AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Retail Inflation: ಮತ್ತೆ ನಿಯಂತ್ರಣ ತಪ್ಪಿದ ಚಿಲ್ಲರೆ ಹಣದುಬ್ಬರ; 3 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ

ಚಿಲ್ಲರೆ ಹಣದುಬ್ಬರ (Retail Inflation) ಪ್ರಮಾಣ 2023ರ ಜನವರಿಯಲ್ಲಿ ಮೂರು ತಿಂಗಳ ಗರಿಷ್ಠ ಮಟ್ಟದಲ್ಲಿರುವುದು ಸರ್ಕಾರದ ಅಂಕಿಅಂಶಗಳಿಂದ ತಿಳಿದುಬಂದಿದೆ. ಜನವರಿಯಲ್ಲಿ ಚಿಲ್ಲರೆ ಹಣದುಬ್ಬರ ಶೇ 6.52 ದಾಖಲಾಗಿದೆ.

Retail Inflation: ಮತ್ತೆ ನಿಯಂತ್ರಣ ತಪ್ಪಿದ ಚಿಲ್ಲರೆ ಹಣದುಬ್ಬರ; 3 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ
ಹಣದುಬ್ಬರ (ಸಾಂದರ್ಭಿಕ ಚಿತ್ರ)Image Credit source: PTI
Follow us
Ganapathi Sharma
|

Updated on:Feb 13, 2023 | 6:22 PM

ನವದೆಹಲಿ: ಚಿಲ್ಲರೆ ಹಣದುಬ್ಬರ (Retail Inflation) ಪ್ರಮಾಣ 2023ರ ಜನವರಿಯಲ್ಲಿ ಮೂರು ತಿಂಗಳ ಗರಿಷ್ಠ ಮಟ್ಟದಲ್ಲಿರುವುದು ಸರ್ಕಾರದ ಅಂಕಿಅಂಶಗಳಿಂದ ತಿಳಿದುಬಂದಿದೆ. ಜನವರಿಯಲ್ಲಿ ಚಿಲ್ಲರೆ ಹಣದುಬ್ಬರ ಶೇ 6.52 ದಾಖಲಾಗಿದೆ. 2022ರ ಡಿಸೆಂಬರ್​ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರ ಆರ್​​ಬಿಐ (RBI) ಸಹನೆಯ ಮಿತಿಯ (ಶೇ 6) ಒಳಗೆಯೇ ಇತ್ತು. ಡಿಸೆಂಬರ್​​ನಲ್ಲಿ ಗ್ರಾಹಕ ದರ ಸೂಚ್ಯಂಕ ಆಧಾರಿತ (CPI) ಚಿಲ್ಲರೆ ಹಣದುಬ್ಬರ (Retail Inflation) ಪ್ರಮಾಣ ಒಂದು ವರ್ಷದ ಕನಿಷ್ಠ ಮಟ್ಟಕ್ಕೆ, ಅಂದರೆ ಶೇಕಡಾ 5.72ಕ್ಕೆ ಇಳಿಕೆಯಾಗಿತ್ತು. ಆದರೆ, ಇದೀಗ ಮತ್ತೆ ಏರಿಕೆಯಾಗಿದೆ. ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಮುಖ್ಯವಾಗಿ ಆಹಾರ ವಸ್ತುಗಳ ಬೆಲೆ ಏರಿಕೆ ಕಾರಣ ಎನ್ನಲಾಗಿದೆ. ಆಹಾರ ವಸ್ತುಗಳ ಹಣದುಬ್ಬರ ಜನವರಿಯಲ್ಲಿ ಶೇ 5.94ರಷ್ಟಿದೆ. ಇದು ಡಿಸೆಂಬರ್​​ನಲ್ಲಿ ಶೇ 4.19ರಷ್ಟಿತ್ತು. ಈ ಹಿಂದೆ 2022ರ ಅಕ್ಟೋಬರ್​​ನಲ್ಲಿ ಚಿಲ್ಲರೆ ಹಣದುಬ್ಬರ ಶೇ 6.77ರಷ್ಟಿತ್ತು.

ಚಿಲ್ಲರೆ ಹಣದುಬ್ಬರವನ್ನು ಶೇ 2ರಿಂದ 4ರ ಒಳಗೆ ಇರುವಂತೆ ನೋಡಿಕೊಳ್ಳುವುದು ಆರ್​​ಬಿಐ ಗುರಿಯಾಗಿದೆ. ಹಣದುಬ್ಬರ ಏರಿಕೆ ತಡೆಯುವ ನಿಟ್ಟಿನಲ್ಲಿ ಆರ್​ಬಿಐ ಫೆಬ್ರವರಿ 8ರಂದು ಮತ್ತೆ ರೆಪೊ ದರವನ್ನು ಮತ್ತೆ 25 ಮೂಲಾಂಶ ಹೆಚ್ಚಿಸಿ ಶೇ 6.50 ಕ್ಕೆ ನಿಗದಿಪಡಿಸಿತ್ತು.

ಇದನ್ನೂ ಓದಿ: Repo Rate: ಆರ್​ಬಿಐ ಹಣಕಾಸು ನೀತಿ, ರೆಪೊ ದರ, ರಿವರ್ಸ್ ರೆಪೊ ದರ ಎಂದರೇನು? ಇಲ್ಲಿದೆ ಪೂರ್ತಿ ವಿವರ

ಕಳೆದ ಕೆಲವು ಹಣಕಾಸು ನೀತಿಗಳಲ್ಲಿ ನಿರಂತರವಾಗಿ ರೆಪೊ ದರ ಹೆಚ್ಚಿಸುತ್ತಾ ಬಂದಿರುವುದು ಪರಿಣಾಮ ಬೀರಿದೆ. ಅದರಿಂದಾಗಿ ಸಗಟು ಮತ್ತು ಚಿಲ್ಲರೆ ಹಣದುಬ್ಬರಗಳು ಸಹನೆಯ ಮಟ್ಟಕ್ಕೆ ಬಂದಿವೆ. ಆದಾಗ್ಯೂ ಜಾಗತಿಕ ಆರ್ಥಿಕ ಪರಿಸ್ಥಿತಿ, ಅಮೆರಿಕದ ಫೆಡರಲ್ ಬ್ಯಾಂಕ್ ಮತ್ತು ಇತರ ದೇಶಗಳ ಕೇಂದ್ರೀಯ ಬ್ಯಾಂಕ್​​ಗಳ ನಿರ್ಣಯಗಳನ್ನು ನಾವು ಗಮನಿಸಿದ್ದೇವೆ. ದೇಶದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಹಣದುಬ್ಬರದ ವಿಚಾರದಲ್ಲಿ ನಮ್ಮ ಗುರಿಯನ್ನು ತಲುಪುವುದಕ್ಕಾಗಿ ದರ ಹೆಚ್ಚಿಸುವುದು ಸದ್ಯದ ಮಟ್ಟಿಗೆ ಅನಿವಾರ್ಯವಾಗಿದೆ ಎಂದು ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದರು.

ಇದೀಗ ಚಿಲ್ಲರೆ ಹಣದುಬ್ಬರ ಆರ್​​ಬಿಐ ಸಹನೆಯ ಮಿತಿ ದಾಟಿರುವುದು ಮತ್ತೆ ಆತಂಕಕ್ಕೆ ಕಾರಣವಾಗಿದೆ. ಮುಂಬರುವ ಹಣಕಾಸು ನೀತಿಗಳಲ್ಲಿ ಆರ್​ಬಿಐ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬಹುದೇ? ಬಡ್ಡಿ ದರವನ್ನು ಮತ್ತೆ ಹೆಚ್ಚಿಸುವ ಸಾಧ್ಯತೆ ಇದೆಯೇ ಎಂಬ ಅನುಮಾನಗಳನ್ನು ಹುಟ್ಟುಹಾಕಿದೆ. ಚಿಲ್ಲರೆ ಹಣದುಬ್ಬರ ಸಹನೆಯ ಮಟ್ಟಕ್ಕೆ ಬಂದಿದ್ದರೂ ಒಟ್ಟಾರೆ ಹಣದುಬ್ಬರ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ ಎಂದು ಆರ್​​​ಬಿಐ ಡಿಸೆಂಬರ್​​​​ನಲ್ಲಿ ಹೇಳಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Mon, 13 February 23

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ