AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ವಂಚನೆ ಪ್ರಕರಣಗಳ ಬಗ್ಗೆ ಚರ್ಚಿಸಲು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಸಭೆ ಕರೆದ ಸರ್ಕಾರ

Government Calls Meeting of Banks: ದೇಶಾದ್ಯಂತ ಡಿಜಿಟಲ್ ಪೇಮೆಂಟ್ ವಿಚಾರದಲ್ಲಿ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬರುವುದು ಹೆಚ್ಚುತ್ತಿದೆ. ಈ ಬಗ್ಗೆ ಸರ್ಕಾರ ಗಂಭೀರವಾಗಿದೆ. ಸೈಬರ್ ವಂಚನೆಗಳನ್ನು ನಿಗ್ರಹಿಸಲು ಏನೇನು ಕ್ರಮ ಕೈಗೊಳ್ಳಬಹುದು ಎಂದು ಅವಲೋಕಿಸಲು ಹಣಕಾಸು ಸಂಸ್ಥೆಗಳ ಸಭೆ ಕರೆಯಲಾಗಿದೆ. ಸರ್ಕಾರದ ವಿವಿಧ ಇಲಾಖೆ, ಸಂಸ್ಥೆ, ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿವೆ.

ಸೈಬರ್ ವಂಚನೆ ಪ್ರಕರಣಗಳ ಬಗ್ಗೆ ಚರ್ಚಿಸಲು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಸಭೆ ಕರೆದ ಸರ್ಕಾರ
ಸೈಬರ್ ವಂಚನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 28, 2023 | 1:45 PM

Share

ನವದೆಹಲಿ, ನವೆಂಬರ್ 28: ದೇಶಾದ್ಯಂತ ಸೈಬರ್ ವಂಚನೆ ಮತ್ತು ದತ್ತಾಂಶ ಕಳುವು (data breach) ಪ್ರಕರಣಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅದನ್ನು ನಿಯಂತ್ರಿಸುವ ಪ್ರಯತ್ನವಾಗಿ ಸರ್ಕಾರ ಹಣಕಾಸು ಸಂಸ್ಥೆಗಳ (fintech companies) ಸಭೆ ಕರೆದಿದೆ. ಸಿಎನ್​ಬಿಸಿ ವರದಿ ಪ್ರಕಾರ ಹಣಕಾಸು ಸಚಿವಾಲಯ ಹಾಗೂ ಆರ್​ಬಿಐ ಈ ಸಭೆ ಕರೆದಿರುವ ಈ ಸಭೆ ಇಂದು ನಡೆಯಲಿದೆ. ದೇಶದ ವಿವಿಧ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೈಬರ್ ವಂಚನೆ ಇತ್ಯಾದಿ ಘಟನೆಗಳನ್ನು ತಪ್ಪಿಸುವುದು ಹೇಗೆ, ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಇವೇ ಮುಂತಾದ ಸಂಗತಿಗಳನ್ನು ಈ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.

ಹಣಕಾಸು ಸೇವೆ ಇಲಾಖೆಯ ಕಾರ್ಯದರ್ಶಿ ಅವರು ಈ ಸಭೆಯ ನೇತೃತ್ವ ವಹಿಸುತ್ತಿದ್ದಾರೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ (ಎನ್​ಪಿಸಿಐ), ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಟೆಲಿಕಾಂ ಇಲಾಖೆ, ದೂರವಾಣಿ ನಿಯಂತ್ರಕ ಪ್ರಾಧಿಕಾರ (TRAI), ಆಧಾರ್​ನ ಯುಐಡಿಎಐ ಮತ್ತು ಎಫ್​ಐಯು ಅಧಿಕಾರಿಗಳೂ ಕೂಡ ಈ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: ಜೀವ ಪ್ರಮಾಣಪತ್ರ ಸಲ್ಲಿಸಲು ಎರಡೇ ದಿನ ಬಾಕಿ; ನ. 30ಕ್ಕೆ ಕೊಡದಿದ್ದರೆ ಪಿಂಚಣಿ ಸಿಗೋದಿಲ್ವಾ?

ಡಿಜಿಟಲ್ ಪೇಮೆಂಟ್ ವಿಚಾರದಲ್ಲಿ ದೇಶಾದ್ಯಂತ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಆಧಾರ್ ಗುರುತು ದುರುಪಯೋಗಿಸಿ ಹಣ ಲಪಟಾಯಿಸುತ್ತಿರುವ ಪ್ರಕರಣ ಇತ್ತೀಚೆಗೆ ಹೆಚ್ಚಾಗಿದೆ. ಈ ಪ್ರಕರಣಗಳನ್ನು ಸರ್ಕಾರ ಹಾಗೂ ಆರ್​ಬಿಐ ಗಂಭೀರವಾಗಿ ಪರಿಗಣಿಸಿದೆ. ಆದರೆ, ಇವುಗಳನ್ನು ನಿಯಂತ್ರಿಸುವುದು ಬಹಳ ಕ್ಲಿಷ್ಟಕರವಾದ ಸವಾಲಿನ ವಿಚಾರ. ಎಲ್ಲಾ ದೃಷ್ಟಿಕೋನದಿಂದಲೂ ಸಮಗ್ರವಾಗಿ ಇವತ್ತು ಚರ್ಚೆ ಆಗಬಹುದು. ಸೈಬರ್ ಸೆಕ್ಯೂರಿಟಿ ಭದ್ರಪಡಿಸಲು ಏಕೀಕೃತ ವಿಧಾನವನ್ನು ರೂಪಿಸಲು ಏನೇನು ಕ್ರಮ ಸಾಧ್ಯ ಎಂಬುದನ್ನು ಅವಲೋಕಿಸುವುದು ಈ ಸಭೆಯ ಒಟ್ಟಾರೆ ಗುರಿ.

ಇತ್ತೀಚೆಗೆ ಸರ್ಕಾರ ಗೂಗಲ್ ಸಂಸ್ಥೆಯನ್ನು ಸಂಪರ್ಕಿಸಿ, ಅಲ್ಲಿನ ಸೆಕ್ಯೂರಿಟಿ ತಂತ್ರಜ್ಞಾನವನ್ನು ಅರಿಯುವ ಪ್ರಯತ್ನ ಮಾಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Tue, 28 November 23

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ