Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಟೇಲ್ ಹಣದುಬ್ಬರ ಶೇ. 5.49ಕ್ಕೆ ಏರಿಕೆ; ಇದು 9 ತಿಂಗಳಲ್ಲೇ ಗರಿಷ್ಠ ಮಟ್ಟ

Retail inflation at 5.49pc in 2024 September: ಸಿಪಿಐ ಆಧಾರಿತ ಹಣದುಬ್ಬರ ಸೆಪ್ಟೆಂಬರ್ ತಿಂಗಳಲ್ಲಿ ಶೇ. 5.49ರಷ್ಟಿದೆ ಎಂಬುದು ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದಿಂದ ತಿಳಿದುಬಂದಿದೆ. ಹಿಂದಿನ ತಿಂಗಳಲ್ಲಿ ಹಣದುಬ್ಬರ ಶೇ. 3.65 ಇತ್ತು. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಹಣದುಬ್ಬರ ಶೇ. 5.02 ಇತ್ತು. ಬೇಸ್ ವರ್ಷದಲ್ಲಿ ಆಗಿರುವ ಬದಲಾವಣೆ ಮತ್ತು ಆಹಾರ ವಸ್ತುಗಳ ಬೆಲೆ ಏರಿಕೆಯು ಹಣದುಬ್ಬರ ಅಧಿಕ ಇರಲು ಕಾರಣವಾಗಿದೆ.

ರೀಟೇಲ್ ಹಣದುಬ್ಬರ ಶೇ. 5.49ಕ್ಕೆ ಏರಿಕೆ; ಇದು 9 ತಿಂಗಳಲ್ಲೇ ಗರಿಷ್ಠ ಮಟ್ಟ
ಹಣದುಬ್ಬರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 14, 2024 | 6:29 PM

ನವದೆಹಲಿ, ಅಕ್ಟೋಬರ್ 14: ಗ್ರಾಹಕ ಬೆಲೆ ಅನುಸೂಚಿ ಆಧಾರಿತ ರೀಟೇಲ್ ಹಣದುಬ್ಬರ ಸೆಪ್ಟೆಂಬರ್ ತಿಂಗಳಲ್ಲಿ ಶೇ. 5.49ಕ್ಕೆ ಏರಿದೆ. ಆಗಸ್ಟ್ ತಿಂಗಳಲ್ಲಿ ಕೇವಲ ಶೇ. 3.65ರಷ್ಟು ಇದ್ದ ಹಣದುಬ್ಬರ ಇಷ್ಟೊಂದು ಏರಲು ಪ್ರಮುಖವಾಗಿ ಕಾರಣವಾಗಿರುವುದು ಆಹಾರ ಬೆಲೆಗಳಲ್ಲಿನ ಹೆಚ್ಚಳವಾಗಿದೆ. ಹಿಂದಿನ ವರ್ಷದಲ್ಲಿ, 2023 ಸೆಪ್ಟೆಂಬರ್ ತಿಂಗಳಲ್ಲಿ ರೀಟೇಲ್ ಹಣದುಬ್ಬರ ಶೇ. 5.02 ಇತ್ತು. ಈ ವರ್ಷ ಅದಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿ ಹಣದುಬ್ಬರ ಇದೆ. 2023ರ ಡಿಸೆಂಬರ್​ನಲ್ಲಿ ಹಣದುಬ್ಬರ ಶೇ. 5.69ರಷ್ಟಿತ್ತು. ಅದಾದ ಬಳಿಕ ಅತಿಹೆಚ್ಚು ಹಣದುಬ್ಬರ ಇದಾಗಿದೆ.

ಸರ್ಕಾರವು ಹಣದುಬ್ಬರ ಲೆಕ್ಕಾಚಾರಕ್ಕೆ ಆಧಾರ ವರ್ಷವಾಗಿ 2012 ಬದಲು 2024 ಅನ್ನು ನಿಗದಿ ಮಾಡಿದೆ. ಇದರಿಂದ ಹಣದುಬ್ಬರ ಅಧಿಕವಾಗಿ ವ್ಯಕ್ತವಾಗುಗುತ್ತಿದೆ. ಹಾಗೆಯೇ, ಪ್ರತಿಕೂಲ ಹವಾಮಾನದಿಂದಾಗಿ ಆಹಾರ ಬೆಲೆಗಳು ಹೆಚ್ಚಿನ ಮಟ್ಟದಲ್ಲಿದ್ದರಿಂದ ಸೆಪ್ಟೆಂಬರ್ ತಿಂಗಳಲ್ಲಿ ಹಣದುಬ್ಬರ ಹೆಚ್ಚಿರಬಹುದು ಎಂಬ ಅಂದಾಜು ಇತ್ತು. ಹೀಗಾಗಿ, ಇದು ತೀರಾ ಅನಿರೀಕ್ಷಿತವಲ್ಲ. ಹಣದುಬ್ಬರವನ್ನು ಶೇ. 4ಕ್ಕೆ ಕಟ್ಟಿ ನಿಲ್ಲಿಸುವುದು ಆರ್​ಬಿಐನ ಗುರಿಯಾಗಿದೆ. ಈ ನಿಟ್ಟಿನಲ್ಲಿ ಹಣದುಬ್ಬರ ತಾಳಿಕೆ ಮಿತಿಯಾಗಿ ಶೇ. 2ರಿಂದ 6 ಅನ್ನು ನಿಗದಿ ಮಾಡಿದೆ. ಸದ್ಯ ಸೆಪ್ಟೆಂಬರ್ ತಿಂಗಳ ಹಣದುಬ್ಬರ ಈ ತಾಳಿಕೆ ಮಿತಿಯಲ್ಲೇ ಇದೆ.

ಗ್ರಾಮೀಣ ಭಾಗದಲ್ಲಿ ಹಣದುಬ್ಬರ ಶೇ. 5.87, ನಗರ ಭಾಗದಲ್ಲಿ ಶೇ. 5.05ರಷ್ಟಿದೆ. ಆಹಾರವಸ್ತು ಗುಂಪಿನ ಹಣದುಬ್ಬರ ಶೇ. 9.24ಕ್ಕೆ ಏರಿದೆ. ಆಗಸ್ಟ್​ನಲ್ಲಿ ಇದು ಶೇ. 5.66 ಇತ್ತು. 2023ರ ಸೆಪ್ಟೆಂಬರ್​ನಲ್ಲಿ ಶೇ. 6.62 ಇತ್ತು.

ಇದನ್ನೂ ಓದಿ: 3ಜಿ, 4ಜಿಯಲ್ಲಿ ಹಿಂದುಳಿದಿದ್ದ ಭಾರತ ಈಗ 6ಜಿಯಲ್ಲಿ ಸೂಪರ್​ಫಾಸ್ಟ್; ಜಾಗತಿಕ ದೈತ್ಯ ದೇಶಗಳಿಗೆ ಭಾರತದಿಂದ ಪೈಪೋಟಿ

ಈಗ ಹಣದುಬ್ಬರ ಮೇಲ್ಮಟ್ಟಕ್ಕೆ ಹೋಗಿರುವುದರಿಂದ ಡಿಸೆಂಬರ್​ನಲ್ಲಿ ಸಭೆ ನಡೆಸಲಿರುವ ಆರ್​ಬಿಐ ಎಂಪಿಸಿ ಸಮಿತಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದು ಕುತೂಹಲ ಹುಟ್ಟಿಸಿದೆ. ಡಿಸೆಂಬರ್​ನಲ್ಲಿ ಆರ್​ಬಿಐ ಬಡ್ಡಿದರ ಇಳಿಸುವ ಸಾಧ್ಯತೆ ಇದೆ. ಆದರೆ, ಹಣದುಬ್ಬರ ವಿಚಾರವು ಆರ್​ಬಿಐ ಕೈ ಕಟ್ಟಿಹಾಕಿದರೂ ಅಚ್ಚರ ಇಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್