AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Rupee: ಡಾಲರ್ ಎದುರು 12 ಪೈಸೆ ಕುಸಿತ ಕಂಡ ರೂಪಾಯಿ

ಭಾರತೀಯ ಷೇರುಮಾರುಕಟ್ಟೆ ಕೊಂಚ ಚೇತರಿಸಿಕೊಂಡಿದ್ದರೂ ಭಾರತೀಯ ರೂಪಾಯಿ ಮೌಲ್ಯ ಕುಸಿತ ಕಂಡಿದ್ದು, ಪ್ರತೀ ಡಾಲರ್ ಎದುರು 79.06 ರೂಗಳಿಗಿಂತ ಕೆಳಗೆ ಕುಸಿದಿದೆ.

Indian Rupee: ಡಾಲರ್ ಎದುರು 12 ಪೈಸೆ ಕುಸಿತ ಕಂಡ ರೂಪಾಯಿ
Rupee And Dollar
TV9 Web
| Edited By: |

Updated on: Jul 07, 2022 | 2:23 PM

Share

ಮುಂಬೈ: ಭಾರತೀಯ ಷೇರುಮಾರುಕಟ್ಟೆ ಕೊಂಚ ಚೇತರಿಸಿಕೊಂಡಿದ್ದರೂ ಭಾರತೀಯ ರೂಪಾಯಿ ಮೌಲ್ಯ ಕುಸಿತ ಕಂಡಿದ್ದು, ಪ್ರತೀ ಡಾಲರ್ ಎದುರು 79.06 ರೂಗಳಿಗಿಂತ ಕೆಳಗೆ ಕುಸಿದಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ರೂಪಾಯಿ ಮೌಲ್ಯವನ್ನು ಹೆಚ್ಚಿಸಲು ಮಾರುಕಟ್ಟೆ ಮಧ್ಯಪ್ರವೇಶಿಸಿದೆಯಾದರೂ ರೂಪಾಯಿ ಮೌಲ್ಯ ಕುಸಿತ ಮಾತ್ರ ನಿರಂತರವಾಗಿದೆ.

ಪ್ರಸ್ತುತ ಆರ್ ಬಿಐ ಹಸ್ತಕ್ಷೇಪ ವಿಧಾನದಿಂದ ಕರೆನ್ಸಿ ಮೌಲ್ಯ ಕುಸಿತವು ವೇಗವಾಗುತ್ತಿರುವುದರಿಂದ ರೂಪಾಯಿ ಮೇಲಿನ ಒತ್ತಡವನ್ನು ತಗ್ಗಿಸಲು RBI ತನ್ನ ಕಾರ್ಯತಂತ್ರವನ್ನು ಬದಲಾಯಿಸಬೇಕಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ಇಸಿಬಿ ಮಾರ್ಗದ ಅಡಿಯಲ್ಲಿ ಬಾಹ್ಯ ಸಾಲದ ಮಿತಿಯನ್ನು ದ್ವಿಗುಣಗೊಳಿಸಿದೆ ಮತ್ತು ಯುಎಸ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಕುಸಿತವನ್ನು ತಡೆಯಲು ವಿದೇಶಿ ವಿನಿಮಯ ಒಳಹರಿವುಗೆ ಸಂಬಂಧಿಸಿದ ಉದಾರೀಕರಣದ ಮಾನದಂಡಗಳ ಬಗ್ಗೆ ಚರ್ಚಿಸಲಾಗಿದೆ.

ರೂಪಾಯಿಯು US ಡಾಲರ್‌ಗೆ 79.05 ನಲ್ಲಿ ಪ್ರಾರಂಭವಾಯಿತು ಮತ್ತು ನಂತರ 79.06 ಗೆ ಕುಸಿಯಿತು, ಹಿಂದಿನ ಮುಕ್ತಾಯದ ಬೆಲೆ ಹೋಲಿಸಿದರೆ 12 ಪೈಸೆಯ ಕುಸಿತವನ್ನು ಕಂಡಿದೆ.

ಬುಧವಾರದಂದು ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ 78.94ಕ್ಕೆ ತಲುಪಿತ್ತು. ಷೇರು ಮಾರುಕಟ್ಟೆಯ ತಾತ್ಕಾಲಿಕ ಮಾಹಿತಿಯ ಪ್ರಕಾರ, ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬುಧವಾರ ನಿವ್ವಳ 330.13 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ