AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂ 2,000 ನೋಟು ಇನ್ನೂ ಇವೆಯಾ?; ಕೆಲವೇ ಕಡೆ ನೋಟು ವಿನಿಮಯಕ್ಕೆ ಇನ್ನೂ ಇದೆ ಅವಕಾಶ; ಇಲ್ಲಿದೆ ಡೀಟೇಲ್ಸ್

Rs 2,000 Notes: ಮೈ 19ರಂದು 2,000 ರೂ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲಾಗಿತ್ತು. ಸೆಪ್ಟೆಂಬರ್ 30ರವರೆಗೂ ಅವುಗಳನ್ನು ಮರಳಿಸಲು ಡೆಡ್​ಲೈನ್ ನೀಡಲಾಗಿತ್ತು. ಬಳಿಕ ಅಕ್ಟೋಬರ್ 7ಕ್ಕೆ ಗಡುವನ್ನು ವಿಸ್ತರಿಸಲಾಯಿತು. ಇದೀಗ ಈ ವಿಸ್ತರಿತ ಡೆಡ್​ಲೈನ್ ಕೂಡ ಮುಗಿದಿದೆ. ಇನ್ನೀಗ ದೇಶಾದ್ಯಂತ 19 ಆರ್​ಬಿಐ ಇಷ್ಯೂ ಆಫೀಸ್​ಗಳಲ್ಲಿ 2,000 ರೂ ನೋಟುಗಳನ್ನು ವಿನಿಮಯ ಮಾಡಬಹುದಾಗಿದೆ.

ರೂ 2,000 ನೋಟು ಇನ್ನೂ ಇವೆಯಾ?; ಕೆಲವೇ ಕಡೆ ನೋಟು ವಿನಿಮಯಕ್ಕೆ ಇನ್ನೂ ಇದೆ ಅವಕಾಶ; ಇಲ್ಲಿದೆ ಡೀಟೇಲ್ಸ್
2,000 ರೂ ನೋಟು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 08, 2023 | 10:29 AM

Share

ನವದೆಹಲಿ, ಅಕ್ಟೋಬರ್ 8: ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ವಿನಿಯಮ ಮಾಡಲು ಅಕ್ಟೋಬರ್ 7ರವರೆಗೂ ಇದ್ದ ಡೆಡ್​ಲೈನ್ ಮುಗಿದಿದೆ. ಆದರೆ, ಆರ್​ಬಿಐನ ಕೆಲ ಕಚೇರಿಗಳಲ್ಲಿ (RBI Issue Offices) ನೋಟು ವಿನಿಮಯಕ್ಕೆ ಇನ್ನೂ ಕೂಡ ಅವಕಾಶ ಇದೆ. ಎಷ್ಟು ದಿನಗಳವರೆಗೆ ಈ ಅವಕಾಶ ಇರುತ್ತದೆಂಬುದು ನಿರ್ದಿಷ್ಟವಾಗಿಲ್ಲ. ಆರ್​ಬಿಐನಿಂದ ಮುಂದಿನ ನಿರ್ದೇಶನ ಬರುವವರೆಗೂ ಈ ಅವಕಾಶ ಇರುತ್ತದೆ. ಕಳೆದ ವಾರ ಆರ್​ಬಿಐ ನೀಡಿದ ಮಾಹಿತಿ ಪ್ರಕಾರ ಆರ್​ಬಿಐನ 19 ಇಷ್ಯೂ ಆಫೀಸ್​ಗಳಲ್ಲಿ 2,000 ರೂ ನೋಟು ವಿನಿಮಯಕ್ಕೆ ಅವಕಾಶ ಇದೆ. ಇದರಲ್ಲಿ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಆರ್​ಬಿಐ ಕಚೇರಿಯೂ ಒಂದು.

2023ರ ಮೇ 19ರಂದು ಆರ್​ಬಿಐ 2,000 ರೂ ಮುಖಬೆಲೆ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದುಕೊಳ್ಳುತ್ತಿರುವುದಾಗಿ ತಿಳಿಸಿತು. ಈ ನೋಟಿನ ಬಾಳಿಕೆ ಅವಧಿ ಮುಗಿದಿದ್ದರಿಂದ ಬ್ಯಾಂಕಿಂಗ್ ಪ್ರಕ್ರಿಯೆಯ ಭಾಗವಾಗಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುತ್ತಿರುವುದಾಗಿ ಆರ್​ಬಿಐ ತಿಳಿಸಿತು.

ನೋಟುಗಳನ್ನು ಬ್ಯಾಂಕ್ ಖಾತೆಗೆ ಠೇವಣಿ ಇಡಲು ಅಥವಾ ಬೇರೆ ನೋಟುಗಳೊಂದಿಗೆ ವಿನಿಮಯ ಮಾಡಲು ಸೆಪ್ಟೆಂಬರ್ 30ರವರೆಗೂ ಅವಕಾಶ ನೀಡಲಾಯಿತು. ಬಳಿಕ ಡೆಡ್​ಲೈನ್ ಅನ್ನು ಅಕ್ಟೋಬರ್ 7ರವರೆಗೂ ವಿಸ್ತರಿಸಿತು. ಯಾವುದೇ ಬ್ಯಾಂಕ್ ಕಚೇರಿಗೆ ಹೋಗಿ ನೋಟು ವಿನಿಮಯ ಮಾಡುವ ಅವಕಾಶ ಇತ್ತು. ಈಗ ಅಕ್ಟೋಬರ್ 7ರ ವಿಸ್ತರಿತ ಡೆಡ್​ಲೈನ್ ಕೂಡ ಮುಗಿದು ಹೋಗಿದೆ. ಆದರೂ 2,000 ರೂ ನೋಟು ಅಮಾನ್ಯವಾಗಿಲ್ಲ. ಈಗಲೂ ಕೂಡ ಈ ನೋಟುಗಳನ್ನು ವಿನಿಮಯ ಮಾಡಬಹುದು. ಆದರೆ, ನಿರ್ದಿಷ್ಟ ಆರ್​ಬಿಐ ಕಚೇರಿಗಳಲ್ಲಿ ಮಾತ್ರವೇ ಇದಕ್ಕೆ ಅವಕಾಶ ಇದೆ.

ಇದನ್ನೂ ಓದಿ: ಚಲಾವಣೆಯಿಂದ ಹಿಂಪಡೆಯಲಾದ 2,000 ರೂ ನೋಟುಗಳಲ್ಲಿ ಈವರೆಗೆ ಮರಳಿರುವುದು ಎಷ್ಟು? ಆರ್​ಬಿಐ ನೀಡಿದ ಮಾಹಿತಿ ಇದು

2,000 ರೂ ನೋಟು ವಿನಿಮಯಕ್ಕೆ ನಿರ್ದಿಷ್ಟಪಡಿಸಿದ 19 ಆರ್​ಬಿಐ ಇಷ್ಯೂ ಕಚೇರಿಗಳಿರುವ ನಗರಗಳು

  1. ಅಹ್ಮದಾಬಾದ್
  2. ಬೆಂಗಳೂರು
  3. ಭುವನೇಶ್ವರ್
  4. ಮುಂಬೈ
  5. ನವಿ ಮುಂಬೈ
  6. ಭೋಪಾಲ್
  7. ಲಕ್ನೋ
  8. ಚಂಡೀಗಡ
  9. ಚೆನ್ನೈ
  10. ಗುವಾಹಟಿ
  11. ಹೈದರಾಬಾದ್
  12. ಜಮ್ಮು
  13. ಜೈಪುರ್
  14. ಕಾನಪುರ್
  15. ಕೋಲ್ಕತಾ
  16. ನಾಗಪುರ್
  17. ನವದೆಹಲಿ
  18. ಪಾಟ್ನಾ
  19. ತಿರುವನಂತಪುರಂ

ಇದನ್ನೂ ಓದಿ: 52ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಪ್ರಮುಖ ನಿರ್ಧಾರಗಳೇನು? ಸಿರಿಧ್ಯಾನದ ಮೇಲಿನ ಸರಕು-ಸೇವೆ ತೆರಿಗೆ ಇಳಿಸಿದ ಕೇಂದ್ರ

ಇಲ್ಲಿ ಮೇಲಿನ ಪಟ್ಟಿಯಲ್ಲಿರುವ ನಗರಗಳಲ್ಲಿನ ಆರ್​ಬಿಐ ಕಚೇರಿಗಳಲ್ಲಿ ಇಷ್ಯೂ ವಿಭಾಗಕ್ಕೆ ಹೋಗಿ ಅಲ್ಲಿ ಎಷ್ಟು ಪ್ರಮಾಣದ 2,000 ರೂ ನೋಟುಗಳನ್ನು ಬೇಕಾದರೂ ನಿಮ್ಮ ಬ್ಯಾಂಕ್ ಖಾತೆಗೆ ಠೇವಣಿ ಇಡಬಹುದು, ಅಥವಾ ನೋಟು ವಿನಿಮಯ ಮಾಡಿಕೊಳ್ಳಬಹುದು. ನೀವು ನೋಟು ವಿನಿಮಯ ಮಾಡುವುದಾದರೆ ಸೂಕ್ತ ಐಡಿ ಪ್ರೂಫ್ ಒದಗಿಸಬೇಕಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ