Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಸರ್ಕಾರದಿಂದ ಜನರಿಗೆ ಭರ್ಜರಿ ಗಿಫ್ಟ್: ಮಾಸಿಕ 1,500 ರೂ ಸಹಾಯಧನ, 3 ಉಚಿತ ಎಲ್​ಪಿಜಿ, ಪೆಟ್ರೋಲ್ ಬೆಲೆ ಇಳಿಕೆ ಇತ್ಯಾದಿ ಇತ್ಯಾದಿ

Maharashtra state budget 2024: ಚುನಾವಣೆಯ ಹೊಸ್ತಿಲಲ್ಲಿ ಇರುವ ಮಹಾರಾಷ್ಟ್ರದಲ್ಲಿ ಅಲ್ಲಿನ ಸರ್ಕಾರ ಜನಪ್ರಿಯ ಯೋಜನೆಗಳ ಮಹಾಪೂರವನ್ನೇ ಘೋಷಿಸಿದೆ. ಮಹಿಳೆಯರಿಗೆ ತಿಂಗಳಿಗೆ 1,500 ರೂ ಸಹಾಯಧನ, ಪ್ರತೀ ಮನೆಗೆ ಮೂರು ಉಚಿತ ಗ್ಯಾಸ್ ಸಿಲಂಡರ್ ಇತ್ಯಾದಿ ಸ್ಕೀಮ್​ಗಳನ್ನು ಪ್ರಕಟಿಸಲಾಗಿದೆ. ಪೆಟ್ರೋಲ್ ಮತ್ತು ಡೀಸಲ್ ಮೇಲಿನ ತೆರಿಗೆಯನ್ನು ಇಳಿಸಿ ಬೆಲೆ ಇಳಿಕೆಗೆ ಕಾರಣವಾಗಿದೆ.

ಮಹಾರಾಷ್ಟ್ರ ಸರ್ಕಾರದಿಂದ ಜನರಿಗೆ ಭರ್ಜರಿ ಗಿಫ್ಟ್: ಮಾಸಿಕ 1,500 ರೂ ಸಹಾಯಧನ, 3 ಉಚಿತ ಎಲ್​ಪಿಜಿ, ಪೆಟ್ರೋಲ್ ಬೆಲೆ ಇಳಿಕೆ ಇತ್ಯಾದಿ ಇತ್ಯಾದಿ
ಮಹಾರಾಷ್ಟ್ರ ಸರ್ಕಾರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 28, 2024 | 5:06 PM

ಮುಂಬೈ, ಜೂನ್ 28: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್​ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್​ನಲ್ಲಿ ಜನಪ್ರಿಯ ಸ್ಕೀಮ್​ಗಳಿಗೆ ಶರಣಾಗಿದೆ. ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಮಹಿಳೆಯರಿಗೆ ಸರ್ಕಾರ ಮಾಸಿಕ ಸಹಾಯಧನ ಒದಗಿಸಲು ಘೋಷಿಸಿದೆ. 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಮಹಿಳೆಯರಿಗೆ ಮಾಸಿಕವಾಗಿ 1,500 ರೂ ನೀಡುವುದಾಗಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಮ್ಮ ಬಜೆಟ್​ನಲ್ಲಿ ತಿಳಿಸಿದ್ದಾರೆ. ಕರ್ನಾಟಕದ ಗೃಹಲಕ್ಷ್ಮೀ ಸ್ಕೀಮ್​ನಲ್ಲಿ ಅರ್ಹ ಫಲಾನುಭವಿ ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ರೂ ಸಿಗುತ್ತದೆ.

ಎನ್​ಸಿಪಿ ಬಂಡಾಯ ಗುಂಪಿನ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಹಣಕಾಸು ಖಾತೆಯನ್ನೂ ಹೊಂದಿದ್ದು, ಇಂದು ಶುಕ್ರವಾರ ಬಜೆಟ್ ಮಂಡನೆ ಮಾಡಿದ್ದಾರೆ. ಇದೇ ಅಕ್ಟೋಬರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇದ್ದು ಜನಪ್ರಿಯತೆ ಗಿಟ್ಟಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಬೇಕಾಗಿದೆ. ಈ ಬಾರಿಯ ಬಜೆಟ್​ನಲ್ಲಿ ಸಹಜವಾಗಿಯೇ ಬಹಳಷ್ಟು ಜನಪ್ರಿಯವೆನಿಸುವ ಸ್ಕೀಮ್​ಗಳನ್ನು ಘೋಷಿಸಲಾಗಿದೆ. ಇವುಗಳ ವಿವರ ಇಲ್ಲಿದೆ…

  • 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಅರ್ಹ ಮಹಿಳೆಯರಿಗೆ ತಿಂಗಳಿಗೆ 1,500 ರೂ ಸಹಾಯಧನ ಒದಗಿಸುವ ಯೋಜನೆ.
  • ಮುಖ್ಯಮಂತ್ರಿ ಮಝಿ ಲಡ್ಕಿ ಬಾಹಿನ್ ಯೋಜನೆಗೆ ವರ್ಷಕ್ಕೆ 46,000 ಕೋಟಿ ರೂ ಫಂಡಿಗ್ ಬೇಕಾಗುತ್ತದೆ.
  • ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ ಅಡಿಯಲ್ಲಿ ಐದು ಮಂದಿ ಇರುವ ಅರ್ಹ ಕುಟುಂಬವೊಂದಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲದ ಸಿಲಿಂಡರ್​ಗಳು ಉಚಿತವಾಗಿ ಸಿಗುತ್ತವೆ.
  • ಮಹಾರಾಷ್ಟ್ರದ ಹತ್ತಿ ಮತ್ತು ಸೋಯಾಬೀನ್ ಬೆಳೆಗಳಿಗೆ ಪ್ರತೀ ಹೆಕ್ಟೇರ್​ಗೆ 5,000 ರೂ ಬೋನಸ್ ಹಣವನ್ನು ರೈತರಿಗೆ ನೀಡಲಾಗುತ್ತದೆ.
  • ಹಾಲು ಉತ್ಪಾದಕ ರೈತರಿಗೆ ಜುಲೈ 1ರ ಬಳಿಕ ಪ್ರತೀ ಲೀಟರ್ ಹಾಲಿಗೆ 5 ರೂ ಹೆಚ್ಚುವರಿ ಬೋನಸ್ ಕೊಡಲಾಗುತ್ತದೆ.
  • ಪ್ರಾಣಿಗಳ ದಾಳಿಯಿಂದ ಮೃತ ಪಡುವ ವ್ಯಕ್ತಿಗಳ ಸಂಬಂಧಿಕರಿಗೆ ನೀಡಲಾಗುವ ಪರಿಹಾರ ಹಣವನ್ನು 20 ಲಕ್ಷ ರೂನಿಂದ 25 ಲಕ್ಷ ರೂಗೆ ಏರಿಸಲಾಗಿದೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ: ಮೃತರಿಗೆ ₹20 ಲಕ್ಷ ಪರಿಹಾರ, ತನಿಖೆಗೆ ಕೇಂದ್ರ ಆದೇಶ

ಪೆಟ್ರೋಲ್ ಬೆಲೆ ಇಳಿಕೆ

ಪೆಟ್ರೋಲ್ ಮತ್ತು ಡೀಸಲ್ ಮೇಲಿನ ತೆರಿಗೆಯನ್ನು ಮಹಾರಾಷ್ಟ್ರ ಸರ್ಕಾರ ಇದೇ ವೇಳೆ ಇಳಿಕೆ ಮಾಡಿದೆ. ಪೆಟ್ರೋಲ್ ಮೇಲೆ ಶೇ. 26 ಇದ್ದ ಟ್ಯಾಕ್ಸ್ ಅನ್ನು ಶೇ. 25ಕ್ಕೆ ಇಳಿಸಲಾಗಿದೆ. ಡೀಸಲ್ ಮೇಲೆ ಶೇ. 24ರಷ್ಟಿದ್ದ ತೆರಿಗೆಯನ್ನು ಶೇ. 21ಕ್ಕೆ ಇಳಿಸಲಾಗಿದೆ. ಇದರೊಂದಿಗೆ ಮುಂಬೈನಲ್ಲಿ ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆ ಆದರೆ, ಡೀಸಲ್ ಬೆಲೆ ಎರಡು ರೂನಷ್ಟು ತಗ್ಗಲಿದೆ.

ಸದ್ಯ ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ ಇದ್ದರೆ, ಡೀಸಲ್ ಬೆಲೆ ಲೀಟರ್​ಗೆ 92.15 ರೂ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ