AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Retail Inflation: ಬೆಲೆ ಏರಿಕೆ ಪರಿಣಾಮ; ಜೂನ್​ನಲ್ಲಿ ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ

ಆದಾಗ್ಯೂ, ಹಣದುಬ್ಬರವು ಆರ್‌ಬಿಐನ ಸಹನೆಯ ಮಿತಿ ಶೇ 6ಕ್ಕಿಂತ ಕಡಿಮೆಯೇ ಇದೆ. ಈ ಹಿಂದೆ ಮಾರ್ಚ್‌ನಲ್ಲಿ ಗ್ರಾಹಕ ದರ ಸೂಚ್ಯಂಕ ಆಧಾರಿತ ಹಣದುಬ್ಬರವು ಶೇ 5.66 ರಷ್ಟಿತ್ತು.

Retail Inflation: ಬೆಲೆ ಏರಿಕೆ ಪರಿಣಾಮ; ಜೂನ್​ನಲ್ಲಿ ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jul 12, 2023 | 7:06 PM

Share

ನವದೆಹಲಿ: ಆಹಾರ ವಸ್ತುಗಳ ಬೆಲೆ ಸತತವಾಗಿ ಏರಿಕೆಯಾಗುತ್ತಿರುವುದರ ಪರಿಣಾಮವಾಗಿ ಚಿಲ್ಲರೆ ಹಣದುಬ್ಬರ (Retail Inflation) ಪ್ರಮಾಣ ಜೂನ್​ ತಿಂಗಳಲ್ಲಿ ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಜೂನ್​ನಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣ ಶೇ 4.81ಕ್ಕೆ ಹೆಚ್ಚಳವಾಗಿರುವುದು ಸರ್ಕಾರದ ಅಂಕಿಅಂಶಗಳಿಂದ ತಿಳಿದುಬಂದಿದೆ. ಗ್ರಾಹಕ ದರ ಸೂಚ್ಯಂಕ (CPI) ಆಧಾರಿತ ಹಣದುಬ್ಬರವು ಮೇ ತಿಂಗಳಲ್ಲಿ ಶೇ 4.31 ಇತ್ತು. ಇದು 2022ರ ಜೂನ್​ನಲ್ಲಿ ಶೇ 7 ರಷ್ಟಿತ್ತು.

ಆದಾಗ್ಯೂ, ಹಣದುಬ್ಬರವು ಆರ್‌ಬಿಐನ ಸಹನೆಯ ಮಿತಿ ಶೇ 6ಕ್ಕಿಂತ ಕಡಿಮೆಯೇ ಇದೆ. ಈ ಹಿಂದೆ ಮಾರ್ಚ್‌ನಲ್ಲಿ ಗ್ರಾಹಕ ದರ ಸೂಚ್ಯಂಕ ಆಧಾರಿತ ಹಣದುಬ್ಬರವು ಶೇ 5.66 ರಷ್ಟಿತ್ತು.

ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಶೇ 4 ರ ಒಳಗೆ ಇರುವಂತೆ ನೋಡಿಕೊಳ್ಳಲಿ ಕೇಂದ್ರ ಸರ್ಕಾರವು ಆರ್​ಬಿಐಗೆ ನಿರ್ದೇಶನ ನೀಡಿದೆ. ಆರ್​ಬಿಐನ ಮುಂದಿನ ದ್ವೈಮಾಸಿಕ ನೀತಿ ಮುಂದಿನ ತಿಂಗಳ ಆರಂಭದಲ್ಲಿ ಪ್ರಕಟವಾಗಲಿದೆ.

ಆಹಾರ ದರ ಆಧಾರಿತ ಹಣದುಬ್ಬರವು ಜೂನ್‌ನಲ್ಲಿ ಶೇಕಡಾ 4.49 ತಲುಪಿತ್ತು. ಮೇ ತಿಂಗಳಲ್ಲಿ ಶೇಕಡಾ 2.96 ಇತ್ತು. ಗ್ರಾಹಕ ದರ ಸೂಚ್ಯಂಕ ಆಧಾರಿತ ಹಣದುಬ್ಬರದ ಏರಿಕೆಗೆ ಬಹುಪಾಲು ಆಹಾರ ವಸ್ತುಗಳ ಬೆಲೆ ಏರಿಕೆಯೇ ಕಾರಣವಾಗಿದೆ.

ಇದನ್ನೂ ಓದಿ: Poor and Inflation: ಬಡವರು ಇನ್ನಷ್ಟು ಬಡವರಾಗಲು, ಸಿರಿವಂತರು ಇನ್ನಷ್ಟು ಸಿರಿವಂತರಾಗಲು ಏನು ಕಾರಣ? ವಿಷ ವರ್ತುಲವಾ ಹಣದುಬ್ಬರ? ಕುತೂಹಲದ ಉದಾಹರಣೆ

ಕಳೆದ ತಿಂಗಳು ದ್ವೈಮಾಸಿಕ ಹಣಕಾಸು ನೀತಿ ಪ್ರಕಟಿಸಿದ್ದ ಆರ್​ಬಿಐ, ರೆಪೊ ದರದಲ್ಲಿ ಬದಲಾವಣೆ ಮಾಡದೆ, ಶೇಕಡಾ 6.5 ರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಸರಾಸರಿ ಶೇ 5.1 ರಲ್ಲಿ ಇರುವಂತೆ ನೋಡಿಕೊಳ್ಳುವ ಗುರಿ ಹಾಕಿಕೊಂಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ