AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

March 1 Rules Change: ಮಾರ್ಚ್ 1ರಿಂದ ಹೊಸ ಬದಲಾವಣೆಗಳು; ಜನಸಾಮಾನ್ಯರಿಗೆ ಮುಖ್ಯವಾದದ್ದೇನು?

LPG Cylinder Hike and Other Changes: ಮಾರ್ಚ್ ತಿಂಗಳಿಂದ ಕೆಲ ಹೊಸ ನಿಯಮಗಳು ಚಾಲನೆಗೆ ಬರಲಿವೆ. ಕೆಲವು ನಮ್ಮ ಕೌಟುಂಬಿಕ ಬಜೆಟ್​ಗೆ ಹೊರೆ ಆಗಬಹುದು, ಕೆಲ ಬದಲಾವಣೆಗಳು ನಮ್ಮ ಹೊರೆ ತಗ್ಗಿಸಲೂ ಬಹುದು. ನಿಮ್ಮ ಸಾಮಾಜಿಕ ಜೀವನದ ಮೇಲೂ ಪರಿಣಾಮ ಬೀರುವಂತಹ ಸಂಗತಿಯೂ ಇರಬಹುದು.

March 1 Rules Change: ಮಾರ್ಚ್ 1ರಿಂದ ಹೊಸ ಬದಲಾವಣೆಗಳು; ಜನಸಾಮಾನ್ಯರಿಗೆ ಮುಖ್ಯವಾದದ್ದೇನು?
ಸಾಂದರ್ಭಿಕ ಚಿತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 27, 2023 | 12:13 PM

Share

ಸರ್ಕಾರಗಳು ಆಗಾಗ್ಗೆ ತಮ್ಮ ಹಣಕಾಸು ಮತ್ತು ಆರ್ಥಿಕ ನೀತಿಗಳನ್ನು (Economic and Monetary Policy) ಪರಿಷ್ಕರಿಸುತ್ತಿರುತ್ತವೆ. ಬೆಲೆ ಏರಿಳಿತ ಆಗುವಂತಹ ಕೆಲ ಕ್ರಮಗಳನ್ನು ಕೈಗೊಳ್ಳುತ್ತಿರುತ್ತವೆ. ಫೆಬ್ರುವರಿ 1ರಂದು ಕೇಂದ್ರ ಬಜೆಟ್ ಕೂಡ ಆಗಿದೆ. ಮಾರ್ಚ್ ತಿಂಗಳಿಂದ ಕೆಲ ಹೊಸ ನಿಯಮಗಳು ಚಾಲನೆಗೆ ಬರಲಿವೆ. ಕೆಲವು ನಮ್ಮ ಕೌಟುಂಬಿಕ ಬಜೆಟ್​ಗೆ ಹೊರೆ ಆಗಬಹುದು, ಕೆಲ ಬದಲಾವಣೆಗಳು ನಮ್ಮ ಹೊರೆ ತಗ್ಗಿಸಲೂ ಬಹುದು. ನಿಮ್ಮ ಸಾಮಾಜಿಕ ಜೀವನದ ಮೇಲೂ ಪರಿಣಾಮ ಬೀರುವಂತಹ ಸಂಗತಿಯೂ ಇರಬಹುದು.

ಎಲ್​ಪಿಜಿ ಸಿಲಿಂಡರ್ ದರ, ಬ್ಯಾಂಕ್ ಸಾಲ, ಸೋಷಿಯಲ್ ಮೀಡಿಯಾ ನಿಯಮಾವಳಿ, ರೈಲು ವೇಳಾಪಟ್ಟಿ ಇತ್ಯಾದಿಯಲ್ಲಿ ಬದಲಾವಣೆಗಳಾಗುತ್ತಿವೆ. ಮಾರ್ಚ್ 1ರಿಂದ ಇಂಥ ಕೆಲ ಮಹತ್ವದ ಬದಲಾವಣೆಗಳ ಬಗ್ಗೆ ಮಾಹಿತಿ ಇಲ್ಲಿದೆ.

ಸೋಷಿಯಲ್ ಮೀಡಿಯಾ ಬಳಸುವಾಗ ಎಚ್ಚರ

ಕೇಂದ್ರ ಸರ್ಕಾರ ಐಟಿ ನಿಯಮಾವಳಿಗಳಲ್ಲಿ ಇತ್ತೀಚೆಗೆ ಕೆಲ ಬದಲಾವಣೆ ಮಾಡಿದೆ. ಫೇಸ್​ಬುಕ್, ಯೂಟ್ಯೂಬ್, ಟ್ವಿಟ್ಟರ್, ಇನ್ಸ್​ಟಾಗ್ರಾಮ್ ಮೊದಲಾದ ಸೋಷಿಯಲ್ ಮೀಡಿಯಾ ತಾಣಗಳು ಕೇಂದ್ರ ಸರ್ಕಾರದ ನಿಯಮಾವಳಿಗಳಿಗೆ ಬದ್ಧವಾಗಿರಬೇಕಾಗುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ನಾವು ಹಾಕುವ ಪೋಸ್ಟ್​ಗಳಿಂದ ಧಾರ್ಮಿಕ ಭಾವನೆ ಉದ್ರೇಕಗೊಳ್ಳುವಂತಿದ್ದರೆ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಸುಳ್ಳು ಮಾಹಿತಿ ಪ್ರಸಾರ ಮಾಡುವ ಜನರಿಗೆ ದಂಡ ಬೀಳಬಹುದು. ಮಾರ್ಚ್ ತಿಂಗಳಿಂದ ಇದು ಜಾರಿಗೆ ಬರುತ್ತದೆ.

ಇದನ್ನೂ ಓದಿ: PM Kisan 13th Installment: ಪಿಎಂ ಕಿಸಾನ್ 13ನೇ ಕಂತು ಇಂದು ಬಿಡುಗಡೆ; ಹಣ ಬಂದಿಲ್ಲವಾ? ಹೀಗೆ ಮಾಡಿ

ಗ್ಯಾಸ್ ಬೆಲೆ ಏರಿಕೆ

ಎಲ್​ಪಿಜಿ, ಸಿಎನ್​ಜಿ ಮತ್ತು ಪಿಎನ್​ಜಿ ಅನಿಲಗಳ ಬೆಲೆ ಮಾರ್ಚ್ ತಿಂಗಳಲ್ಲಿ ವ್ಯತ್ಯಯವಾಗಲಿದೆ. ಜನಸಾಮಾನ್ಯರ ಅಗತ್ಯವಸ್ತುವೆನಿಸಿದ ಎಲ್​ಪಿಜಿ ಸಿಲಿಂಡರ್ ಬೆಲೆ ಮಾರ್ಚ್ ತಿಂಗಳು ಹೆಚ್ಚುವುದು ನಿಶ್ಚಿತ ಎನ್ನುತ್ತಿವೆ ವರದಿಗಳು. ಎಲ್​ಪಿಜಿ ಸಿಲಿಂಡರ್ ಬೆಲೆಗಳನ್ನು ಪ್ರತೀ ತಿಂಗಳ ಆರಂಭದಲ್ಲಿ ಪರಿಷ್ಕರಿಸಲಾಗುತ್ತದೆ. ಫೆಬ್ರುವರಿಯಲ್ಲಿ ಬೆಲೆ ಹೆಚ್ಚಳವಾಗಿರಲಿಲ್ಲ. ಮಾರ್ಚ್ ತಿಂಗಳಲ್ಲಿ ಬೆಲೆ ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿದೆ. ಹಾಗೆಯೇ, ಸಿಎನ್​ಜಿ ಮತ್ತು ಪಿಎನ್​ಜಿ ಗ್ಯಾಸ್ ದರಗಳೂ ಏರುವ ಸಾಧ್ಯತೆ ಇದೆ.

ಬ್ಯಾಂಕ್ ಸಾಲ ದುಬಾರಿ

ಆರ್​ಬಿಐ ಇತ್ತೀಚೆಗೆ ಬಡ್ಡಿ ದರಗಳನ್ನು ಹೆಚ್ಚಿಸಿತು. ಅದಕ್ಕೆ ಅನುಗುಣವಾಗಿ ಬಹುತೇಕ ಬ್ಯಾಂಕುಗಳು ತಮ್ಮ ಬಡ್ಡಿ ದರಗಳನ್ನು ಹೆಚ್ಚಿಸಿವೆ. ಠೇವಣಿಗಳಿಗೆ ಹೆಚ್ಚಿನ ಬಡ್ಡಿ ಸಿಗುತ್ತಿದೆ. ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡುವವರಿಗೆ ಅನುಕೂಲವಾಗಿದೆ. ಹಾಗೆಯೇ ಸಾಲದ ಮೇಲಿನ ಬಡ್ಡಿ ದರಗಳೂ ಏರಿಕೆ ಆಗಿವೆ. ಪರಿಣಾಮವಾಗಿ ಲೋನ್ ಇಎಂಐಗಳ ಮೊತ್ತ ಏರಿಕೆ ಆಗಿದೆ. ಗೃಹ ಸಾಲ ಪಡೆದವರಿಗೆ ಹೆಚ್ಚಿನ ಹೊರೆಯಾಗಿದೆ.

ಇದನ್ನೂ ಓದಿPAN Alert! ಪಾನ್ ಕಾರ್ಡ್​ದಾರರೇ ಗಮನಿಸಿ, ಉಚಿತವಾಗಿ ಆಗಬೇಕಾದ ಕೆಲಸಕ್ಕೆ ಸಾವಿರ ರೂ ತೆರಬೇಕಾದೀತು; 10 ಸಾವಿರ ದಂಡ ಬಿದ್ದೀತು

ಇನ್ನು, ಮಾರ್ಚ್ ತಿಂಗಳು ವಿವಿಧ ಹಬ್ಬಗಳು ಇರುವ ಹಿನ್ನೆಲೆಯಲ್ಲಿ ಬ್ಯಾಂಕುಗಳು 12 ದಿನಗಳ ಕಾಲ ಬಾಗಿಲು ಮುಚ್ಚಲಿವೆ. ಇದರಲ್ಲಿ ನಾಲ್ಕು ಭಾನುವಾರ ಹಾಗೂ ಎರಡು ಶನಿವಾರದ ರಜೆಗಳು ಒಳಗೊಂಡಿವೆ.

ರೈಲು ವೇಳಾಪಟ್ಟಿ ಬದಲು:

ಬೇಸಿಗೆ ರಜಾ ದಿನಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ತನ್ನ ರೈಲುಗಳ ವೇಳಾಪಟ್ಟಿ ಬದಲಿಸಿದೆ. ಮಾರ್ಚ್ 1ರಿಂದ 5 ಸಾವಿರ ಸರಕು ಸಾಗಣೆ ರೈಲುಗಳ ವೇಳಾಪಟ್ಟಿ ಬದಲಾಗಲಿದೆ. ಹಾಗೆಯೇ, ಸಾವಿರಾರು ಪ್ಯಾಸೆಂಜರ್ ರೈಲುಗಳ ವೇಳಾಪಟ್ಟಿಯೂ ಬದಲಾಗಲಿದೆ. ಫೆಬ್ರುವರಿ 28ರಂದು ರೈಲ್ವೆ ಇಲಾಖೆ ಈ ಬದಲಾವಣೆಗಳನ್ನು ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆ ಇದೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು