AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dollar Vs Rupee: ಆರಂಭದ ವಹಿವಾಟಿನಲ್ಲಿ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 14 ಪೈಸೆ ಕುಸಿತ

ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಡಿಸೆಂಬರ್ 17ನೇ ತಾರೀಕಿನಂದು 14 ಪೈಸೆ ಇಳಿಕೆ ಆಗಿದೆ. ಪ್ರಮುಖವಾಗಿ ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ.

Dollar Vs Rupee: ಆರಂಭದ ವಹಿವಾಟಿನಲ್ಲಿ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 14 ಪೈಸೆ ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2021 | 12:53 PM

Share

ಅಮೆರಿಕ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಡಿಸೆಂಬರ್ 17ರ ಶುಕ್ರವಾರದಂದು ಆರಂಭದ ವಹಿವಾಟಿನಲ್ಲಿ 14 ಪೈಸೆ ಕುಸಿತ ಕಂಡು, 76.23 ಮುಟ್ಟಿತು. ದೇಶೀಯ ಈಕ್ವಿಟಿಗಳು ಮತ್ತು ವಿದೇಶೀ ಹಣದ ಹೊರಹರಿವು ಸ್ಥಳೀಯ ಕರೆನ್ಸಿ ಮೇಲೆ ಪರಿಣಾಮ ಬೀರಿತು. ವಿದೇಶೀ ಕರೆನ್ಸಿಗಳಲ್ಲಿ ವ್ಯವಹರಿಸುವ ಟ್ರೇಡರ್ಸ್​ಗಳು ಹೇಳುವಂತೆ, ಕೊರೊನಾ ವೈರಸ್​ ರೂಪಾಂತರವಾದ ಒಮಿಕ್ರಾನ್ ಬಗ್ಗೆ ಹೆಚ್ಚುತ್ತಿರುವ ಆತಂಕ ಮತ್ತು ಅದು ಆರ್ಥಿಕ ಚೇತರಿಕೆ ಹಾಗೂ ಸ್ಥಿರವಾದ ಕಚ್ಚಾ ತೈಲದ ಮೇಲೆ ಬೀರುತ್ತಿರುವ ಪರಿಣಾಮವು ಸ್ಥಳೀಯ ಕರೆನ್ಸಿ ಮೇಲೆ ಆಗುತ್ತಿದೆ. ಬುಧವಾರದಂದು ಗ್ರೀನ್​ಬ್ಯಾಕ್ ವಿರುದ್ಧ ರೂಪಾಯಿ 76.09ಗೆ ನೆಲೆಯಾಗಿತ್ತು.

ಇನ್ನು ದೇಶೀಯ ಈಕ್ವಿಟಿ ಮಾರುಕಟ್ಟೆ ಬಿಎಸ್ಇ- ಸೆನ್ಸೆಕ್ಸ್ ಬೆಳಗಿನ ವಹಿವಾಟು 434.23 ಪಾಯಿಂಟ್ಸ್ ಅಥವಾ ಶೇ 0.75ರಷ್ಟು ಇಳಿಕೆಯಾಗಿ 57,466.91 ಪಾಯಿಂಟ್ಸ್ ತಲುಪಿತ್ತು. ಎನ್​ಎಸ್​ಇ ನಿಫ್ಟಿ 148.85 ಪಾಯಿಂಟ್ಸ್ ಅಥವಾ ಶೇ 0.86 ಇಳಿಕೆಯಾಗಿ, 17,099.55 ಪಾಯಿಂಟ್ಸ್ ಮುಟ್ಟಿದೆ. ಡಾಲರ್ ಸೂಚ್ಯಂಕವನ್ನು ಆರು ಕರೆನ್ಸಿಗಳ ಬ್ಯಾಸ್ಕೆಟ್​ನ ಗ್ರೀನ್​ಬ್ಯಾಕ್​ ಬಲದ ಮೂಲಕ ಅಂದಾಜು ಮಾಡಲಾಗುತ್ತದೆ. ಅದು ಶೇ 0.07ರಷ್ಟು ಇಳಿಕೆ ಕಂಡು, 95.97 ತಲುಪಿದೆ.

ಜಾಗತಿಕ ತೈಲ ಬೆಂಚ್​ಮಾರ್ಕ್ ಬ್ರೆಂಟ್ ಕಚ್ಚಾ ಫ್ಯೂಚರ್ಸ್ ಶೇ 0.96ರಷ್ಟು ಇಳಿದು, ಬ್ಯಾರೆಲ್​ಗೆ 74.30 ಡಾಲರ್ ಮುಟ್ಟಿದೆ. ವಿದೇಶೀ ಸಾಂಸ್ಥಿಕ ಹೂಡಿಕೆದಾರರು ಗುರುವಾರದಂದು ಬಂಡವಾಳ ಮಾರುಕಟ್ಟೆಯಲ್ಲಿ ನಿವ್ವಳ ಮಾರಾಟಗಾರರಾಗಿದ್ದರು. ವಿನಿಮಯ ಕೇಂದ್ರದ ಡೇಟಾ ಪ್ರಕಾರ, 1,468.71 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಇದನ್ನೂ ಓದಿ: Trade Deficit: ದೇಶದ ವ್ಯಾಪಾರ ಕೊರತೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ; ಕಾರಣ ಏನೆಂಬ ವಿವರಣೆ ಇಲ್ಲಿದೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ