AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲರ್ ಎದುರು ರುಪಾಯಿ ಮೌಲ್ಯ 91.70ಕ್ಕೆ ಕುಸಿತ; ಇದೇ ಟ್ರೆಂಡ್ ಇದ್ದರೆ 93ಕ್ಕೆ ಇಳಿಯಬಹುದು ಎಂದ ತಜ್ಞರು

Rupee fell to new low of 91.70 against Dollar: ಡಾಲರ್ ಎದುರು ರುಪಾಯಿ ಮೌಲ್ಯ ಬುಧವಾರ ಒಂದು ಹಂತದಲ್ಲಿ 91.74ಕ್ಕೆ ಕುಸಿದಿತ್ತು. ದಿನಾಂತ್ಯದಲ್ಲಿ 91.70 ರುಪಾಯಿ ಬೆಲೆಗೆ ನಿಂತಿದೆ. ಸತತ ಐದು ಸೆಷನ್​ಗಳಿಂದ ಡಾಲರ್ ಎದುರು ರುಪಾಯಿ ಹಿನ್ನಡೆ ಅನುಭವಿಸಿದೆ. ವಿದೇಶೀ ಹೂಡಿಕೆಗಳ ಹೊರಹರಿವು ಹೆಚ್ಚಿರುವುದು ರುಪಾಯಿ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ.

ಡಾಲರ್ ಎದುರು ರುಪಾಯಿ ಮೌಲ್ಯ 91.70ಕ್ಕೆ ಕುಸಿತ; ಇದೇ ಟ್ರೆಂಡ್ ಇದ್ದರೆ 93ಕ್ಕೆ ಇಳಿಯಬಹುದು ಎಂದ ತಜ್ಞರು
ಡಾಲರ್ ವರ್ಸಸ್ ರುಪಾಯಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2026 | 6:39 PM

Share

ನವದೆಹಲಿ, ಜನವರಿ 21: ಭಾರತದ ರುಪಾಯಿ ಕರೆನ್ಸಿಯ ದುರ್ಬಲ ಪ್ರದರ್ಶನ (Dollar vs Rupee) ಮುಂದುವರಿದಿದೆ. ಬೇರೆ ಬೇರೆ ಕಾರಣಗಳಿಗೆ ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತ ಮುಂದುವರಿದಿದೆ. ನಿನ್ನೆ 90.98 ಇದ್ದ ರುಪಾಯಿ ಮೌಲ್ಯ ಇವತ್ತು 91 ದಾಟಿ ಹೋಗಿದೆ. ಬುಧವಾರ ಒಂದು ಹಂತದಲ್ಲಿ 76 ಪೈಸೆ ಕುಸಿತಗೊಂಡು 91.74ಕ್ಕೆ ಹೋಗಿದ್ದ ರುಪಾಯಿ, ಅಂತಿಮವಾಗಿ 91.70ಗೆ ನಿಂತಿದೆ. ಇದು ಡಾಲರ್ ಎದುರು ರುಪಾಯಿಯ ಸಾರ್ವಕಾಲಿಕ ಕನಿಷ್ಠ ಮೌಲ್ಯ ಎನಿಸಿದೆ.

ಡಾಲರ್ ಎದುರು ರುಪಾಯಿ ದುರ್ಬಲ ಪ್ರದರ್ಶನಕ್ಕೆ ಕಾರಣಗಳಿವು..

ವಿದೇಶೀ ಹೂಡಿಕೆಗಳು ಹೊರಹೋಗುವುದು ಮುಂದುವರಿಯುತ್ತಲೇ ಇದೆ; ಆಮದು ಅವಶ್ಯಕತೆ ಹೆಚ್ಚುತ್ತಿದೆ; ಡಾಲರ್ ಕರೆನ್ಸಿ ಪ್ರಬಲಗೊಳ್ಳುತ್ತಿದೆ. ರುಪಾಯಿ ಮೌಲ್ಯ ಕುಸಿಯಲು ಕಾರಣವಾಗಿರುವ ಅಂಶಗಳಲ್ಲಿ ಈ ಮೂರು ಇವೆ. ಅಮೆರಿಕದ ಟ್ಯಾರಿಫ್ ಬೆದರಿಕೆಯೂ ಹೂಡಿಕೆಗಳ ಹೊರಹರಿವಿಗೆ ಕಾರಣವಾಗಿರಬಹುದು.

ಡಾಲರ್ ಎದುರು ರುಪಾಯಿ ಕರೆನ್ಸಿ ಮೌಲ್ಯ ಡಿಸೆಂಬರ್​ನಲ್ಲಿ ಕನಿಷ್ಠ ಮಟ್ಟಕ್ಕೆ ಹೋಗಿತ್ತು. ಜನವರಿಯಲ್ಲಿ ಚೇತರಿಸಿಕೊಂಡಿತ್ತು. ಆದರೆ, ಕಳೆದ ಐದಾರು ಸೆಷನ್​ಗಳಿಂದ ರುಪಾಯಿ ಸತತವಾಗಿ ಹಿನ್ನಡೆ ಕಾಣುತ್ತಿದೆ.

ಇದನ್ನೂ ಓದಿ: ಜವಾಬ್ದಾರಿಯುತ ದೇಶಗಳ ಸೂಚ್ಯಂಕ; ಅಮೆರಿಕ, ಚೀನಾಗಿಂತ ಭಾರತ ಮೇಲೆ; ಪಾಕಿಸ್ತಾನ ಮತ್ತಿತರ ದೇಶಗಳು ಹೇಗೆ?

ಡಾಲರ್ ಎದುರು 93ಕ್ಕೆ ಕುಸಿಯುತ್ತಾ ರುಪಾಯಿ?

ಈಗಿರುವ ಒತ್ತಡಗಳು ಹೀಗೇ ಮುಂದುವರಿದಲ್ಲಿ ರುಪಾಯಿ ಮೌಲ್ಯವು 92.5ರಿಂದ 93ರವರೆಗೆ ಕುಸಿಯಬಹುದು ಎಂದು ಎಎನ್​ಝಡ್ ರಿಸರ್ಚ್​ನ ಧೀರಜ್ ನಿಮ್ ಹೇಳುತ್ತಾರೆ. ಆದರೆ, ಜಿಡಿಪಿ ಉತ್ತಮವಾಗಿ ವೃದ್ಧಿಸಿದರೆ, ಕಾರ್ಪೊರೇಟ್ ಗಳಿಕೆಗಳು ಉತ್ತಮವಾಗಿದ್ದರೆ, ಎಫ್​ಡಿಐ ಒಳಹರಿವು ಹೆಚ್ಚಿದರೆ ರುಪಾಯಿ ಕರೆನ್ಸಿ ಮತ್ತೆ ಬಲಗೊಳ್ಳಬಹುದು ಎನ್ನುವುದು ಇವರ ಅನಿಸಿಕೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು