AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ವಂಚನೆ ಪ್ರಕರಣಗಳ ಬಗ್ಗೆ ಚರ್ಚಿಸಲು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಸಭೆ ಕರೆದ ಸರ್ಕಾರ

Government Calls Meeting of Banks: ದೇಶಾದ್ಯಂತ ಡಿಜಿಟಲ್ ಪೇಮೆಂಟ್ ವಿಚಾರದಲ್ಲಿ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬರುವುದು ಹೆಚ್ಚುತ್ತಿದೆ. ಈ ಬಗ್ಗೆ ಸರ್ಕಾರ ಗಂಭೀರವಾಗಿದೆ. ಸೈಬರ್ ವಂಚನೆಗಳನ್ನು ನಿಗ್ರಹಿಸಲು ಏನೇನು ಕ್ರಮ ಕೈಗೊಳ್ಳಬಹುದು ಎಂದು ಅವಲೋಕಿಸಲು ಹಣಕಾಸು ಸಂಸ್ಥೆಗಳ ಸಭೆ ಕರೆಯಲಾಗಿದೆ. ಸರ್ಕಾರದ ವಿವಿಧ ಇಲಾಖೆ, ಸಂಸ್ಥೆ, ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿವೆ.

ಸೈಬರ್ ವಂಚನೆ ಪ್ರಕರಣಗಳ ಬಗ್ಗೆ ಚರ್ಚಿಸಲು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಸಭೆ ಕರೆದ ಸರ್ಕಾರ
ಸೈಬರ್ ವಂಚನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 28, 2023 | 1:45 PM

Share

ನವದೆಹಲಿ, ನವೆಂಬರ್ 28: ದೇಶಾದ್ಯಂತ ಸೈಬರ್ ವಂಚನೆ ಮತ್ತು ದತ್ತಾಂಶ ಕಳುವು (data breach) ಪ್ರಕರಣಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅದನ್ನು ನಿಯಂತ್ರಿಸುವ ಪ್ರಯತ್ನವಾಗಿ ಸರ್ಕಾರ ಹಣಕಾಸು ಸಂಸ್ಥೆಗಳ (fintech companies) ಸಭೆ ಕರೆದಿದೆ. ಸಿಎನ್​ಬಿಸಿ ವರದಿ ಪ್ರಕಾರ ಹಣಕಾಸು ಸಚಿವಾಲಯ ಹಾಗೂ ಆರ್​ಬಿಐ ಈ ಸಭೆ ಕರೆದಿರುವ ಈ ಸಭೆ ಇಂದು ನಡೆಯಲಿದೆ. ದೇಶದ ವಿವಿಧ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೈಬರ್ ವಂಚನೆ ಇತ್ಯಾದಿ ಘಟನೆಗಳನ್ನು ತಪ್ಪಿಸುವುದು ಹೇಗೆ, ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಇವೇ ಮುಂತಾದ ಸಂಗತಿಗಳನ್ನು ಈ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.

ಹಣಕಾಸು ಸೇವೆ ಇಲಾಖೆಯ ಕಾರ್ಯದರ್ಶಿ ಅವರು ಈ ಸಭೆಯ ನೇತೃತ್ವ ವಹಿಸುತ್ತಿದ್ದಾರೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ (ಎನ್​ಪಿಸಿಐ), ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಟೆಲಿಕಾಂ ಇಲಾಖೆ, ದೂರವಾಣಿ ನಿಯಂತ್ರಕ ಪ್ರಾಧಿಕಾರ (TRAI), ಆಧಾರ್​ನ ಯುಐಡಿಎಐ ಮತ್ತು ಎಫ್​ಐಯು ಅಧಿಕಾರಿಗಳೂ ಕೂಡ ಈ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: ಜೀವ ಪ್ರಮಾಣಪತ್ರ ಸಲ್ಲಿಸಲು ಎರಡೇ ದಿನ ಬಾಕಿ; ನ. 30ಕ್ಕೆ ಕೊಡದಿದ್ದರೆ ಪಿಂಚಣಿ ಸಿಗೋದಿಲ್ವಾ?

ಡಿಜಿಟಲ್ ಪೇಮೆಂಟ್ ವಿಚಾರದಲ್ಲಿ ದೇಶಾದ್ಯಂತ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಆಧಾರ್ ಗುರುತು ದುರುಪಯೋಗಿಸಿ ಹಣ ಲಪಟಾಯಿಸುತ್ತಿರುವ ಪ್ರಕರಣ ಇತ್ತೀಚೆಗೆ ಹೆಚ್ಚಾಗಿದೆ. ಈ ಪ್ರಕರಣಗಳನ್ನು ಸರ್ಕಾರ ಹಾಗೂ ಆರ್​ಬಿಐ ಗಂಭೀರವಾಗಿ ಪರಿಗಣಿಸಿದೆ. ಆದರೆ, ಇವುಗಳನ್ನು ನಿಯಂತ್ರಿಸುವುದು ಬಹಳ ಕ್ಲಿಷ್ಟಕರವಾದ ಸವಾಲಿನ ವಿಚಾರ. ಎಲ್ಲಾ ದೃಷ್ಟಿಕೋನದಿಂದಲೂ ಸಮಗ್ರವಾಗಿ ಇವತ್ತು ಚರ್ಚೆ ಆಗಬಹುದು. ಸೈಬರ್ ಸೆಕ್ಯೂರಿಟಿ ಭದ್ರಪಡಿಸಲು ಏಕೀಕೃತ ವಿಧಾನವನ್ನು ರೂಪಿಸಲು ಏನೇನು ಕ್ರಮ ಸಾಧ್ಯ ಎಂಬುದನ್ನು ಅವಲೋಕಿಸುವುದು ಈ ಸಭೆಯ ಒಟ್ಟಾರೆ ಗುರಿ.

ಇತ್ತೀಚೆಗೆ ಸರ್ಕಾರ ಗೂಗಲ್ ಸಂಸ್ಥೆಯನ್ನು ಸಂಪರ್ಕಿಸಿ, ಅಲ್ಲಿನ ಸೆಕ್ಯೂರಿಟಿ ತಂತ್ರಜ್ಞಾನವನ್ನು ಅರಿಯುವ ಪ್ರಯತ್ನ ಮಾಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Tue, 28 November 23

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ