AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: 500 ರೂ ನೋಟು ನಿಷೇಧ ಆಗುತ್ತೆ ಅನ್ನೋದು ಸುಳ್ಳು ಸುದ್ದಿ; ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟನೆ ಇದು

No discontinuation of Rs 500 notes, claims PIB fact check: 500 ರೂ ಮುಖಬೆಲೆಯ ನೋಟುಗಳನ್ನು 2026ರ ಮಾರ್ಚ್ ನಂತರ ನಿಷೇಧ ಮಾಡಲಾಗುತ್ತದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಹಿಂದೆ 500 ರೂ, 1,000 ರೂ ಮುಖಬೆಲೆ ನೋಟುಗಳ ನಿಷೇಧ, 2,000 ರೂ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವುದು, ಇವು ಜನರ ಕಣ್ಮುಂದೆ ಇರುವುದರಿಂದ ಹೊಸ ಸುದ್ದಿ ವೈರಲ್ ಆಗಿದೆ. ಆದರೆ, ಇದು ಸುಳ್ಳು ಸುದ್ದಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟಪಡಿಸಿದೆ.

Fact Check: 500 ರೂ ನೋಟು ನಿಷೇಧ ಆಗುತ್ತೆ ಅನ್ನೋದು ಸುಳ್ಳು ಸುದ್ದಿ; ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟನೆ ಇದು
500 ರೂ ನೋಟು
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 08, 2025 | 12:52 PM

Share

ನವದೆಹಲಿ, ಜೂನ್ 8: ಸೋಷಿಯಲ್ ಮೀಡಿಯಾದಲ್ಲಿ ಊಹಾಪೋಹದ ಸುದ್ದಿಗಳು ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಷಿಯಲ್ ಮೀಡಿಯಾದಲ್ಲಿ 500 ರೂ ನೋಟು ನಿಷೇಧವಾಗುವ ಸುದ್ದಿ ವೈರಲ್ ಆಗಿ ಹಬ್ಬುತ್ತಿದೆ. ಮುಂದಿನ ವರ್ಷದೊಳಗೆ (2026) 500 ರೂ ಮುಖಬೆಲೆಯ ನೋಟುಗಳನ್ನು ನಿಲ್ಲಿಸಲಾಗುವುದು ಎಂದು ಈ ವೈರಲ್ ಸುದ್ದಿಯಲ್ಲಿ ಹೇಳಲಾಗಿದೆ. ಆದರೆ, ಸರ್ಕಾರದ ಫ್ಯಾಕ್ಟ್ ಚೆಕ್ ವಿಭಾಗವು ಈ ಸುದ್ದಿಯನ್ನು ಅಲ್ಲಗಳೆದಿದೆ.

ಜೂನ್ 2ರಂದು ಯೂಟ್ಯೂಬ್ ವಾಹಿನಿಯೊಂದರಲ್ಲಿ ಈ ಸುದ್ದಿ ಮೊದಲು ಬಿತ್ತರವಾಯಿತು. 2026ರ ಮಾರ್ಚ್ ತಿಂಗಳ ಬಳಿಕ 500 ರೂ ಬ್ಯಾಂಕ್ ನೋಟುಗಳು ಅಸಿಂಧುಗೊಳ್ಳುತ್ತವೆ ಎನ್ನುವುದು ಆ ಸುದ್ದಿ ಹೇಳಿಕೆ. ಇದು ಸಳ್ಳು ಸುದ್ದಿ ಎಂದು ಸರ್ಕಾರದ ಪಿಐಬಿ ಫ್ಯಾಕ್ಟ್ ಚೆಕ್ ಹೇಳಿದೆ.

ಇದನ್ನೂ ಓದಿ: ಮೂರು ವರ್ಷಕ್ಕಿಂತ ಹಿಂದಿನ ಜಿಎಸ್​​ಟಿ ಸಲ್ಲಿಸದವರಿಗೆ ಜೂನ್ 30 ಡೆಡ್​​ಲೈನ್; ಕಾನೂನು ಕ್ರಮದ ಜೊತೆಗೆ ಟ್ಯಾಕ್ಸ್ ಕ್ರೆಡಿಟ್ ಅವಕಾಶ ಇರಲ್ಲ

500 ರೂ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಆರ್​​ಬಿಐ ಯಾವ ಪ್ರಕಟಣೆಯನ್ನೂ ನೀಡಿಲ್ಲ. 500 ರೂ ನೋಟುಗಳು ಕಾನೂನು ಪ್ರಕಾರ ಮಾನ್ಯವಾಗಿದೆ. ಅದನ್ನು ಹಿಂಪಡೆಯಲಾಗಿಲ್ಲ. ಇಂಥ ಸುಳ್ಳು ಸುದ್ದಿಯನ್ನು ನಂಬಬೇಡಿ. ಸುದ್ದಿಯನ್ನು ನಂಬುವ ಮುನ್ನ, ಅದು ಅಧಿಕೃತ ಮೂಲಗಳಿಂದ ಬಂದಿದೆಯಾ ಎಂದು ಪರಿಶೀಲಿಸಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ತನ್ನ ಎಕ್ಸ್ ಪೋಸ್ಟ್​​ವೊಂದರಲ್ಲಿ ತಿಳಿಸಿದೆ.

2016ರಲ್ಲಿ ಸರ್ಕಾರವು ಆಗ ಚಾಲ್ತಿಯಲ್ಲಿದ್ದ 1,000 ರೂ ಮತ್ತು 500 ರೂ ಮುಖಬೆಲೆಯ ನೋಟುಗಳನ್ನು ನಿಷೇಧಿಸಿತು. ಅದಾದ ಬಳಿಕ ಚಲಾವಣೆಗೆ ತಂದ 2,000 ರೂ ಮುಖಬೆಲೆ ನೋಟುಗಳನ್ನು 2023ರ ಮೇ ತಿಂಗಳಲ್ಲಿ ಚಲಾವಣೆಯಿಂದ ಹಿಂಪಡೆಯಿತು. ಹೀಗಾಗಿ, ಕಳೆದ ಕೆಲ ದಿನಗಳಿಂದ 500 ರೂ ನೋಟು ನಿಷೇಧದ ಸುದ್ದಿ ಸಹಜವಾಗಿಯೇ ವೈರಲ್ ಆಗಿದೆ.

ಇದನ್ನೂ ಓದಿ: ದೇಶಭ್ರಷ್ಟ ಅನ್ನಿ ಒಪ್ತೀನಿ, ಆದ್ರೆ ಕಳ್ಳ ಅನ್ನೋಕೆ ನಾನೇನು ಕದ್ದಿದ್ದೀನಿ? ಹೊಟ್ಟೆಯೊಳಗಿನ ಸಂಕಟವೆಲ್ಲಾ ಬಿಚ್ಚಿಟ್ಟ ವಿಜಯ್ ಮಲ್ಯ

ಕಡಿಮೆ ಮುಖಬೆಲೆಯ ನೋಟುಗಳನ್ನು ಚಲಾವಣೆಯಲ್ಲಿ ಇರಿಸಿದರೆ ಸಾಕು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳೆದ ವಾರ ಹೇಳಿದ್ದರು. ಇದು 500 ರೂ ಮುಖಬೆಲೆ ನೋಟು ನಿಷೇಧವಾಗುತ್ತದೆ ಎಂದು ಸುಳ್ಳು ಸುದ್ದಿ ಹಬ್ಬಿಸಲು ಕಾರಣವಾಗಿರಬಹುದು. ಆದರೆ, ಸರ್ಕಾರವು ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿರುವುದರಿಂದ ಜನರು ಆತಂಕ ಪಡುವ ಅವಶ್ಯಕತೆ ಸದ್ಯಕ್ಕಂತೂ ಇಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Sun, 8 June 25

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!