AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ಮಾರ್ಪಡಿಸಲು ಎಸ್.ಎಂ. ಕೃಷ್ಣ ಪಾತ್ರವೇನು? ಇಲ್ಲಿದೆ ಎಸ್ಸೆಮ್ಕೆ ಸಾಧನೆಗಳ ಪಟ್ಟಿ

Role of SM Krishna in transforming Bengaluru: ಎಸ್.ಎಂ. ಕೃಷ್ಣ 1999ರಿಂದ 2004ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಅದಕ್ಕೂ ಮುನ್ನ ಅವರು ರಾಜಕೀಯದಲ್ಲಿ ಸಾಕಷ್ಟು ಅನುಭವಿ ಎನಿಸಿದ್ದರು. ಇವರ ಅಧಿಕಾರಾವಧಿಯಲ್ಲಿ ಕರ್ನಾಟಕದಲ್ಲಿ ಹೊಸ ಬದಲಾವಣೆಗಳಾದವು. ಹೊಸ ಪ್ರಯೋಗಗಳಾದವು. ಬೆಂಗಳೂರು ಸಿಲಿಕಾನ್ ಸಿಟಿಯಾಗಿ ಮಾರ್ಪಡಲು ಕೃಷ್ಣ ಅವರ ಪಾತ್ರ ದೊಡ್ಡದಿದೆ.

ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ಮಾರ್ಪಡಿಸಲು ಎಸ್.ಎಂ. ಕೃಷ್ಣ ಪಾತ್ರವೇನು? ಇಲ್ಲಿದೆ ಎಸ್ಸೆಮ್ಕೆ ಸಾಧನೆಗಳ ಪಟ್ಟಿ
ಎಸ್.ಎಂ. ಕೃಷ್ಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 10, 2024 | 11:10 AM

Share

ಎಸ್.ಎಂ. ಕೃಷ್ಣ ಎಂದರೆ ಥಟ್ಟನೆ ನೆನಪಾಗುವುದು ಸಿಲಿಕಾನ್ ಸಿಟಿ ಎಂದು ಕರೆಯುವ ಬೆಂಗಳೂರು ನಗರ. ವಿದೇಶಾಂಗ ಸಚಿವರಾದರೂ ಕೃಷ್ಣರನ್ನು ಬದಲಾವಣೆಗಳ ಹರಿಕಾರ ಎಂದೇ ಬೆಂಗಳೂರಿಗರು ನೆನಪಿಸಿಕೊಳ್ಳುತ್ತಾರೆ. ಹಲವು ದಶಕಗಳ ಕಾಲ ರಾಜಕಾರಣದಲ್ಲಿದ್ದರೂ ಎಸ್.ಎಂ. ಕೃಷ್ಣ ಮಾಸ್ ಲೀಡರ್ ಎಂದನಿಸಿದ್ದು ಮುಖ್ಯಮಂತ್ರಿ ಅದ ಬಳಿಕವೇ. ಬೆಂಗಳೂರನ್ನು ಸಿಂಗಾಪುರ ಮಾಡುವ ಕನಸಿನೊಂದಿಗೆ ಸಿಎಂ ಹುದ್ದೆ ನಿರ್ವಹಿಸತೊಡಗಿದ ಅವರು, ಸಿಂಗಾಪುರದ ರೀತಿಯಲ್ಲಿ ಬೆಂಗಳೂರನ್ನು ಮಾರ್ಪಡಿಸಲು ಆಗದೇ ಇದ್ದರೂ ಆ ನಿಟ್ಟಿನಲ್ಲಿ ಕಾಯಕಲ್ಪಗಳನ್ನು ನಿರ್ಮಿಸುವ ಕೆಲಸ ಮಾಡಿದ್ದು ಹೌದು.

ವೀರಪ್ಪ ಮೊಯಿಲಿ ಸಿಎಂ ಆಗಿದ್ದಾಗ ಎಸ್.ಎಂ. ಕೃಷ್ಣ ಉಪಮುಖ್ಯಮಂತ್ರಿಯಾಗಿದ್ದರು. ಆದರೆ, ಅವರು ಹೆಚ್ಚಾಗಿ ನೆನಪಾಗುವುದು ಸಿಎಂ ಆಗಿ ಮಾಡಿದ ಕಾರ್ಯಗಳಿಂದ. 1999ರಿಂದ 2004ರವರೆಗೆ ಅವರು ಸಿಎಂ ಆಗಿದ್ದಾಗ ರಾಜ್ಯದ ಅಭಿವೃದ್ಧಿ ಕಾರ್ಯ ಚುರುಕುಗೊಂಡಿತು. ಅದರಲ್ಲೂ ಬೆಂಗಳೂರಿಗೆ ಕೃಷ್ಣ ಹೆಚ್ಚು ಮುತುವರ್ಜಿ ತೋರಿದರು. ಅದರ ಪರಿಣಾಮವಾಗಿ ಇಂದು ಬೆಂಗಳೂರು ನಗರವು ಸಿಲಿಕಾನ್ ಸಿಟಿ, ಐಟಿ-ಬಿಟಿ ಸಿಟಿ ಎನಿಸಿದೆ.

ಟ್ಯಾಕ್ಸ್ ಇನ್ಸೆಂಟಿವ್ಸ್ ತಂದಿದ್ದ ಎಸ್.ಎಂ. ಕೃಷ್ಣ

ಮದ್ದೂರಿನಲ್ಲಿ ಹುಟ್ಟಿದ ಎಸ್.ಎಂ. ಕೃಷ್ಣ ಅವರು ಅಮೆರಿಕದ ಡಲ್ಲಾಸ್ ಮತ್ತು ವಾಷಿಂಗ್ಟನ್​ನಲ್ಲಿ ಉನ್ನತ ವ್ಯಾಸಂಗ ಮಾಡಿದವರಾಗಿದ್ದರು. ಹೀಗಾಗಿ, ಅವರ ಆಡಳಿತದ ಬಗ್ಗೆ ಜನರಲ್ಲಿ ಸಾಕಷ್ಟು ನಿರೀಕ್ಷೆ ಇತ್ತು. ಈ ನಿರೀಕ್ಷೆ ಉಳಿಸಿಕೊಳ್ಳಲು ಅವರು ತಮ್ಮ ಕೈಲಾದ ಕಾರ್ಯಗಳನ್ನು ಮಾಡಿದ್ದರು. ಅವರ ಕಾರ್ಯಗಳಲ್ಲಿ ಹೆಚ್ಚಾಗಿ ನೆನಪುಳಿಯುವುದು ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯ ಹೆಚ್ಚಿಸುವ ಕೆಲಸ.

ಇದನ್ನೂ ಓದಿ: ಎಸ್​ಎಂ ಕೃಷ್ಣ ಸುದೀರ್ಘ ರಾಜಕೀಯ ಜೀವನದ ಹಿನ್ನೋಟ

ಉದ್ಯಮಗಳಿಗೆ ಇದ್ದ ನಿಯಮಗಳನ್ನು ಸಡಿಲಿಸಿದರು. ಟ್ಯಾಕ್ಸ್ ಇನ್ಸೆಂಟಿವ್​ಗಳನ್ನು ನೀಡಿದರು. ಈ ನೀತಿಗಳಿಗೆ ಉದ್ಯಮ ವಲಯದಲ್ಲಿ ಮನ್ನಣೆ ಸಿಕ್ಕಿತು. ಹಲವು ಐಟಿ ಬಿಟಿ ಸಂಸ್ಥೆಗಳು ಬೆಂಗಳೂರಿನಲ್ಲಿ ನೆಲೆ ಕಾಣಲು ಈ ನೀತಿಗಳೇ ಕಾರಣವಾದವು. ಈ ಮೂಲಕ ಬೆಂಗಳೂರು ಸಿಲಿಕಾನ್ ಸಿಟಿ ಎನಿಸಿದೆ.

ಎಸ್.ಎಂ. ಕೃಷ್ಣ ಅವರಿಂದ ಮಾಡಲಾದ ಸಾಧನೆಗಳಿವು…

  • ಬೆಂಗಳೂರಿನಲ್ಲಿ ಐಟಿ, ಬಿಟಿ ಸೆಕ್ಟರ್ ಬೆಳವಣಿಗೆ ಚುರುಕುಗೊಳಿಸಿದರು.
  • ಬೆಂಗಳೂರಿಗೆ ಮೆಟ್ರೋ ರೈಲು ತರಲು ಅವರ ಪಾತ್ರ ಇತ್ತು
  • ಬೆಂಗಳೂರಿಗೆ ಏರ್ಪೋರ್ಟ್ ಬರಲು ಅವರ ಪಾತ್ರ ಇತ್ತು
  • ಅವರು ಸಿಎಂ ಆಗಿದ್ದ ಅವಧಿಯಲ್ಲಿ ವಿಕಾಸಸೌಧ ನಿರ್ಮಾಣ ಆಗಿತ್ತು
  • ಎಸ್.ಎಂ. ಕೃಷ್ಣ ಸಿಎಂ ಆಗಿದ್ದಾಗ ಸರ್ಕಾರದ ಆದಾಯ ಹೆಚ್ಚಿಸಿದರು. ಮೊದಲ ವರ್ಷ (1999) ಸರ್ಕಾರದ ಬಜೆಟ್ 13,000 ಕೋಟಿ ರೂ ಇತ್ತು. ಕೊನೆಯ ವರ್ಷ (2004) ಬಜೆಟ್ ಗಾತ್ರ 34,000 ಕೋಟಿ ರೂಗೆ ಏರಿತ್ತು.
  • ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿ
  • ರೈತರಿಗೆ ಯಶಸ್ವಿನಿ ಯೋಜನೆ ಜಾರಿ
  • ಇವರ ಅವಧಿಯಲ್ಲಿ ರಾಜ್ಯದಲ್ಲಿ ಹೆಚ್ಚಿದ ವಿದ್ಯುತ್ ಉತ್ಪಾದನೆ
  • ಗ್ರಾಮೀಣ ಭಾಗದಲ್ಲಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳ ವ್ಯವಸ್ಥೆಯನ್ನು ಗಟ್ಟಿಗೊಳಿಸಿದರು.
  • ನೀರಾವರಿ ಆಧುನೀಕರಣ
  • ರಾಜ್ಯ ರಸ್ತೆ ಮೂಲಸೌಕರ್ಯಗಳ ಅಭಿವೃದ್ಧಿ
  • ಬಿಎಂಟಿಸಿ, ಕೆಎಸ್ಸಾರ್ಟಿಸಿಗಳಿಗೆ ವೋಲ್ವೋದಂಥ ಲಕ್ಸುರಿ ಬಸ್ಸುಗಳನ್ನು ತರುವ ಪ್ರಯೋಗ ಇವರ ಕಾಲದಲ್ಲಾಯಿತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Tue, 10 December 24

Follow Us
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ