AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Retail Inflation: ಏಪ್ರಿಲ್​ನಲ್ಲಿ ರೀಟೇಲ್ ಹಣದುಬ್ಬರ ಶೇ. 3.48ಕ್ಕೆ ಏರಿಕೆ; ಮಾರ್ಚ್​ಗಿಂತ ತುಸು ಹೆಚ್ಚಳ

Retail Inflation in 2026 April rises to 3.48pc: 2026ರ ಮಾರ್ಚ್​ನಲ್ಲಿ ಶೇ. 3.40 ಇದ್ದ ರೀಟೇಲ್ ಹಣದುಬ್ಬರ ಏಪ್ರಿಲ್ ತಿಂಗಳಲ್ಲಿ ಶೇ. 3.48 ಮುಟ್ಟಿದೆ. ಟೊಮೆಟೋ ಸೇರಿದಂತೆ ಕೆಲ ತರಕಾರಿಗಳು, ಕೊಬ್ಬರಿ, ಚಿನ್ನ, ಬೆಳ್ಳಿ ಇತ್ಯಾದಿ ವಸ್ತುಗಳ ಗಣನೀಯ ಬೆಲೆ ಏರಿಕೆಯಿಂದ ಹಣದುಬ್ಬರ ಹೆಚ್ಚಿದೆ. ಆದರೆ, ಆಲೂಗಡ್ಡೆ, ಈರುಳ್ಳಿ ಇತ್ಯಾದಿ ಆಹಾರವಸ್ತುಗಳ ಬೆಲೆ ಇಳಿಕೆಯು ಹಣದುಬ್ಬರ ಏರಿಕೆಯನ್ನು ಮಿತಿಗೊಳಿಸಿದೆ.

Retail Inflation: ಏಪ್ರಿಲ್​ನಲ್ಲಿ ರೀಟೇಲ್ ಹಣದುಬ್ಬರ ಶೇ. 3.48ಕ್ಕೆ ಏರಿಕೆ; ಮಾರ್ಚ್​ಗಿಂತ ತುಸು ಹೆಚ್ಚಳ
ಹಣದುಬ್ಬರImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2026 | 3:20 PM

Share

ನವದೆಹಲಿ, ಮೇ 13: ಭಾರತದ ಚಿಲ್ಲರೆ ಹಣದುಬ್ಬರ (Retail Inflation) 2026ರ ಏಪ್ರಿಲ್​ನಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಸ್ವಲ್ಪ ಹೆಚ್ಚಿನ ಹೊರೆಯಾಗಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ (Ministry of Statistics and Programme Implementation) ಸಚಿವಾಲಯ ನಿನ್ನೆ ಮಂಗಳವಾರ (ಮೇ 12) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಮಾರ್ಚ್‌ನಲ್ಲಿ ಶೇ. 3.40 ರಷ್ಟಿದ್ದ ಹಣದುಬ್ಬರವು ಏಪ್ರಿಲ್‌ನಲ್ಲಿ ಶೇ. 3.48 ಕ್ಕೆ ತಲುಪಿದೆ.

ಆಹಾರ ಪದಾರ್ಥಗಳ ಬೆಲೆ ಏರಿಕೆ ದರವು ಶೇ. 3.87 ರಿಂದ ಶೇ. 4.20 ಕ್ಕೆ ಹೆಚ್ಚಿದೆ. ಟೊಮೆಟೊ ಹಣದುಬ್ಬರವು ಶೇ. 35.28 ರಷ್ಟು ದಾಖಲಾಗಿದ್ದು, ಅಡುಗೆ ಮನೆಯ ಬಜೆಟ್ ಮೇಲೆ ಪರಿಣಾಮ ಬೀರಿದೆ. ಬೆಳ್ಳಿ ಆಭರಣಗಳ ಬೆಲೆಯಲ್ಲಿ ಶೇ. 144.34 ರಷ್ಟು ಭಾರಿ ಏರಿಕೆಯಾಗಿದೆ. ಚಿನ್ನ, ವಜ್ರ ಮತ್ತು ಪ್ಲಾಟಿನಂ ಆಭರಣಗಳ ಬೆಲೆ ಕೂಡ ಶೇ. 40.72 ರಷ್ಟು ಹೆಚ್ಚಾಗಿದೆ. ಕೊಬ್ಬರಿ (ಶೇ. 44.55) ಮತ್ತು ಹೂಕೋಸು (ಶೇ. 25.58) ಬೆಲೆಗಳೂ ಗಣನೀಯವಾಗಿ ಏರಿವೆ.

ಇದನ್ನೂ ಓದಿ: ಈವರೆಗೆ ಇದ್ದದ್ದು ಕಷ್ಟ ಅಲ್ಲ, ಮುಂದೆ ಕಾದೈತಾ ದೊಡ್ಡ ಸಂಕಷ್ಟ? ಉದಯ್ ಕೋಟಕ್ ಕೊಟ್ಟಿದ್ದಾರೆ ದೊಡ್ಡ ಎಚ್ಚರಿಕೆ

ಬೆಲೆ ಇಳಿಕೆಯಾದ ವಸ್ತುಗಳು: ಆಲೂಗಡ್ಡೆ (-23.69%) ಮತ್ತು ಈರುಳ್ಳಿ (-17.67%) ಬೆಲೆಗಳಲ್ಲಿ ಇಳಿಕೆ ಕಂಡುಬಂದಿರುವುದು ಗ್ರಾಹಕರಿಗೆ ಸ್ವಲ್ಪ ಸಮಾಧಾನ ತಂದಿದೆ. ಅಲ್ಲದೆ ಮೋಟಾರ್ ಕಾರ್, ಜೀಪ್ ಮತ್ತು ಏರ್ ಕಂಡೀಷನರ್ ಬೆಲೆಗಳೂ ತುಸು ಕಡಿಮೆಯಾಗಿವೆ. ಇದರಿಂದ ಒಟ್ಟಾರೆ ಹಣದುಬ್ಬರ ತೀರಾ ಹೆಚ್ಚದಂತೆ ನಿಯಂತ್ರಣದಲ್ಲಿರಲು ಸಾಧ್ಯವಾಗಿದೆ.

ಗ್ರಾಮೀಣ vs ನಗರ: ಗ್ರಾಮೀಣ ಭಾಗದಲ್ಲಿ ಹಣದುಬ್ಬರ ಶೇ. 3.74 ರಷ್ಟಿದ್ದರೆ, ನಗರ ಪ್ರದೇಶಗಳಲ್ಲಿ ಇದು ಶೇ. 3.16 ರಷ್ಟಿದೆ.

ತರಕಾರಿಗಳಲ್ಲಿ ಟೊಮೆಟೊ ಮತ್ತು ಹೂಕೋಸು ಹಾಗೂ ಅಮೂಲ್ಯ ಲೋಹಗಳ ಬೆಲೆ ಏರಿಕೆಯು ಏಪ್ರಿಲ್ ತಿಂಗಳ ಹಣದುಬ್ಬರ ಹೆಚ್ಚಾಗಲು ಮುಖ್ಯ ಕಾರಣಗಳಾಗಿವೆ.

ಇದನ್ನೂ ಓದಿ: I4C ಮತ್ತು RBIH ಮಧ್ಯೆ ಒಪ್ಪಂದ; ಭಾರತೀಯರಿಗೆ ಅತ್ಯಾಧುನಿಕ ಸೈಬರ್ ರಕ್ಷಾ ಕವಚ: ಅಮಿತ್ ಶಾ ಘೋಷಣೆ

ಆರ್​ಬಿಐ ಗುರಿಯೊಳಗೆಯೇ ಇರುವ ಹಣದುಬ್ಬರ

ಹಣದುಬ್ಬರವು ಶೇ. 4ರಷ್ಟು ಇರಬೇಕೆಂದು ಸರ್ಕಾರವು ಆರ್ಬಿಐಗೆ ಗುರಿ ನೀಡಿದೆ. ಈ ಗುರಿ ಈಡೇರಿಸುವ ನಿಟ್ಟಿನಲ್ಲಿ ಆರ್​ಬಿಐ ಹಣದುಬ್ಬರ ತಾಳಿಕೆ ಮಿಡಿಯಾಗಿ ಶೇ. 2ರಿಂದ 4 ಅನ್ನು ನಿಗದಿ ಮಾಡಿದೆ. ಹಣದುಬ್ಬರವು ಈ ವ್ಯಾಪ್ತಿಯೊಳಗೆ ಇರಿಸುವ ಗುರಿ ಆರ್​ಬಿಐನದ್ದು. ಈಗ್ಗೆ ಹಲವು ತಿಂಗಳುಗಳಿಂದ ಹಣದುಬ್ಬರು ಆರ್​ಬಿಐನ ತಾಳಿಕೆ ವ್ಯಾಪ್ತಿಯೊಳಗೆಯೇ ಇರುವುದು ಗಮನಾರ್ಹ.

ಆದರೆ, ಮೇ ತಿಂಗಳಲ್ಲಿ ಚಿನ್ನ, ಇಂಧನ ಇತ್ಯಾದಿ ಬೆಲೆಗಳು ಅಧಿಕಗೊಳ್ಳುವುದರಿಂದ ಹಣದುಬ್ಬರ ಶೇ. 4 ಅನ್ನು ದಾಟಿ ಹೋಗುವ ಸಾಧ್ಯತೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?