AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮೆ ಕ್ಲೇಮ್​ಗೆ ಕೆವೈಸಿ, ಸಿಲಿಂಡರ್​ ಡೆಲಿವರಿಗೆ ಒಟಿಪಿ ಸೇರಿ ಇಂದಿನಿಂದ ಹಲವು ನಿಯಮಗಳು ಬದಲು

ಎಲ್ಲ ರೀತಿಯ ವಿಮೆ ಕ್ಲೇಮ್​ ಮಾಡಿಕೊಳ್ಳಬೇಕಾದರೆ ಕೆವೈಸಿ ಕಡ್ಡಾಯ, ಎಲ್​ಪಿಜಿ ಸಿಲಿಂಡರ್ ವಿತರಣೆಗೆ ಒಟಿಪಿ ಕಡ್ಡಾಯ ಸೇರಿದಂತೆ ಕೆಲವು ನಿಯಮಗಳಲ್ಲಿ ಇಂದಿನಿಂದ (ನವೆಂಬರ್ 1) ಬದಲಾವಣೆಯಾಗಿವೆ.

ವಿಮೆ ಕ್ಲೇಮ್​ಗೆ ಕೆವೈಸಿ, ಸಿಲಿಂಡರ್​ ಡೆಲಿವರಿಗೆ ಒಟಿಪಿ ಸೇರಿ ಇಂದಿನಿಂದ ಹಲವು ನಿಯಮಗಳು ಬದಲು
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on: Nov 01, 2022 | 12:20 PM

Share

ನವದೆಹಲಿ: ಎಲ್ಲ ರೀತಿಯ ವಿಮೆ (Insurance) ಕ್ಲೇಮ್​ ಮಾಡಿಕೊಳ್ಳಬೇಕಾದರೆ ಕೆವೈಸಿ (KYC) ಕಡ್ಡಾಯ, ಎಲ್​ಪಿಜಿ ಸಿಲಿಂಡರ್ (LPG gas) ವಿತರಣೆಗೆ ಒಟಿಪಿ ಕಡ್ಡಾಯ ಸೇರಿದಂತೆ ಕೆಲವು ನಿಯಮಗಳಲ್ಲಿ ಇಂದಿನಿಂದ (ನವೆಂಬರ್ 1) ಬದಲಾವಣೆಯಾಗಿವೆ. ಕೆಲವು ಬದಲಾವಣೆಗಳ ಬಗ್ಗೆ ತಿಳಿದಿರಲೇಬೇಕಾದ ಅನಿವಾರ್ಯತೆ ಇದ್ದರೆ ಇನ್ನು ಕೆಲವು ಜನಸಾಮಾನ್ಯರ ಹಣಕಾಸು ಚಟುವಟಿಕೆಗಳ ಮೇಲೂ ಪ್ರಭಾವ ಬೀರಲಿವೆ. ಇಂದಿನಿಂದ ಬದಲಾದ ನಿಯಮಗಳು ಯಾವುವೆಲ್ಲ ಎಂಬುದನ್ನು ಇಲ್ಲಿ ನೀಡಲಾಗಿದೆ.

ಎಲ್ಲ ರೀತಿಯ ವಿಮೆ ಕ್ಲೇಮ್​ಗೂ ಕೆವೈಸಿ ಕಡ್ಡಾಯ

ಈವರೆಗೆ ಜೀವ ವಿಮೆ ಕ್ಲೇಮ್​ಗೆ ಮಾತ್ರ ಕೆವೈಸಿ ಕಡ್ಡಾಯಗೊಳಿಸಲಾಗಿತ್ತು. ಇತರ ವಿಮೆಗಳಾದ ಆರೋಗ್ಯ, ವಾಹನ ವಿಮೆಯಂಥವುಗಳಲ್ಲಿ 1 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತ ಕ್ಲೇಮ್ ಮಾಡಿಕೊಳ್ಳಬೇಕಾದರೆ ಮಾತ್ರ ಕೆವೈಸಿ ಕಡ್ಡಾಯವಾಗಿತ್ತು. ಆದರೆ, ಇದೀಗ ಎಲ್ಲ ರೀತಿಯ ವಿಮೆ ಮಾಡಿಸಿಕೊಳ್ಳುವುದಕ್ಕೂ ಐಆರ್​ಡಿಎಐ (ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ) ಕೆವೈಸಿ ಕಡ್ಡಾಯಗೊಳಿಸಿದೆ.

ಎಲ್​ಪಿಜಿ ದರ ಹೆಚ್ಚಳ

ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ್ ಕಂಪನಿಗಳು ಎಲ್​ಪಿಜಿ ದರ ಪರಿಷ್ಕರಿಸುತ್ತವೆ. 19 ಕೆಜಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 115.50 ರೂಪಾಯಿ ಕಡಿತಗೊಳಿಸಲಾಗಿದ್ದು, ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಕ್ಟೋಬರ್ 1ರಂದು ಸಹ 19 ಕೆಜಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 25.5 ರೂ. ಕಡಿತ ಮಾಡಲಾಗಿತ್ತು. ಇದೀಗ ಮತ್ತೆ ದರ ಇಳಿಕೆ ಮಾಡುವುದರೊಂದಿಗೆ, ಸತತ ಆರನೇ ತಿಂಗಳು ವಾಣಿಜ್ಯ ಬಳಕೆಯ ಎಲ್​ಪಿಜಿ ಬೆಲೆ ಇಳಿಕೆಯಾದಂತಾಗಿದೆ.

ಎಲ್​ಪಿಜಿ ಸಿಲಿಂಡರ್ ವಿತರಣೆಗೆ ಒಟಿಪಿ

ಎಲ್​ಪಿಜಿ ಸಿಲಿಂಡರ್ ಕಾಯ್ದಿರಿಸಿದ ಬಳಿಕ ನಿಮ್ಮ ಮೊಬೈಲ್​​ಗೆ ಒಟಿಪಿ ಸಂದೇಶ ಬರಲಿದೆ. ಇದನ್ನು ವಿತರಣೆಗಾರರಿಗೆ ತಿಳಿಸಿದ ನಂತರವಷ್ಟೇ ನೀವು ಸಿಲಿಂಡರ್ ಪಡೆಯಬಹುದಾಗಿದೆ.

ಜಿಎಸ್​ಟಿ ರಿಟರ್ನ್​ ಸಲ್ಲಿಸಲು ಎಚ್​ಎಸ್​ಎನ್ ಕೋಡ್

ಜಿಎಸ್​ಟಿ ರಿಟರ್ನ್ ಸಲ್ಲಿಕೆ ನಿಯಮದಲ್ಲಿ ತುಸು ಬದಲಾವಣೆ ಮಾಡಲಾಗಿದೆ. 5 ಕೋಟಿ ರೂ.ಗಿಂತ ಕಡಿಮೆ ಮೊತ್ತದ ವಹಿವಾಟು ನಡೆಸುವ ಉದ್ದಿಮೆದಾರರು ಕೂಡ ಜಿಎಸ್​ಟಿ ರಿಟರ್ನ್ ಸಲ್ಲಿಸುವಾಗ 4 ಡಿಜಿಟ್​ನ ಎಚ್​ಎಸ್​ಎನ್ ಕೋಡ್ ಉಲ್ಲೇಖಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿಂದೆ 5 ಕೋಟಿ ರೂ.ಗಿಂತ ಹೆಚ್ಚು ಮೊತ್ತದ ವಹಿವಾಟು ನಡೆಸುವ ಉದ್ದಿಮೆದಾರರು ಮಾತ್ರ ಎಚ್​ಎಸ್​ಎನ್ ಕೋಡ್ ಉಲ್ಲೇಖಿಸಬೇಕಾಗಿತ್ತು.

ರೈಲು ವೇಳಾಪಟ್ಟಿಯಲ್ಲಿ ಬದಲಾವಣೆ

ಕೊಂಕಣ ಮಾರ್ಗದಲ್ಲಿ ಚಲಿಸುವ ರೈಲುಗಳ ವೇಳಾಪಟ್ಟಿ ಇಂದಿನಿಂದ ಬದಲಾಗಿದೆ. ಮುಂಗಾರು ಅವಧಿಯಲ್ಲಿ ರೈಲುಗಳ ವೇಗದ ಮೇಲೆ ಹೇರಲಾಗಿದ್ದ ಮಿತಿಯನ್ನೂ ತೆರವುಗೊಳಿಸಲಾಗಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು