AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Revenue Deficit Grant: ಕರ್ನಾಟಕ ಸೇರಿ 17 ರಾಜ್ಯಗಳ ಆದಾಯ ಕೊರತೆಯ 9871 ಕೋಟಿ ರೂ. ಅನುದಾನ ಬಿಡುಗಡೆ

ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಆದಾಯ ಕೊರತೆ ಅನುದಾನ 9871 ಕೋಟಿ ರೂಪಾಯಿಯನ್ನು ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

Revenue Deficit Grant: ಕರ್ನಾಟಕ ಸೇರಿ 17 ರಾಜ್ಯಗಳ ಆದಾಯ ಕೊರತೆಯ 9871 ಕೋಟಿ ರೂ. ಅನುದಾನ ಬಿಡುಗಡೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Srinivas Mata

Updated on: Sep 09, 2021 | 7:22 PM

17 ರಾಜ್ಯಗಳಿಗೆ 9,871 ಕೋಟಿ ರೂಪಾಯಿಗಳ ಆದಾಯ ಕೊರತೆಯ ಅನುದಾನದ ಆರನೇ ಮಾಸಿಕ ಕಂತನ್ನು ಬಿಡುಗಡೆ ಮಾಡಿರುವುದಾಗಿ ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ಹೇಳಿದೆ. ಸಂವಿಧಾನದ ಪರಿಚ್ಛೇದ 275ರ ಅಡಿಯಲ್ಲಿ ರಾಜ್ಯಗಳಿಗೆ ವಿತರಣೆಯ ನಂತರದ ಆದಾಯ ಕೊರತೆಯ ಅನುದಾನವನ್ನು ಒದಗಿಸಲಾಗುವುದು. 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಮಾಸಿಕ ಕಂತುಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. 2021-22ರ ಅವಧಿಯಲ್ಲಿ 17 ರಾಜ್ಯಗಳಿಗೆ ಈ ಅನುದಾನವನ್ನು ಆಯೋಗ ಶಿಫಾರಸು ಮಾಡಿದೆ.

ವೆಚ್ಚ ಇಲಾಖೆಯು ಆರನೇ ಮಾಸಿಕ ಕಂತಿನ ನಂತರದ ವಿತರಣೆ ಕಂದಾಯ ಕೊರತೆಯ (ಪಿಡಿಆರ್‌ಡಿ) ಅನುದಾನ 9,871 ಕೋಟಿ ರೂಪಾಯಿಗಳನ್ನು ಗುರುವಾರ ರಾಜ್ಯಗಳಿಗೆ ಬಿಡುಗಡೆ ಮಾಡಿದೆ ಎಂದು ಹಣಕಾಸು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ. ಈ ಕಂತಿನೊಂದಿಗೆ ಪ್ರಸ್ತುತ ಹಣಕಾಸು ವರ್ಷದಲ್ಲಿ ಅರ್ಹ ರಾಜ್ಯಗಳಿಗೆ ಒಟ್ಟು 59,226 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ. ರಾಜ್ಯದ ಆದಾಯ ಮತ್ತು ವೆಚ್ಚದ ಮೌಲ್ಯಮಾಪನದ ಮಧ್ಯೆ ಅಂತರವನ್ನು ಆಧರಿಸಿದ 2021-22ರ ಆರ್ಥಿಕ ವರ್ಷದ ಮೌಲ್ಯಮಾಪನವನ್ನು ಪರಿಗಣಿಸಿದ ನಂತರ ಈ ಅನುದಾನವನ್ನು ಸ್ವೀಕರಿಸಲು ರಾಜ್ಯಗಳ ಅರ್ಹತೆ ಮತ್ತು ಅನುದಾನದ ಪ್ರಮಾಣವನ್ನು ಆಯೋಗವು ನಿರ್ಧರಿಸುತ್ತದೆ.

ಹದಿನೈದನೆಯ ಹಣಕಾಸು ಆಯೋಗವು ಪಿಡಿಆರ್‌ಡಿ ಅನುದಾನಕ್ಕೆ ಶಿಫಾರಸು ಮಾಡಿದ ರಾಜ್ಯಗಳು ಇಂತಿವೆ: ಆಂಧ್ರಪ್ರದೇಶ, ಅಸ್ಸಾಂ, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ. ಹದಿನೈದನೆಯ ಹಣಕಾಸು ಆಯೋಗವು 2021-22ರಲ್ಲಿ 17 ರಾಜ್ಯಗಳಿಗೆ ಒಟ್ಟು 1,18,452 ಕೋಟಿ ರೂಪಾಯಿ PDRD ಅನುದಾನವನ್ನು ಶಿಫಾರಸು ಮಾಡಿದೆ. ಈ ಪೈಕಿ 59,226 ಕೋಟಿ ರೂಪಾಯಿಗಳನ್ನು (ಶೇ 50) ಇದುವರೆಗೆ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಬಂಡವಾಳ ಯೋಜನೆಗಳ ವೆಚ್ಚಕ್ಕಾಗಿ ಕೇಂದ್ರದಿಂದ ಹೆಚ್ಚುವರಿಯಾಗಿ 15,000 ಕೋಟಿ ರೂ. ಬಿಡುಗಡೆ

(Revenue Deficit Grant Of Rs 9871 Crore Released To 17 States Including Karnataka Said By Finance Ministry)

ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ