Retail Inflation: ಬೆಲೆ ಏರಿಕೆ ಪರಿಣಾಮ; ಜೂನ್​ನಲ್ಲಿ ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ

ಆದಾಗ್ಯೂ, ಹಣದುಬ್ಬರವು ಆರ್‌ಬಿಐನ ಸಹನೆಯ ಮಿತಿ ಶೇ 6ಕ್ಕಿಂತ ಕಡಿಮೆಯೇ ಇದೆ. ಈ ಹಿಂದೆ ಮಾರ್ಚ್‌ನಲ್ಲಿ ಗ್ರಾಹಕ ದರ ಸೂಚ್ಯಂಕ ಆಧಾರಿತ ಹಣದುಬ್ಬರವು ಶೇ 5.66 ರಷ್ಟಿತ್ತು.

Retail Inflation: ಬೆಲೆ ಏರಿಕೆ ಪರಿಣಾಮ; ಜೂನ್​ನಲ್ಲಿ ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ
ಸಾಂದರ್ಭಿಕ ಚಿತ್ರ
Follow us
|

Updated on: Jul 12, 2023 | 7:06 PM

ನವದೆಹಲಿ: ಆಹಾರ ವಸ್ತುಗಳ ಬೆಲೆ ಸತತವಾಗಿ ಏರಿಕೆಯಾಗುತ್ತಿರುವುದರ ಪರಿಣಾಮವಾಗಿ ಚಿಲ್ಲರೆ ಹಣದುಬ್ಬರ (Retail Inflation) ಪ್ರಮಾಣ ಜೂನ್​ ತಿಂಗಳಲ್ಲಿ ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಜೂನ್​ನಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣ ಶೇ 4.81ಕ್ಕೆ ಹೆಚ್ಚಳವಾಗಿರುವುದು ಸರ್ಕಾರದ ಅಂಕಿಅಂಶಗಳಿಂದ ತಿಳಿದುಬಂದಿದೆ. ಗ್ರಾಹಕ ದರ ಸೂಚ್ಯಂಕ (CPI) ಆಧಾರಿತ ಹಣದುಬ್ಬರವು ಮೇ ತಿಂಗಳಲ್ಲಿ ಶೇ 4.31 ಇತ್ತು. ಇದು 2022ರ ಜೂನ್​ನಲ್ಲಿ ಶೇ 7 ರಷ್ಟಿತ್ತು.

ಆದಾಗ್ಯೂ, ಹಣದುಬ್ಬರವು ಆರ್‌ಬಿಐನ ಸಹನೆಯ ಮಿತಿ ಶೇ 6ಕ್ಕಿಂತ ಕಡಿಮೆಯೇ ಇದೆ. ಈ ಹಿಂದೆ ಮಾರ್ಚ್‌ನಲ್ಲಿ ಗ್ರಾಹಕ ದರ ಸೂಚ್ಯಂಕ ಆಧಾರಿತ ಹಣದುಬ್ಬರವು ಶೇ 5.66 ರಷ್ಟಿತ್ತು.

ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಶೇ 4 ರ ಒಳಗೆ ಇರುವಂತೆ ನೋಡಿಕೊಳ್ಳಲಿ ಕೇಂದ್ರ ಸರ್ಕಾರವು ಆರ್​ಬಿಐಗೆ ನಿರ್ದೇಶನ ನೀಡಿದೆ. ಆರ್​ಬಿಐನ ಮುಂದಿನ ದ್ವೈಮಾಸಿಕ ನೀತಿ ಮುಂದಿನ ತಿಂಗಳ ಆರಂಭದಲ್ಲಿ ಪ್ರಕಟವಾಗಲಿದೆ.

ಆಹಾರ ದರ ಆಧಾರಿತ ಹಣದುಬ್ಬರವು ಜೂನ್‌ನಲ್ಲಿ ಶೇಕಡಾ 4.49 ತಲುಪಿತ್ತು. ಮೇ ತಿಂಗಳಲ್ಲಿ ಶೇಕಡಾ 2.96 ಇತ್ತು. ಗ್ರಾಹಕ ದರ ಸೂಚ್ಯಂಕ ಆಧಾರಿತ ಹಣದುಬ್ಬರದ ಏರಿಕೆಗೆ ಬಹುಪಾಲು ಆಹಾರ ವಸ್ತುಗಳ ಬೆಲೆ ಏರಿಕೆಯೇ ಕಾರಣವಾಗಿದೆ.

ಇದನ್ನೂ ಓದಿ: Poor and Inflation: ಬಡವರು ಇನ್ನಷ್ಟು ಬಡವರಾಗಲು, ಸಿರಿವಂತರು ಇನ್ನಷ್ಟು ಸಿರಿವಂತರಾಗಲು ಏನು ಕಾರಣ? ವಿಷ ವರ್ತುಲವಾ ಹಣದುಬ್ಬರ? ಕುತೂಹಲದ ಉದಾಹರಣೆ

ಕಳೆದ ತಿಂಗಳು ದ್ವೈಮಾಸಿಕ ಹಣಕಾಸು ನೀತಿ ಪ್ರಕಟಿಸಿದ್ದ ಆರ್​ಬಿಐ, ರೆಪೊ ದರದಲ್ಲಿ ಬದಲಾವಣೆ ಮಾಡದೆ, ಶೇಕಡಾ 6.5 ರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಸರಾಸರಿ ಶೇ 5.1 ರಲ್ಲಿ ಇರುವಂತೆ ನೋಡಿಕೊಳ್ಳುವ ಗುರಿ ಹಾಕಿಕೊಂಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್