AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Retail Inflation: ಅಕ್ಟೋಬರ್ ಚಿಲ್ಲರೆ ಹಣದುಬ್ಬರ ದರ ಶೇ 4.48ಕ್ಕೆ ಏರಿಕೆ

ಭಾರತದಲ್ಲಿ ಅಕ್ಟೋಬರ್ ತಿಂಗಳ ಚಿಲ್ಲರೆ ಹಣದುಬ್ಬರ ದರವು ಶೇ 4.48ಕ್ಕೆ ಏರಿಕೆ ಆಗಿದೆ. ಏನಿದರ ಹಿಂದಿನ ಕಾರಣ ಎಂಬುದರ ಬಗೆಗಿನ ಲೇಖನ ಇಲ್ಲಿದೆ.

Retail Inflation: ಅಕ್ಟೋಬರ್ ಚಿಲ್ಲರೆ ಹಣದುಬ್ಬರ ದರ ಶೇ 4.48ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 12, 2021 | 11:05 PM

Share

ಭಾರತದ ಚಿಲ್ಲರೆ ಹಣದುಬ್ಬರ ದರವನ್ನು ಗ್ರಾಹಕ ಬೆಲೆ ಸೂಚ್ಯಂಕದಿಂದ (CPI) ಅಳೆಯಲಾಗುತ್ತದೆ. 2021ರ ಅಕ್ಟೋಬರ್​ನಲ್ಲಿ ಶೇ 4.48ಕ್ಕೆ ಏರಿದೆ ಎಂದು ಅಂಕಿ-ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ನವೆಂಬರ್ 12ರಂದು ಬಿಡುಗಡೆ ಮಾಡಿದೆ. ಆಹಾರ ಬೆಲೆಗಳ ಏರಿಕೆಯಿಂದಾಗಿ ಅಕ್ಟೋಬರ್‌ನಲ್ಲಿ ಚಿಲ್ಲರೆ ಹಣದುಬ್ಬರದಲ್ಲಿ ಸ್ವಲ್ಪ ಹೆಚ್ಚಳವಾಗಿದೆ ಎಂದು ಸರ್ಕಾರದ ಅಂಕಿ-ಅಂಶಗಳು ತೋರಿಸಿವೆ. 2021ರ ಸೆಪ್ಟೆಂಬರ್​ನಲ್ಲಿ ಸಿಪಿಐ ಆಧಾರಿತ ಹಣದುಬ್ಬರವು ಶೇಕಡಾ 4.35ರಷ್ಟಿತ್ತು ಮತ್ತು 2020ರ ಅಕ್ಟೋಬರ್​ನಲ್ಲಿ ಇದು ಶೇಕಡಾ 7.61ರಷ್ಟಿತ್ತು.

ಸತತ ನಾಲ್ಕನೇ ತಿಂಗಳಿನಲ್ಲಿ CPI ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಶೇ 6ರ ಗುರಿಗಿಂತ ಕೆಳಗಿದೆ. 2026ರ ಮಾರ್ಚ್​ವರೆಗೆ ಐದು ವರ್ಷಗಳವರೆಗೆ ಕೆಳಸ್ತರದಲ್ಲಿ ಶೇಕಡಾ ಎರಡು ಮತ್ತು ಮೇಲ್​ ಸ್ತರದಲ್ಲಿ ಚಿಲ್ಲರೆ ಹಣದುಬ್ಬರ ದರವನ್ನು ಶೇಕಡಾ ನಾಲ್ಕು ದರದಲ್ಲಿ ನಿರ್ವಹಿಸಲು ಭಾರತ ಸರ್ಕಾರವು ಆರ್​ಬಿಐಗೆ ತಿಳಿಸಿದೆ. ಗಮನಾರ್ಹವಾಗಿ, ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾದ ದ್ವೈ-ಮಾಸಿಕ ಹಣಕಾಸು ನೀತಿಯನ್ನು ಸಿದ್ಧಪಡಿಸುವಾಗ CPI ಡೇಟಾದಲ್ಲಿ ಕೇಂದ್ರೀಯ ಬ್ಯಾಂಕ್ ಅಂಶಗಳಲ್ಲಿ ತಿಳಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಆರ್‌ಬಿಐನ ವಿತ್ತೀಯ ನೀತಿ ಸಮಿತಿ (ಎಂಪಿಸಿ) ಸತತ ಎಂಟನೇ ಬಾರಿಗೆ ರೆಪೊ ದರವನ್ನು ಶೇಕಡಾ ನಾಲ್ಕರಲ್ಲಿ ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿತ್ತು.

ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಆಫೀಸ್ (NSO) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಆಹಾರದ ಬುಟ್ಟಿಯಲ್ಲಿನ ಹಣದುಬ್ಬರವು ಹಿಂದಿನ ತಿಂಗಳಲ್ಲಿ ಶೇ 0.68ಕ್ಕೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಶೇ 0.85ಕ್ಕೆ ಏರಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2021-22ರಲ್ಲಿ CPI ಹಣದುಬ್ಬರವನ್ನು ಶೇ 5.3 ಎಂದು ಅಂದಾಜಿಸಿದೆ – ಎರಡನೇ ತ್ರೈಮಾಸಿಕದಲ್ಲಿ ಶೇ 5.1, ಮೂರನೇ ತ್ರೈಮಾಸಿಕದಲ್ಲಿ ಶೇ 4.5, ಹಣಕಾಸಿನ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಶೇ 5.8 ಇರಲಿದೆ ಎಂದಿದೆ. ಅಪಾಯಗಳು ವಿಶಾಲವಾಗಿ ಸಮತೋಲನಗೊಂಡಿದೆ. 2022-23ರ ಏಪ್ರಿಲ್-ಜೂನ್ ಅವಧಿಯಲ್ಲಿ ಚಿಲ್ಲರೆ ಹಣದುಬ್ಬರವು ಶೇ 5.2 ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Price Hike: ಬಟ್ಟೆ, ಎಲೆಕ್ಟ್ರಾನಿಕ್ಸ್​ನಿಂದ ಮದ್ಯದ ತನಕ ಹೊಸ ವರ್ಷದಿಂದ ಶೇ 8ರಿಂದ 10ರಷ್ಟು ಬೆಲೆ ಏರಿಕೆಗೆ ಸಿದ್ಧರಾಗಿ!

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು