವರೆಗೆ ನಡೆಯುತ್ತಿದ್ದು, ಬಡ್ಡಿದರ ಹೆಚ್ಚಿಸಬೇಕೋ ಬೇಡವೋ ಎಂದು ನಿರ್ಧರಿಸಲಾಗುತ್ತದೆ. ವರದಿಗಳ ಪ್ರಕಾರ ರೆಪೋ ದರ ಏರಿಕೆಯಾಗುವ ಸಾಧ್ಯತೆ ಕಡಿಮೆ ಇದೆ. ಆಗಸ್ಟ್ 10ರಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಸಭೆಯ ವಿಚಾರಗಳನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಲಿದ್ದಾರೆ.

ಇಂದಿನಿಂದ ಆರ್​ಬಿಐ ಎಂಪಿಸಿ ಸಭೆ; ಆಗಸ್ಟ್ 10ರಂದು ಪ್ರಮುಖ ಘೋಷಣೆಗಳು; ಬಡ್ಡಿದರ ಏರಿಸುತ್ತಾ ರಿಸರ್ವ್ ಬ್ಯಾಂಕ್?
ಭಾರತೀಯ ರಿಸರ್ವ್ ಬ್ಯಾಂಕ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 08, 2023 | 11:51 AM

ನವದೆಹಲಿ, ಆಗಸ್ಟ್ 8: ಭಾರತೀಯ ರಿಸರ್ವ್ ಬ್ಯಾಂಕ್​ನ ಹಣಕಾಸು ನೀತಿ ಸಮಿತಿಯ (RBI MPC Meeting) ದ್ವೈಮಾಸಿಕ ಸಭೆ ಇಂದು ಮಂಗಳವಾರ ಆರಂಭವಾಗುತ್ತಿದೆ. 3 ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ದೇಶದ ಸದ್ಯದ ಹಣಕಾಸು ಪರಿಸ್ಥಿತಿ, ಭವಿಷ್ಯದ ಸ್ಥಿತಿ ಇತ್ಯಾದಿಯನ್ನು ಸಮಗ್ರವಾಗಿ ಅವಲೋಕಿಸಲಾಗುತ್ತದೆ. ಆರ್ಥಿಕ ಬೆಳವಣಿಗೆಗೆ ಪೂರಕವಾಗುವ ಹಣಕಾಸು ಕ್ರಮಗಳು, ಹಣದುಬ್ಬರ (Inflation) ಇಳಿಕೆಗೆ ತೆಗೆದುಕೊಳ್ಳಬಹುದಾದ ಕ್ರಮಗಳು ಇತ್ಯಾದಿಯನ್ನು ಚರ್ಚಿಸಲಾಗುತ್ತದೆ. ಹಿಂದಿನ ಎರಡು ಸಭೆಗಳಲ್ಲಿ ಬಡ್ಡಿದರ ಏರಿಸದೇ ಇರುವ ಆರ್​ಬಿಐ ಈ ಬಾರಿಯೂ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸುವ ಸಾಧ್ಯತೆ ಇದೆ ಎಂದು ವರದಿಗಳು ಹೇಳುತ್ತಿವೆ. ಆರ್​ಬಿಐನ ರೆಪೋ ದರ ಅಥವಾ ಬಡ್ಡಿ ದರ ಶೇ. 6.50ರಷ್ಟಿದೆ. ಇದೇ ದರ ಮುಂದಿನ 2 ತಿಂಗಳು ಮುಂದುವರಿಯಬಹುದು.

ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಕಮಿಟಿಯಲ್ಲಿ ಆರು ಮಂದಿ ಸದಸ್ಯರಿದ್ದಾರೆ. ಅದರ ಗವರ್ನರ್ ಶಕ್ತಿಕಾಂತ ದಾಸ್, ಡೆಪ್ಯುಟಿ ಗವರ್ನರ್ ಮೈಕೇಲ್ ದೇಬಬ್ರತ ಪಾತ್ರ, ರಾಜೀವ್ ರಂಜನ್, ಜಯಂತ್ ಆರ್ ವರ್ಮಾ, ಅಶಿಮಾ ಗೋಯಲ್ ಮತ್ತು ಶಶಾಂಕ ಭಿಡೆ ಅವರು ಎಂಪಿಸಿ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: India Startup Festival 2023: ಬೆಂಗಳೂರಿನಲ್ಲಿ ಸ್ಟಾರ್ಟಪ್ ಉತ್ಸವ; 10,000ಕ್ಕೂ ಹೆಚ್ಚು ಸ್ಟಾರ್ಟಪ್​ಗಳು ಮತ್ತು 500ಕ್ಕೂ ಹೆಚ್ಚು ಹೂಡಿಕೆದಾರರು ಒಂದೇ ವೇದಿಕೆಯಲ್ಲಿ

ತಗ್ಗದ ಹಣದುಬ್ಬರ; ಇಬ್ಬಂದಿಯಲ್ಲಿ ಆರ್​ಬಿಐ

ಹಣದುಬ್ಬರಕ್ಕೆ ಕಡಿವಾಣ ಹಾಕಲು ಕಳೆದ ಒಂದು ವರ್ಷದಿಂದ ಆರ್​ಬಿಐ ಬಡ್ಡಿದರ ಏರಿಸುತ್ತಾ ಬಂದಿದೆ. ಶೇ. 7ರ ಮೇಲಿದ್ದ ಹಣದುಬ್ಬರ ಶೇ. 6ರ ಒಳಗೆ ಬಂದಿದೆ. ಆದರೆ, ಈಗ ಆಹಾರ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯದ ಕ್ವಾರ್ಟರ್​ನಲ್ಲಿ ಹಣದುಬ್ಬರ ಶೇ. 6ರ ಮಿತಿ ಮೀರಿ ಹೋಗುವ ಸಾಧ್ಯತೆ ಇದೆ.

ಆದರೆ, ಬಡ್ಡಿದರ ಏರಿಕೆ ಮಾಡಿದರೆ ಅದರ ಸೈಡ್ ಎಫೆಕ್ಟ್ ಆಗಿ ಆರ್ಥಿಕತೆಗೆ ಘಾಸಿಯಾಗುತ್ತದೆ. ಹೀಗಾಗಿ, ಹಣದುಬ್ಬರವನ್ನು ಏಕೈಕ ಮಾನದಂಡವನ್ನಾಗಿ ಇಟ್ಟುಕೊಂಡು ರೆಪೋ ದರ ನಿರ್ಧರಿಸುವ ಸ್ಥಿತಿಯಲ್ಲಿ ಆರ್​ಬಿಐ ಇಲ್ಲ. ಒಂದು ರೀತಿಯಲ್ಲಿ ಇಬ್ಬಂದಿ ಪರಿಸ್ಥಿತಿಯಲ್ಲಿರುವ ಆರ್​ಬಿಐಗೆ ಹಣದುಬ್ಬರ ಮತ್ತು ಆರ್ಥಿಕ ಬೆಳವಣಿಗೆಯನ್ನು ಸಮತೋಲನದಲ್ಲಿ ಇಡುವ ದೊಡ್ಡ ಸವಾಲಿದೆ. ಇವೆಲ್ಲಾ ಹಿನ್ನೆಲೆಯಲ್ಲಿ ಆರ್​ಬಿಐ ಈ ಬಾರಿ ರೆಪೋ ದರ ಏರಿಸುವ ಸಾಧ್ಯತೆ ಕಡಿಮೆ ಇದೆ ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: Vaibhav Taneja: ಇಲಾನ್ ಮಸ್ಕ್ ಮಾಲಕತ್ವದ ಟೆಸ್ಲಾ ಸಂಸ್ಥೆಯ ಹೊಸ ಸಿಎಫ್​ಒ ವೈಭವ್ ತನೇಜಾ ಯಾರು?

ಆರ್​ಬಿಐ ಎಂಪಿಸಿ ಸಭೆಗೆ ಷೇರುಪೇಟೆ ಪ್ರತಿಕ್ರಿಯೆ

ಆರ್​ಬಿಐನ ಎಂಪಿಸಿ ಸಭೆಯಲ್ಲಿ ಬಡ್ಡಿದರ ಹೆಚ್ಚಿಸಬೇಕೋ ಬೇಡವೋ ಎಂದು ತೆಗೆದುಕೊಳ್ಳಲಾಗುವ ನಿರ್ಧಾರದ ಬಗ್ಗೆ ಷೇರುಪೇಟೆಯೂ ಕಾತರದಿಂದಿದೆ. ಇವತ್ತು ಎಂಪಿಸಿ ಸಭೆ ಆರಂಭವಾಗುತ್ತಿರುವ ಹೊತ್ತಿನಲ್ಲಿ ಷೇರುಪೇಟೆಯಲ್ಲಿ ಅಷ್ಟೇನೂ ವ್ಯತ್ಯಯವಾಗಿಲ್ಲ. ಬಡ್ಡಿದರ ಏರುವ ಸಾಧ್ಯತೆ ಇಲ್ಲ ಎಂಬ ಸುಳಿವು ಸಿಕ್ಕಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ತಣ್ಣಗೆ ಇದ್ದಾರೆ. ಒಂದು ವೇಳೆ ಆಗಸ್ಟ್ 10ರಂದು ಆರ್​ಬಿಐ ಬಡ್ಡಿದರ ಹೆಚ್ಚಿಸಿದರೆ ಷೇರುಪೇಟೆಯಲ್ಲಿ ಬಹಳಷ್ಟು ವ್ಯತ್ಯಯವಾಗುವ ಸಾಧ್ಯತೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ