Sign In

By signing in or creating an account, you agree with Associated Broadcasting Company's Terms & Conditions and Privacy Policy.

Retail Inflation: ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ

ಗ್ರಾಹಕ ದರ ಸೂಚ್ಯಂಕ ಆಧಾರಿತ ಚಿಲ್ಲರೆ ಹಣದುಬ್ಬರ ಪ್ರಮಾಣ ಒಂದು ವರ್ಷದ ಕನಿಷ್ಠ ಮಟ್ಟಕ್ಕೆ, ಅಂದರೆ ಶೇಕಡಾ 5.72ಕ್ಕೆ ಇಳಿಕೆಯಾಗಿದೆ. ನವೆಂಬರ್​ನಲ್ಲಿ ಶೇಕಡಾ 5.88ಕ್ಕೆ ಇಳಿಕೆಯಾಗಿದ್ದ ಚಿಲ್ಲರೆ ಹಣದುಬ್ಬರ ಡಿಸೆಂಬರ್​​ನಲ್ಲಿ ಶೇಕಡಾ 5.72ಕ್ಕೆ ಇಳಿಕೆಯಾಗಿದೆ

Retail Inflation: ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ
ಹಣದುಬ್ಬರ (ಸಾಂದರ್ಭಿಕ ಚಿತ್ರ)Image Credit source: PTI
Follow us
TV9 Web
| Updated By: Ganapathi Sharma

Updated on:Jan 12, 2023 | 7:03 PM

ಮುಂಬೈ: ಗ್ರಾಹಕ ದರ ಸೂಚ್ಯಂಕ ಆಧಾರಿತ (CPI) ಚಿಲ್ಲರೆ ಹಣದುಬ್ಬರ (Retail Inflation) ಪ್ರಮಾಣ ಒಂದು ವರ್ಷದ ಕನಿಷ್ಠ ಮಟ್ಟಕ್ಕೆ, ಅಂದರೆ ಶೇಕಡಾ 5.72ಕ್ಕೆ ಇಳಿಕೆಯಾಗಿದೆ. ನವೆಂಬರ್​ನಲ್ಲಿ ಶೇಕಡಾ 5.88ಕ್ಕೆ ಇಳಿಕೆಯಾಗಿದ್ದ ಚಿಲ್ಲರೆ ಹಣದುಬ್ಬರ ಡಿಸೆಂಬರ್​​ನಲ್ಲಿ ಶೇಕಡಾ 5.72ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಸಾಂಖ್ಯಿಕ, ಯೋಜನಾನುಷ್ಠಾನ ಸಚಿವಾಲಯ ಗುರುವಾರ ತಿಳಿಸಿದೆ. ಕೈಗಾರಿಕಾ ಉತ್ಪಾದನೆ (IIP) ಶೇಕಡಾ 7.1ಕ್ಕೆ ಹೆಚ್ಚಳವಾಗಿದೆ ಎಂದೂ ಸಚಿವಾಲಯ ಹೇಳಿದೆ. ಗಣಿಕಾರಿಗೆ ಉತ್ಪಾದನೆ ಪ್ರಮಾಣ ಶೇಕಡಾ 9.7ಕ್ಕೆ ಹೆಚ್ಚಳಗೊಂಡಿದೆ. ವಿದ್ಯುತ್ ಉತ್ಪಾದನೆ ಶೇಕಡಾ 12.7ಕ್ಕೆ ಹೆಚ್ಚಳವಾಗಿದೆ ಎಂದು ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.

ಸತತ 11 ತಿಂಗಳ ಬಳಿಕ ಚಿಲ್ಲರೆ ಹಣದುಬ್ಬರ ನವೆಂಬರ್​​ನಲ್ಲಿ ಶೇಕಡಾ 6ಕ್ಕಿಂತ ಕೆಳಗಿದು, ಆರ್​​ಬಿಐ ಸಹನೆಯ ಮಟ್ಟಕ್ಕೆ ಇಳಿಕೆಯಾಗಿತ್ತು. ಹಣದುಬ್ಬರ ತಡೆಯುವ ಸಲುವಾಗಿ ಆರ್​ಬಿಐ ಹಣಕಾಸು ನೀತಿ ಸಮಿತಿಯು ಡಿಸೆಂಬರ್ 7ರಂದು ರೆಪೊ ದರವನ್ನು 35 ಮೂಲಾಂಶದಷ್ಟು ಹೆಚ್ಚಿಸಿ ಶೇಕಡಾ 6.25ಕ್ಕೆ ನಿಗದಿ ಮಾಡಿತ್ತು. 20206 ಮಾರ್ಚ್ ಒಳಗಾಗಿ ಚಿಲ್ಲರೆ ಹಣದುಬ್ಬರವನ್ನು ಶೇಕಡಾ 2ರಿಂದ 4ರ ಮಟ್ಟದಲ್ಲಿ ಇರುವಂತೆ ಮಾಡುವುದು ಆರ್​ಬಿಐ ಗುರಿಯಾಗಿದೆ.

ಚಿಲ್ಲರೆ ಹಣದುಬ್ಬರ 2022ರ ಅಕ್ಟೋಬರ್​​ನಲ್ಲಿ ಶೇಕಡಾ 6.77 ಇತ್ತು. ಚಿಲ್ಲರೆ ಹಣದುಬ್ಬರ ಸತತ ಮೂರು ತ್ರೈಮಾಸಿಕಗಳಿಂದಲೂ ಹೆಚ್ಚು ಅವಧಿಗೆ ಶೇಕಡಾ 6ರ ಮೇಲಿದ್ದುದರಿಂದ ಆರ್​ಬಿಐ ಹಣಕಾಸು ನೀತಿ ಸಮಿತಿ 2022ರ ನವೆಂಬರ್​​ನಲ್ಲಿ ವಿಶೇಷ ಸಭೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Thu, 12 January 23

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ