Sign In

By signing in or creating an account, you agree with Associated Broadcasting Company's Terms & Conditions and Privacy Policy.

Dollar Vs Rupee: ಆರಂಭದ ವಹಿವಾಟಿನಲ್ಲಿ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 14 ಪೈಸೆ ಕುಸಿತ

ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಡಿಸೆಂಬರ್ 17ನೇ ತಾರೀಕಿನಂದು 14 ಪೈಸೆ ಇಳಿಕೆ ಆಗಿದೆ. ಪ್ರಮುಖವಾಗಿ ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ.

Dollar Vs Rupee: ಆರಂಭದ ವಹಿವಾಟಿನಲ್ಲಿ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 14 ಪೈಸೆ ಕುಸಿತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 17, 2021 | 12:53 PM

ಅಮೆರಿಕ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಡಿಸೆಂಬರ್ 17ರ ಶುಕ್ರವಾರದಂದು ಆರಂಭದ ವಹಿವಾಟಿನಲ್ಲಿ 14 ಪೈಸೆ ಕುಸಿತ ಕಂಡು, 76.23 ಮುಟ್ಟಿತು. ದೇಶೀಯ ಈಕ್ವಿಟಿಗಳು ಮತ್ತು ವಿದೇಶೀ ಹಣದ ಹೊರಹರಿವು ಸ್ಥಳೀಯ ಕರೆನ್ಸಿ ಮೇಲೆ ಪರಿಣಾಮ ಬೀರಿತು. ವಿದೇಶೀ ಕರೆನ್ಸಿಗಳಲ್ಲಿ ವ್ಯವಹರಿಸುವ ಟ್ರೇಡರ್ಸ್​ಗಳು ಹೇಳುವಂತೆ, ಕೊರೊನಾ ವೈರಸ್​ ರೂಪಾಂತರವಾದ ಒಮಿಕ್ರಾನ್ ಬಗ್ಗೆ ಹೆಚ್ಚುತ್ತಿರುವ ಆತಂಕ ಮತ್ತು ಅದು ಆರ್ಥಿಕ ಚೇತರಿಕೆ ಹಾಗೂ ಸ್ಥಿರವಾದ ಕಚ್ಚಾ ತೈಲದ ಮೇಲೆ ಬೀರುತ್ತಿರುವ ಪರಿಣಾಮವು ಸ್ಥಳೀಯ ಕರೆನ್ಸಿ ಮೇಲೆ ಆಗುತ್ತಿದೆ. ಬುಧವಾರದಂದು ಗ್ರೀನ್​ಬ್ಯಾಕ್ ವಿರುದ್ಧ ರೂಪಾಯಿ 76.09ಗೆ ನೆಲೆಯಾಗಿತ್ತು.

ಇನ್ನು ದೇಶೀಯ ಈಕ್ವಿಟಿ ಮಾರುಕಟ್ಟೆ ಬಿಎಸ್ಇ- ಸೆನ್ಸೆಕ್ಸ್ ಬೆಳಗಿನ ವಹಿವಾಟು 434.23 ಪಾಯಿಂಟ್ಸ್ ಅಥವಾ ಶೇ 0.75ರಷ್ಟು ಇಳಿಕೆಯಾಗಿ 57,466.91 ಪಾಯಿಂಟ್ಸ್ ತಲುಪಿತ್ತು. ಎನ್​ಎಸ್​ಇ ನಿಫ್ಟಿ 148.85 ಪಾಯಿಂಟ್ಸ್ ಅಥವಾ ಶೇ 0.86 ಇಳಿಕೆಯಾಗಿ, 17,099.55 ಪಾಯಿಂಟ್ಸ್ ಮುಟ್ಟಿದೆ. ಡಾಲರ್ ಸೂಚ್ಯಂಕವನ್ನು ಆರು ಕರೆನ್ಸಿಗಳ ಬ್ಯಾಸ್ಕೆಟ್​ನ ಗ್ರೀನ್​ಬ್ಯಾಕ್​ ಬಲದ ಮೂಲಕ ಅಂದಾಜು ಮಾಡಲಾಗುತ್ತದೆ. ಅದು ಶೇ 0.07ರಷ್ಟು ಇಳಿಕೆ ಕಂಡು, 95.97 ತಲುಪಿದೆ.

ಜಾಗತಿಕ ತೈಲ ಬೆಂಚ್​ಮಾರ್ಕ್ ಬ್ರೆಂಟ್ ಕಚ್ಚಾ ಫ್ಯೂಚರ್ಸ್ ಶೇ 0.96ರಷ್ಟು ಇಳಿದು, ಬ್ಯಾರೆಲ್​ಗೆ 74.30 ಡಾಲರ್ ಮುಟ್ಟಿದೆ. ವಿದೇಶೀ ಸಾಂಸ್ಥಿಕ ಹೂಡಿಕೆದಾರರು ಗುರುವಾರದಂದು ಬಂಡವಾಳ ಮಾರುಕಟ್ಟೆಯಲ್ಲಿ ನಿವ್ವಳ ಮಾರಾಟಗಾರರಾಗಿದ್ದರು. ವಿನಿಮಯ ಕೇಂದ್ರದ ಡೇಟಾ ಪ್ರಕಾರ, 1,468.71 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಇದನ್ನೂ ಓದಿ: Trade Deficit: ದೇಶದ ವ್ಯಾಪಾರ ಕೊರತೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ; ಕಾರಣ ಏನೆಂಬ ವಿವರಣೆ ಇಲ್ಲಿದೆ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್