AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dollar Vs Rupee: ಆರಂಭದ ವಹಿವಾಟಿನಲ್ಲಿ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 14 ಪೈಸೆ ಕುಸಿತ

ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಡಿಸೆಂಬರ್ 17ನೇ ತಾರೀಕಿನಂದು 14 ಪೈಸೆ ಇಳಿಕೆ ಆಗಿದೆ. ಪ್ರಮುಖವಾಗಿ ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ.

Dollar Vs Rupee: ಆರಂಭದ ವಹಿವಾಟಿನಲ್ಲಿ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 14 ಪೈಸೆ ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2021 | 12:53 PM

Share

ಅಮೆರಿಕ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಡಿಸೆಂಬರ್ 17ರ ಶುಕ್ರವಾರದಂದು ಆರಂಭದ ವಹಿವಾಟಿನಲ್ಲಿ 14 ಪೈಸೆ ಕುಸಿತ ಕಂಡು, 76.23 ಮುಟ್ಟಿತು. ದೇಶೀಯ ಈಕ್ವಿಟಿಗಳು ಮತ್ತು ವಿದೇಶೀ ಹಣದ ಹೊರಹರಿವು ಸ್ಥಳೀಯ ಕರೆನ್ಸಿ ಮೇಲೆ ಪರಿಣಾಮ ಬೀರಿತು. ವಿದೇಶೀ ಕರೆನ್ಸಿಗಳಲ್ಲಿ ವ್ಯವಹರಿಸುವ ಟ್ರೇಡರ್ಸ್​ಗಳು ಹೇಳುವಂತೆ, ಕೊರೊನಾ ವೈರಸ್​ ರೂಪಾಂತರವಾದ ಒಮಿಕ್ರಾನ್ ಬಗ್ಗೆ ಹೆಚ್ಚುತ್ತಿರುವ ಆತಂಕ ಮತ್ತು ಅದು ಆರ್ಥಿಕ ಚೇತರಿಕೆ ಹಾಗೂ ಸ್ಥಿರವಾದ ಕಚ್ಚಾ ತೈಲದ ಮೇಲೆ ಬೀರುತ್ತಿರುವ ಪರಿಣಾಮವು ಸ್ಥಳೀಯ ಕರೆನ್ಸಿ ಮೇಲೆ ಆಗುತ್ತಿದೆ. ಬುಧವಾರದಂದು ಗ್ರೀನ್​ಬ್ಯಾಕ್ ವಿರುದ್ಧ ರೂಪಾಯಿ 76.09ಗೆ ನೆಲೆಯಾಗಿತ್ತು.

ಇನ್ನು ದೇಶೀಯ ಈಕ್ವಿಟಿ ಮಾರುಕಟ್ಟೆ ಬಿಎಸ್ಇ- ಸೆನ್ಸೆಕ್ಸ್ ಬೆಳಗಿನ ವಹಿವಾಟು 434.23 ಪಾಯಿಂಟ್ಸ್ ಅಥವಾ ಶೇ 0.75ರಷ್ಟು ಇಳಿಕೆಯಾಗಿ 57,466.91 ಪಾಯಿಂಟ್ಸ್ ತಲುಪಿತ್ತು. ಎನ್​ಎಸ್​ಇ ನಿಫ್ಟಿ 148.85 ಪಾಯಿಂಟ್ಸ್ ಅಥವಾ ಶೇ 0.86 ಇಳಿಕೆಯಾಗಿ, 17,099.55 ಪಾಯಿಂಟ್ಸ್ ಮುಟ್ಟಿದೆ. ಡಾಲರ್ ಸೂಚ್ಯಂಕವನ್ನು ಆರು ಕರೆನ್ಸಿಗಳ ಬ್ಯಾಸ್ಕೆಟ್​ನ ಗ್ರೀನ್​ಬ್ಯಾಕ್​ ಬಲದ ಮೂಲಕ ಅಂದಾಜು ಮಾಡಲಾಗುತ್ತದೆ. ಅದು ಶೇ 0.07ರಷ್ಟು ಇಳಿಕೆ ಕಂಡು, 95.97 ತಲುಪಿದೆ.

ಜಾಗತಿಕ ತೈಲ ಬೆಂಚ್​ಮಾರ್ಕ್ ಬ್ರೆಂಟ್ ಕಚ್ಚಾ ಫ್ಯೂಚರ್ಸ್ ಶೇ 0.96ರಷ್ಟು ಇಳಿದು, ಬ್ಯಾರೆಲ್​ಗೆ 74.30 ಡಾಲರ್ ಮುಟ್ಟಿದೆ. ವಿದೇಶೀ ಸಾಂಸ್ಥಿಕ ಹೂಡಿಕೆದಾರರು ಗುರುವಾರದಂದು ಬಂಡವಾಳ ಮಾರುಕಟ್ಟೆಯಲ್ಲಿ ನಿವ್ವಳ ಮಾರಾಟಗಾರರಾಗಿದ್ದರು. ವಿನಿಮಯ ಕೇಂದ್ರದ ಡೇಟಾ ಪ್ರಕಾರ, 1,468.71 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಇದನ್ನೂ ಓದಿ: Trade Deficit: ದೇಶದ ವ್ಯಾಪಾರ ಕೊರತೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ; ಕಾರಣ ಏನೆಂಬ ವಿವರಣೆ ಇಲ್ಲಿದೆ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ