AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Retail Inflation and IIP: ಸೆಪ್ಟೆಂಬರ್​ನಲ್ಲಿ ಚಿಲ್ಲರೆ ಹಣದುಬ್ಬರ 5 ತಿಂಗಳ ಕನಿಷ್ಠ ಮಟ್ಟಕ್ಕೆ, ಆಗಸ್ಟ್​ ಐಐಪಿ ಶೇ 11.9ರಷ್ಟು ಏರಿಕೆ

2021ರ ಸೆಪ್ಟೆಂಬರ್ ತಿಂಗಳ ಚಿಲ್ಲರೆ ಹಣದುಬ್ಬರ ದರ ಐದು ತಿಂಗಳ ಕನಿಷ್ಠ ಮಟ್ಟವನ್ನು ತಲುಪಿದೆ. ಇನ್ನು ಕೈಗಾರಿ ಉತ್ಪಾದನೆ ಸೂಚ್ಯಂಕವು ಶೇ 11.9ರಷ್ಟು ಏರಿಕೆ ಆಗಿದೆ. ಆ ಬಗ್ಗೆ ಮಾಹಿತಿ ನಿಮ್ಮೆದುರು ಇದೆ.

Retail Inflation and IIP: ಸೆಪ್ಟೆಂಬರ್​ನಲ್ಲಿ ಚಿಲ್ಲರೆ ಹಣದುಬ್ಬರ 5 ತಿಂಗಳ ಕನಿಷ್ಠ ಮಟ್ಟಕ್ಕೆ, ಆಗಸ್ಟ್​ ಐಐಪಿ ಶೇ 11.9ರಷ್ಟು ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 12, 2021 | 6:30 PM

Share

ಭಾರತದ ಚಿಲ್ಲರೆ ಹಣದುಬ್ಬರವು (Retail Inflation) ಸೆಪ್ಟೆಂಬರ್‌ನಲ್ಲಿ ಮತ್ತೆ ಕಡಿಮೆಯಾಗಿದ್ದು, ಈ ಮೂಲಕ ಐದು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಕಳೆದ ವರ್ಷದ ಅನುಕೂಲಕರ ಹೋಲಿಕೆ ಮತ್ತು ಕಚ್ಚಾ ತೈಲ ಹಾಗೂ ಇಂಧನದ ಬೆಲೆಯಲ್ಲಿನ ಏರಿಕೆಯನ್ನು ಸರಿದೂಗಿಸಿದ ಆಹಾರ ಬೆಲೆಗಳನ್ನು ಮಿತಗೊಳಿಸಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಮಂಗಳವಾರ ತೋರಿಸಿವೆ. ಗ್ರಾಹಕರ ಬೆಲೆ ಹಣದುಬ್ಬರವು ಆಗಸ್ಟ್‌ನಲ್ಲಿ ಶೇ 5.3ರಿಂದ ಸೆಪ್ಟೆಂಬರ್‌ನಲ್ಲಿ ಶೇ 4.35ಕ್ಕೆ ಇಳಿದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಶೇ 2ರಿಂದ ಶೇ 6ರರೊಳಗೆ ರೀಟೇಲ್ ಹಣದುಬ್ಬರವನ್ನು ನಿರ್ವಹಿಸಬೇಕು ಎಂಬ ಗುರಿಯೊಳಗೆ ಇರುವಂತೆ ಇದು ಸತತ ಮೂರನೇ ತಿಂಗಳಾಗಿದೆ. ಬೆಲೆ ಒತ್ತಡವು ತಗ್ಗಿರುವುದು ಆರ್‌ಬಿಐಗೆ ನೀತಿ ನಿರೂಪಣೆಗೆ ಅವಕಾಶ ಒದಗಿಸುತ್ತದೆ. ಕಳೆದ ವಾರ ನಡೆದ ಆರ್​ಬಿಐನ ದ್ವೈಮಾಸಿಕ ಹಣಕಾಸು ನೀತಿ ಸಭೆಯ ಕೊನೆಯಲ್ಲಿ ಪ್ರಮುಖ ರೆಪೊ ದರವನ್ನು ಶೇ 4ರಷ್ಟು ಹೊಂದಿತ್ತು. ಏಕೆಂದರೆ ಇದು ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವತ್ತ ಗಮನ ಹರಿಸಿತ್ತು.

ಕೈಗಾರಿಕಾ ಉತ್ಪಾದನೆಯ ಸೂಚ್ಯಂಕವು ಆಗಸ್ಟ್ ತಿಂಗಳಿಗೆ ಶೇ 11.9ರಷ್ಟು ವರ್ಷದಿಂದ ವರ್ಷಕ್ಕೆ ಏರಿಕೆಯಾಗಿದ್ದು, ಜುಲೈನಲ್ಲಿ ಶೇ 11.5 ರಷ್ಟಿತ್ತು ಎಂದು ಈಚಿನ ದತ್ತಾಂಶ ತೋರಿಸಿದೆ. ರಾಷ್ಟ್ರೀಯ ಅಂಕಿಅಂಶಗಳ ಕಚೇರಿ (NSO) ಯಿಂದ ಕೈಗಾರಿಕಾ ಉತ್ಪಾದನೆಯ ಸೂಚ್ಯಂಕದ (IIP) ಮಾಹಿತಿಯ ಪ್ರಕಾರ, ಉತ್ಪಾದನಾ ವಲಯದ ಉತ್ಪಾದನೆಯು ಆಗಸ್ಟ್ 2021ರಲ್ಲಿ ಶೇ 9.7ರಷ್ಟು ಏರಿಕೆಯಾಗಿದೆ. ಆಗಸ್ಟ್​ನಲ್ಲಿ ಗಣಿಗಾರಿಕೆ ಉತ್ಪಾದನೆಯು ಶೇ 23.6ಕ್ಕೆ ಏರಿಲೆ ಆಗಿದೆ ಮತ್ತು ವಿದ್ಯುತ್ ಉತ್ಪಾದನೆಯು ಶೇ 16ರಷ್ಟು ಹೆಚ್ಚಾಗಿದೆ. ಐಐಪಿ ಆಗಸ್ಟ್ 2020ರಲ್ಲಿ ಶೇ 7.1ರಷ್ಟು ಕುಸಿದಿತ್ತು.

ಈ ವರ್ಷ ಏಪ್ರಿಲ್-ಆಗಸ್ಟ್ ಅವಧಿಯಲ್ಲಿ ಐಐಪಿ 28.6ರಷ್ಟು ಬೆಳವಣಿಗೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ 25ರ ಕುಸಿತ ಆಗಿತ್ತು. ಕಳೆದ ವರ್ಷ ಮಾರ್ಚ್‌ನಿಂದ ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ಕೈಗಾರಿಕಾ ಉತ್ಪಾದನೆಗೆ ಹೊಡೆತ ಬಿದ್ದಿದ್ದು, ಅದು ಶೇ 18.7ಕ್ಕೆ ಕುಗ್ಗಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್‌ಡೌನ್ ವಿಧಿಸಿದ ಹಿನ್ನೆಲೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿನ ಕುಸಿತದಿಂದಾಗಿ ಇದು 2020ರ ಏಪ್ರಿಲ್‌ನಲ್ಲಿ ಶೇ 57.3ಕ್ಕೆ ಕುಗ್ಗಿತು.

ಇದನ್ನೂ ಓದಿ: Bengaluru Vegetable Price List: ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ; ಯಾವ ತರಕಾರಿಗೆ ಎಷ್ಟು? ಬೆಲೆ ಏರಿಕೆಗೆ ಕಾರಣವೇನು?

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ