AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಿಖಾ ಸಂಸ್ಥೆಗಳ ಉಪಟಳ; ಭಾರತದಿಂದ ಕಾಲ್ಕಿತ್ತು ಸಿಂಗಾಪುರ, ದುಬೈಗೆ ಹೋಗುತ್ತಿರುವ ಉದ್ಯಮಿಗಳು: ರುಚಿರ್ ಶರ್ಮಾ

Ruchir Sharma on Indian business environment: ಭಾರತದಲ್ಲಿ ಸದ್ಯದ ಸರ್ಕಾರದ ಮೇಲೆ ಕೇಳಿಬರುತ್ತಿರುವ ಗಂಭೀರ ಆರೋಪ ಎಂದರೆ ಅದು ತನಿಖಾ ಸಂಸ್ಥೆಗಳ ಉಪಟಳ ಎಂದು ಬರಹಗಾ, ಹೂಡಿಕೆದಾರ ರುಚಿರ್ ಶರ್ಮಾ ಹೇಳಿದ್ದಾರೆ. ದೇಶದ ಸ್ಥೂಲ ಆರ್ಥಿಕತೆಯ ನಿರ್ವಹಣೆ ಉತ್ತಮವಾಗಿದೆಯಾದರೂ ಸೂಕ್ಷ್ಮ ಆರ್ಥಿಕತೆಯ ನಿರ್ವಹಣೆ ಆತಂಕಕಾರಿಯಾಗಿದೆ ಎಂದಿದ್ದಾರೆ. ಭಾರತದ ಶೇ. 6ರ ಆಸುಪಾಸಿನ ಬೆಳವಣಿಗೆ ದರದ ಪರಿಧಿಯನ್ನು ಮೀರಿಸಿ ಬರಬೇಕು ಎಂಬ ಸಲಹೆಯನ್ನೂ ನೀಡಿದ್ದಾರೆ.

ತನಿಖಾ ಸಂಸ್ಥೆಗಳ ಉಪಟಳ; ಭಾರತದಿಂದ ಕಾಲ್ಕಿತ್ತು ಸಿಂಗಾಪುರ, ದುಬೈಗೆ ಹೋಗುತ್ತಿರುವ ಉದ್ಯಮಿಗಳು: ರುಚಿರ್ ಶರ್ಮಾ
ರುಚಿರ್ ಶರ್ಮಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 22, 2024 | 4:19 PM

Share

ನವದೆಹಲಿ, ಆಗಸ್ಟ್ 22: ಭಾರತದಲ್ಲಿ ಸ್ಥೂಲ ಆರ್ಥಿಕತೆಯ ನಿರ್ವಹಣೆ ಉತ್ತಮವಾಗಿದೆಯಾದರೂ ಸೂಕ್ಷ್ಮ ಆರ್ಥಿಕತೆಯನ್ನು ನಿರ್ವಹಣೆ ಮಾಡುತ್ತಿರುವ ರೀತಿ ಆತಂಕ ತರುವಂತಿದೆ. ಇಲ್ಲಿ ಬಿಸಿನೆಸ್ ಮಾಡುವುದು ಬಹಳ ಕಷ್ಟವಾಗಿದೆ. ತನಿಖಾ ಸಂಸ್ಥೆಗಳ ಹಿಂಸೆಗೆ ಹೆದರಿ ಉದ್ಯಮಿಗಳು ಭಾರತದಿಂದ ಕಾಲ್ಕಿತ್ತು ದುಬೈ, ಸಿಂಗಾಪುರ ಮುಂತಾದ ದೇಶಗಳಿಗೆ ಓಡಿ ಹೋಗುವಂತಿದೆ ಎಂದು ಹೂಡಿಕೆದಾರ ಮತ್ತು ಬರಹಗಾರ ರುಚಿರ್ ಶರ್ಮಾ ಹೇಳಿದ್ದಾರೆ. ನೆಟ್ವರ್ಕ್ 18ನ ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದ ರಾಕ್​ಫೆಲ್ಲರ್ ಇಂಟರ್​ನ್ಯಾಷನಲ್​ನ ಛೇರ್ಮನ್ ಆಗಿರುವ ರುಚಿರ್ ಶರ್ಮಾ, ಭಾರತದಲ್ಲಿನ ಈ ಆತಂಕಕಾರಿ ಪರಿಸ್ಥಿತಿಗೆ ತನಿಖಾ ಸಂಸ್ಥೆಗಳು ಕಾರಣ ಎಂದು ಹೊಣೆ ಮಾಡಿದ್ದಾರೆ.

ನಿಯಮ ಉಲ್ಲಂಘಿಸದೇ ಇರಲು ಅಸಾಧ್ಯ

ಪ್ರಸಕ್ತ ಸರ್ಕಾರದ ವಿರುದ್ದ ಕೇಳಿಬರುತ್ತಿರುವ ಪ್ರಮುಖ ಟೀಕೆ ಎಂದರೆ ತನಿಖಾ ಸಂಸ್ಥೆಗಳು ಕೈಮೀರಿ ಹೋಗಿವೆ. ಸಾಮಾನ್ಯ ಉದ್ಯಮಿಗಳಿಗೆ ಒಂದು ರೀತಿಯಲ್ಲಿ ಭಯ ಆವರಿಸಿದೆ ಎಂದು ರುಚಿರ್ ಶರ್ಮಾ ಆರೋಪಿಸಿದ್ದಾರೆ.

ಭಾರತದಲ್ಲಿ ಬಿಸಿನೆಸ್ ನಡೆಸುವುದು ಎಷ್ಟು ಕಷ್ಟ ಎಂಬುದನ್ನು ವಿವರಿಸಿದ ಅವರು, ಈಗಿರುವ ವ್ಯವಸ್ಥೆಯಲ್ಲಿ ಕಾನೂನು ಉಲ್ಲಂಘನೆ ಮಾಡದೇ ಉದ್ದಿಮೆಗಳು ಕೆಲಸ ಮಾಡುವುದು ಕಷ್ಟ ಎಂದಿದ್ದಾರೆ.

ಇದನ್ನೂ ಓದಿ: ಪೇಟಿಎಂನ ಎಂಟರ್​ಟೈನ್ಮೆಂಟ್ ಟಿಕೆಟ್ ಬಿಸಿನೆಸ್ ಜೊಮಾಟೊಗೆ ಮಾರಲು ನಿರ್ಧಾರ; 2,048 ಕೋಟಿ ರೂಗೆ ಡೀಲ್

ಭಾರತದಲ್ಲಿ ಏನಾದರೂ ಕೆಲಸ ಸಾಧಿಸಬೇಕಾದರೆ ಯಾವುದಾದರೂ ಕಾನೂನು ಉಲ್ಲಂಘಿಸಬೇಕಾಗುತ್ತದೆ. ಆ ರೀತಿಯಲ್ಲಿ ಇಲ್ಲಿ ನಿಯಮ ಮತ್ತು ಕಾನೂನುಗಳನ್ನು ರೂಪಿಸಲಾಗಿರುತ್ತದೆ. ಸರ್ಕಾರದ ಬಳಿ ದೊಡ್ಡ ನಿಯಮಾವಳಿಗಳ ಪಟ್ಟಿಯೇ ಇರುತ್ತದೆ. ಅದನ್ನು ಬೇಕಾದಂತೆ ಬಳಸಿ ನಿಮ್ಮಲ್ಲಿ ಭಯ ಮೂಡಿಸುತ್ತದೆ ಎಂದು ಹಲವು ಪುಸ್ತಕಗಳನ್ನು ಬರೆದಿರುವ ರುಚಿರ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

ಷೇರು ಮಾರುಕಟ್ಟೆಯ ಲಾಭ ಎಷ್ಟು ಜನಕ್ಕೆ?

ಭಾರತದಲ್ಲಿ ಷೇರು ಮಾರುಕಟ್ಟೆ ಒಳ್ಳೆಯ ಓಟದಲ್ಲಿ ಇರುವುದನ್ನು ಪ್ರಸ್ತಾಪಿಸಿದ ರುಚಿರ್ ಶರ್ಮಾ, ಈ ದೇಶದಲ್ಲಿ ಈ ಸ್ಟಾಕ್ ಮಾರ್ಕೆಟ್​ನ ಫಲ ಪಡೆಯುವುದು ಎರಡರಿಂದ ಮೂರು ಕೋಟಿ ಜನ ಮಾತ್ರ. 50ರಿಂದ 60 ಕೋಟಿ ಜನರಿಗೆ ಇದು ಏನೂ ಅಲ್ಲ ಎಂದಿದ್ದಾರೆ.

ಇದನ್ನೂ ಓದಿ: ನಾಯಿಕೊಡೆಗಳಂತೆ ಹೆಚ್ಚುತ್ತಿರುವ ಇಕಾಮರ್ಸ್ ಕಂಪನಿಗಳು; ಇದು ಖುಷಿಪಡುವ ಸಂಗತಿ ಅಲ್ಲ ಎಂತಾರೆ ಪೀಯುಶ್ ಗೋಯಲ್; ಅಮೇಜಾನ್​ಗೂ ತಿವಿದ ಸಚಿವ

ಇನ್ನು, ಭಾರತದ ಆರ್ಥಿಕ ಪ್ರಗತಿಯ ಈಗಿನ ವೇಗ ಸಾಕಾಗಲ್ಲ ಎಂದೂ ಹೇಳುತ್ತಾರೆ ಅವರು. ‘ಈ ರೀತಿಯ ಶೇ. 6ರ ಆಸುಪಾಸಿ ದರವನ್ನು ಮೀರಿಸುವ ಅವಶ್ಯಕತೆ ಈಗ ಇದೆ. ಖಾಸಗಿ ಹೂಡಿಕೆ ಹೆಚ್ಚಾಗಬೇಕು’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್