AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಸರ್ಕಾರದಿಂದ ಜನರಿಗೆ ಭರ್ಜರಿ ಗಿಫ್ಟ್: ಮಾಸಿಕ 1,500 ರೂ ಸಹಾಯಧನ, 3 ಉಚಿತ ಎಲ್​ಪಿಜಿ, ಪೆಟ್ರೋಲ್ ಬೆಲೆ ಇಳಿಕೆ ಇತ್ಯಾದಿ ಇತ್ಯಾದಿ

Maharashtra state budget 2024: ಚುನಾವಣೆಯ ಹೊಸ್ತಿಲಲ್ಲಿ ಇರುವ ಮಹಾರಾಷ್ಟ್ರದಲ್ಲಿ ಅಲ್ಲಿನ ಸರ್ಕಾರ ಜನಪ್ರಿಯ ಯೋಜನೆಗಳ ಮಹಾಪೂರವನ್ನೇ ಘೋಷಿಸಿದೆ. ಮಹಿಳೆಯರಿಗೆ ತಿಂಗಳಿಗೆ 1,500 ರೂ ಸಹಾಯಧನ, ಪ್ರತೀ ಮನೆಗೆ ಮೂರು ಉಚಿತ ಗ್ಯಾಸ್ ಸಿಲಂಡರ್ ಇತ್ಯಾದಿ ಸ್ಕೀಮ್​ಗಳನ್ನು ಪ್ರಕಟಿಸಲಾಗಿದೆ. ಪೆಟ್ರೋಲ್ ಮತ್ತು ಡೀಸಲ್ ಮೇಲಿನ ತೆರಿಗೆಯನ್ನು ಇಳಿಸಿ ಬೆಲೆ ಇಳಿಕೆಗೆ ಕಾರಣವಾಗಿದೆ.

ಮಹಾರಾಷ್ಟ್ರ ಸರ್ಕಾರದಿಂದ ಜನರಿಗೆ ಭರ್ಜರಿ ಗಿಫ್ಟ್: ಮಾಸಿಕ 1,500 ರೂ ಸಹಾಯಧನ, 3 ಉಚಿತ ಎಲ್​ಪಿಜಿ, ಪೆಟ್ರೋಲ್ ಬೆಲೆ ಇಳಿಕೆ ಇತ್ಯಾದಿ ಇತ್ಯಾದಿ
ಮಹಾರಾಷ್ಟ್ರ ಸರ್ಕಾರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 28, 2024 | 5:06 PM

Share

ಮುಂಬೈ, ಜೂನ್ 28: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್​ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್​ನಲ್ಲಿ ಜನಪ್ರಿಯ ಸ್ಕೀಮ್​ಗಳಿಗೆ ಶರಣಾಗಿದೆ. ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಮಹಿಳೆಯರಿಗೆ ಸರ್ಕಾರ ಮಾಸಿಕ ಸಹಾಯಧನ ಒದಗಿಸಲು ಘೋಷಿಸಿದೆ. 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಮಹಿಳೆಯರಿಗೆ ಮಾಸಿಕವಾಗಿ 1,500 ರೂ ನೀಡುವುದಾಗಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಮ್ಮ ಬಜೆಟ್​ನಲ್ಲಿ ತಿಳಿಸಿದ್ದಾರೆ. ಕರ್ನಾಟಕದ ಗೃಹಲಕ್ಷ್ಮೀ ಸ್ಕೀಮ್​ನಲ್ಲಿ ಅರ್ಹ ಫಲಾನುಭವಿ ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ರೂ ಸಿಗುತ್ತದೆ.

ಎನ್​ಸಿಪಿ ಬಂಡಾಯ ಗುಂಪಿನ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಹಣಕಾಸು ಖಾತೆಯನ್ನೂ ಹೊಂದಿದ್ದು, ಇಂದು ಶುಕ್ರವಾರ ಬಜೆಟ್ ಮಂಡನೆ ಮಾಡಿದ್ದಾರೆ. ಇದೇ ಅಕ್ಟೋಬರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇದ್ದು ಜನಪ್ರಿಯತೆ ಗಿಟ್ಟಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಬೇಕಾಗಿದೆ. ಈ ಬಾರಿಯ ಬಜೆಟ್​ನಲ್ಲಿ ಸಹಜವಾಗಿಯೇ ಬಹಳಷ್ಟು ಜನಪ್ರಿಯವೆನಿಸುವ ಸ್ಕೀಮ್​ಗಳನ್ನು ಘೋಷಿಸಲಾಗಿದೆ. ಇವುಗಳ ವಿವರ ಇಲ್ಲಿದೆ…

  • 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಅರ್ಹ ಮಹಿಳೆಯರಿಗೆ ತಿಂಗಳಿಗೆ 1,500 ರೂ ಸಹಾಯಧನ ಒದಗಿಸುವ ಯೋಜನೆ.
  • ಮುಖ್ಯಮಂತ್ರಿ ಮಝಿ ಲಡ್ಕಿ ಬಾಹಿನ್ ಯೋಜನೆಗೆ ವರ್ಷಕ್ಕೆ 46,000 ಕೋಟಿ ರೂ ಫಂಡಿಗ್ ಬೇಕಾಗುತ್ತದೆ.
  • ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ ಅಡಿಯಲ್ಲಿ ಐದು ಮಂದಿ ಇರುವ ಅರ್ಹ ಕುಟುಂಬವೊಂದಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲದ ಸಿಲಿಂಡರ್​ಗಳು ಉಚಿತವಾಗಿ ಸಿಗುತ್ತವೆ.
  • ಮಹಾರಾಷ್ಟ್ರದ ಹತ್ತಿ ಮತ್ತು ಸೋಯಾಬೀನ್ ಬೆಳೆಗಳಿಗೆ ಪ್ರತೀ ಹೆಕ್ಟೇರ್​ಗೆ 5,000 ರೂ ಬೋನಸ್ ಹಣವನ್ನು ರೈತರಿಗೆ ನೀಡಲಾಗುತ್ತದೆ.
  • ಹಾಲು ಉತ್ಪಾದಕ ರೈತರಿಗೆ ಜುಲೈ 1ರ ಬಳಿಕ ಪ್ರತೀ ಲೀಟರ್ ಹಾಲಿಗೆ 5 ರೂ ಹೆಚ್ಚುವರಿ ಬೋನಸ್ ಕೊಡಲಾಗುತ್ತದೆ.
  • ಪ್ರಾಣಿಗಳ ದಾಳಿಯಿಂದ ಮೃತ ಪಡುವ ವ್ಯಕ್ತಿಗಳ ಸಂಬಂಧಿಕರಿಗೆ ನೀಡಲಾಗುವ ಪರಿಹಾರ ಹಣವನ್ನು 20 ಲಕ್ಷ ರೂನಿಂದ 25 ಲಕ್ಷ ರೂಗೆ ಏರಿಸಲಾಗಿದೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ: ಮೃತರಿಗೆ ₹20 ಲಕ್ಷ ಪರಿಹಾರ, ತನಿಖೆಗೆ ಕೇಂದ್ರ ಆದೇಶ

ಪೆಟ್ರೋಲ್ ಬೆಲೆ ಇಳಿಕೆ

ಪೆಟ್ರೋಲ್ ಮತ್ತು ಡೀಸಲ್ ಮೇಲಿನ ತೆರಿಗೆಯನ್ನು ಮಹಾರಾಷ್ಟ್ರ ಸರ್ಕಾರ ಇದೇ ವೇಳೆ ಇಳಿಕೆ ಮಾಡಿದೆ. ಪೆಟ್ರೋಲ್ ಮೇಲೆ ಶೇ. 26 ಇದ್ದ ಟ್ಯಾಕ್ಸ್ ಅನ್ನು ಶೇ. 25ಕ್ಕೆ ಇಳಿಸಲಾಗಿದೆ. ಡೀಸಲ್ ಮೇಲೆ ಶೇ. 24ರಷ್ಟಿದ್ದ ತೆರಿಗೆಯನ್ನು ಶೇ. 21ಕ್ಕೆ ಇಳಿಸಲಾಗಿದೆ. ಇದರೊಂದಿಗೆ ಮುಂಬೈನಲ್ಲಿ ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆ ಆದರೆ, ಡೀಸಲ್ ಬೆಲೆ ಎರಡು ರೂನಷ್ಟು ತಗ್ಗಲಿದೆ.

ಸದ್ಯ ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ ಇದ್ದರೆ, ಡೀಸಲ್ ಬೆಲೆ ಲೀಟರ್​ಗೆ 92.15 ರೂ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ