AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಕ್ಲೇಮ್ ಆಗದೇ ಉಳಿದಿರುವ ಹಣ ಎಷ್ಟು ಗೊತ್ತಾ? ಅನ್​ಕ್ಲೇಮ್ಡ್ ಡೆಪಾಸಿಟ್ ಮರಳಿಪಡೆಯುವುದು ಹೇಗೆ?

RBI campaign to return unclaimed bank deposits: ಹತ್ತಕ್ಕೂ ಹೆಚ್ಚು ವರ್ಷಗಳಿಂದ ನಿಷ್ಕ್ರಿಯವಾಗಿರುವ ಬ್ಯಾಂಕ್ ಖಾತೆಗಳು ಮತ್ತು ಠೇವಣಿಗಳನ್ನು ವಿಶೇಷ ನಿಧಿಗೆ ವರ್ಗಾವಣೆ ಮಾಡಲಾಗುತ್ತದೆ. ಈ ರೀತಿ ದೇಶಾದ್ಯಂತ 75,000 ಕೋಟಿ ರೂನಷ್ಟು ಮೊತ್ತದ ಹಣ ಈ ನಿಧಿಯಲ್ಲಿದೆ. ಕರ್ನಾಟಕದ ವಿವಿಧ ಬ್ಯಾಂಕುಗಳ ಇಂಥ ಹಣವೇ 3,400 ಕೋಟಿ ರೂ ಇದೆ ಎನ್ನಲಾಗಿದೆ.

ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಕ್ಲೇಮ್ ಆಗದೇ ಉಳಿದಿರುವ ಹಣ ಎಷ್ಟು ಗೊತ್ತಾ? ಅನ್​ಕ್ಲೇಮ್ಡ್ ಡೆಪಾಸಿಟ್ ಮರಳಿಪಡೆಯುವುದು ಹೇಗೆ?
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 25, 2025 | 12:58 PM

Share

ಮಂಗಳೂರು, ಡಿಸೆಂಬರ್ 25: ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ ಕ್ಲೇಮ್ ಆಗದೇ ಉಳಿದಿರುವ ಹಣ 3,400 ಕೋಟಿ ರೂನಷ್ಟಿದೆಯಂತೆ. ಆರ್​ಬಿಐ (RBI) ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಈ ಮಾಹಿತಿ ನೀಡಿದ್ದಾರೆ. ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು ಜಿಲ್ಲಾ ಮಟ್ಟದ ಪರಾಮರ್ಶೆ ಸಮಿತಿ (ಡಿಎಲ್​ಆರ್​ಸಿ) ಸಭೆಯಲ್ಲಿ ಆರ್​ಬಿಐ ಅಧಿಕಾರಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಹತ್ತಕ್ಕೂ ಹೆಚ್ಚು ವರ್ಷಗಳಿಂದ ಬ್ಯಾಂಕ್ ಖಾತೆಗಳು, ಡೆಪಾಸಿಟ್ ಪ್ಲಾನ್​ಗಳು ಬಳಕೆ ಇಲ್ಲದೇ ನಿಷ್ಕ್ರಿಯವಾಗಿದ್ದರೆ ಅದನ್ನು ಆರ್​ಬಿಐನ ಠೇವಣಿದಾರ ಶಿಕ್ಷಣ ಮತ್ತು ಜಾಗೃತಿ ನಿಧಿ (ಡಿಇಎಎಫ್) ಎನ್ನುವ ವಿಶೇಷ ನಿಧಿಗೆ ವರ್ಗಾವಣೆ ಮಾಡಲಾಗುತ್ತದೆ. ರಾಷ್ಟ್ರಾದ್ಯಂತ ಎಲ್ಲಾ ಬ್ಯಾಂಕುಗಳ ನಿಷ್ಕ್ರಿಯ ಅಕೌಂಟ್​ಗಳಿಂದ ಆರ್​ಬಿಐನ ಡಿಇಎಎಫ್ ಫಂಡ್​ಗೆ ವರ್ಗಾವಣೆ ಆಗಿರುವುದು ಒಟ್ಟು ಮೊತ್ತ ಸುಮಾರು 75,000 ಕೋಟಿ ರೂ ಆಸುಪಾಸು ಇದೆ. ಈ ಪೈಕಿ ಕರ್ನಾಟಕದ ಬ್ಯಾಂಕುಗಳ ಠೇವಣಿದಾರರ ಅನ್​ಕ್ಲೇಮ್ಡ್ ಡೆಪಾಸಿಟ್​ಗಳ ಮೊತ್ತವೇ 3,400 ಕೋಟಿ ರೂ ಇದೆ.

ಇದನ್ನೂ ಓದಿ: ಬರಲಿವೆ ಹೊಸ ಏರ್ಲೈನ್ಸ್; ಶಂಖ್ ಏರ್ ಆಯ್ತು, ಈಗ ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್​ಗೂ ಸಿಕ್ಕಿತು ಎನ್​ಒಸಿ

ಸಮಾಧಾನದ ಸಂಗತಿ ಎಂದರೆ, ಕ್ಲೇಮ್ ಆಗದ ಶೇ. 80ರಷ್ಟು ಅಕೌಂಟ್​ಗಳಲ್ಲಿ ಇರುವ ಹಣ 10,000 ರೂಗಿಂತ ಕಡಿಮೆ. ಹಲವು ದಶಕಗಳ ಹಿಂದೆಯೇ ಇವು ನಿಷ್ಕ್ರಿಯಗೊಂಡಿವೆ. ಮೊಬೈಲ್ ನಂಬರ್ ಅಪ್​ಡೇಟ್ ಆಗದೇ ಇರುವುದು, ಕೆವೈಸಿ ಅಪ್​ಡೇಟ್ ಆಗದಿರುವುದು, ಖಾತೆದಾರರು ಜೀವಂತ ಇಲ್ಲದಿರುವುದು, ಇತ್ಯಾದಿ ಕಾರಣಕ್ಕೆ ಅಕೌಂಟ್​ಗಳು ಇನಾಪರೇಟಿವ್ ಆಗಿವೆ.

ಗ್ರಾಹಕರಿಗೆ ಹಣ ಮರಳಿಸಲು ಆರ್​ಬಿಐ ಅಭಿಯಾನ

ಬ್ಯಾಂಕುಗಳಲ್ಲಿ ಕ್ಲೇಮ್ ಆಗದೇ ಉಳಿದಿರುವ ಹಣವನ್ನು ಖಾತೆದಾರರಿಗೆ ಅಥವಾ ವಾರಸುದಾರರಿಗೆ ತಲುಪಿಸಲು ಆರ್​ಬಿಐ ಒಂದು ದೊಡ್ಡ ಅಭಿಯಾನವನ್ನೇ ನಡೆಸಿದೆ. ಮೂರು ತಿಂಗಳ ಹಿಂದೆ ಆರಂಭವಾದ ಈ ‘ನಿಮ್ಮ ಹಣ ನಿಮ್ಮ ಹಕ್ಕು’ ಕೆಂಪೇನ್ ಡಿಸೆಂಬರ್ 31ರವರೆಗೂ ಇರಲಿದೆ. ಈ ಅಕೌಂಟ್​ಗಳ ಖಾತೆದಾರರನ್ನು ಗುರುತಿಸಿ, ಅವರು ಜೀವಂತ ಇದ್ದರೆ ಖಾತೆ ಸಕ್ರಿಯಗೊಳಿಸುವುದೋ ಅಥವಾ ಹಣ ಮರಳಿಸುವುದೋ ಮಾಡಲಾಗುತ್ತದೆ. ಜೀವಂತ ಇಲ್ಲದಿದ್ದರೆ ವಾರಸುದಾರರಿಗೆ ಹಣ ಮರಳಿಸುವ ಪ್ರಯತ್ನ ಮಾಡಲಾಗುತ್ತದೆ.

ವಾರಸುದಾರರು ಹಣ ಕ್ಲೇಮ್ ಮಾಡುವುದು ಹೇಗೆ?

ಆರ್​ಬಿಐ ಪ್ರಕಟಿಸಿರುವ ಮಾಹಿತಿ ಪ್ರಕಾರ, ಅನ್​ಕ್ಲೇಮ್ಡ್ ಡೆಪಾಸಿಟ್​ಗಳು ಯಾವುವು ಎಂದು ವೀಕ್ಷಿಸಲು ಪ್ರತ್ಯೇಕ ಪೋರ್ಟಲ್ ರಚಿಸಲಾಗಿದೆ: udgam.rbi.org.in/

ಇದನ್ನೂ ಓದಿ: ಭಾರತದೊಂದಿಗೆ ಇದು ಕೆಟ್ಟ ಒಪ್ಪಂದ: ನ್ಯೂಜಿಲೆಂಡ್ ಸರ್ಕಾರದೊಳಗೆಯೇ ಅಪಸ್ವರ; ಇವರ ತಕರಾರುಗಳೇನು?

ಇಲ್ಲಿಗೆ ಹೋಗಿ ಖಾತೆದಾರ ಹೆಸರು, ಬ್ಯಾಂಕನ್ನು ಆಯ್ಕೆ ಮಾಡಿಕೊಂಡು, ಪ್ಯಾನ್ ಅಥವಾ ವೋಟರ್ ಐಡಿ, ಡಿಎಲ್, ಪಾಸ್ಪೋರ್ಟ್ ನಂಬರ್​ನಿಂದ ಸರ್ಚ್ ಮಾಡಿ ನಿಮ್ಮದೋ ಅಥವಾ ಪೋಷಕರದ್ದೋ ಅನ್​ಕ್ಲೇಮ್ಡ್ ಡೆಪಾಸಿಟ್ ಇದ್ದರೆ ಪತ್ತೆ ಮಾಡಬಹುದು.

ಅಥವಾ, ಕ್ಲೇಮ್ ಆಗದೇ ಯಾವುದಾದರೂ ಖಾತೆ ಇರುವುದು ಗೊತ್ತಾದರೆ, ನೀವೇ ಖುದ್ದಾಗಿ ಆ ಬ್ಯಾಂಕ್ ಕಚೇರಿಗೆ ಹೋಗಿ ಕೆವೈಸಿ ದಾಖಲೆಗಳನ್ನು ಸಲ್ಲಿಸಿದರೆ ಹಣವನ್ನು ಮರಳಿ ಪಡೆಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್
Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ
Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ
ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ