AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಜಿಡಿಪಿ ಹೆಚ್ಚಳ ಶೇ. 6.8; ಮುಂದಿನ ಸಭೆಯಲ್ಲೇ ಆರ್​ಬಿಐನಿಂದ ಬಡ್ಡಿ ಇಳಿಕೆ: ಎಸ್ ಅಂಡ್ ಪಿ ನಿರೀಕ್ಷೆ

S&P Global Ratings projection on GDP, Inflation rate of India: 2024-25ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 6.8ರಷ್ಟು ಬೆಳೆಯಬಹುದು ಎಂದು ಎಸ್ ಅಂಡ್ ಪಿ ಗ್ಲೋಬಲ್ ರೇಟಿಂಗ್ಸ್ ಅಂದಾಜು ಮಾಡಿದೆ. ಮುಂದಿನ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 6.9ರಷ್ಟು ಹೆಚ್ಚಬಹುದು ಎಂದೂ ಹೇಳಿದೆ. ಈ ಹಿಂದೆ ಈ ಎರಡೂ ವರ್ಷಕ್ಕೆ ಅದು ಮಾಡಿದ್ದ ಅಂದಾಜಿನಲ್ಲಿ ವ್ಯತ್ಯಾಸ ಇಲ್ಲ. ಇದೇ ವೇಳೆ, ಅಕ್ಟೋಬರ್ ತಿಂಗಳಿಂದಲೇ ಆರ್​ಬಿಐ ಬಡ್ಡಿದರ ಕಡಿತದ ಹಂತ ಆರಂಭಿಸಬಹುದು ಎಂದೂ ಅದು ಪ್ರೆಡಿಕ್ಟ್ ಮಾಡಿದೆ.

ಈ ವರ್ಷ ಜಿಡಿಪಿ ಹೆಚ್ಚಳ ಶೇ. 6.8; ಮುಂದಿನ ಸಭೆಯಲ್ಲೇ ಆರ್​ಬಿಐನಿಂದ ಬಡ್ಡಿ ಇಳಿಕೆ: ಎಸ್ ಅಂಡ್ ಪಿ ನಿರೀಕ್ಷೆ
ಭಾರತದ ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 24, 2024 | 2:55 PM

Share

ನವದೆಹಲಿ, ಸೆಪ್ಟೆಂಬರ್ 24: ಪ್ರಸಕ್ತ ಹಣಕಾಸು ವರ್ಷದಲ್ಲಿ (2024-25) ಭಾರತದ ಜಿಡಿಪಿ ಶೇ. 6.8ರಷ್ಟು ಬೆಳೆಯಬಹುದು ಎಂದು ಈ ಹಿಂದೆ ಮಾಡಿದ್ದ ಅಂದಾಜನ್ನು ಎಸ್ ಅಂಡ್ ಪಿ ಗ್ಲೋಬಲ್ ರೇಟಿಂಗ್ಸ್ ಈಗಲೂ ಪುನರುಚ್ಚರಿಸಿದೆ. ಮುಂದಿನ ಹಣಕಾಸು ವರ್ಷದಲ್ಲಿ (2025-26) ಜಿಡಿಪಿ ಶೇ. 6.9ರಷ್ಟು ಹೆಚ್ಚಬಹುದು ಎಂದು ಅಂದಾಜು ಮಾಡಿದೆ. ಇದೇ ವೇಳೆ, ಅಕ್ಟೋಬರ್​ನಲ್ಲಿ ನಡೆಯಲಿರುವ ಆರ್​ಬಿಐನ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ಎಸ್ ಅಂಡ್ ಪಿ ನಿರೀಕ್ಷಿಸಿದೆ.

‘ಭಾರತದಲ್ಲಿ ಜೂನ್ ಅಂತ್ಯದ ಕ್ವಾರ್ಟರ್​ನಲ್ಲಿ ಜಿಡಿಪಿ ಬೆಳವಣಿಗೆ ಸ್ವಲ್ಪ ಮಂದಗೊಂಡಿದೆ. ಅಧಿಕ ಬಡ್ಡಿದರಗಳಿಂದಾಗಿ ನಗರ ಪ್ರದೇಶಗಳಲ್ಲಿ ಬಳಕೆ ಕಡಿಮೆ ಆಗಿರುವುದು ಇದಕ್ಕೆ ಕಾರಣ. ಇಡೀ ವರ್ಷದಲ್ಲಿ ಶೇ. 6.8ರಷ್ಟು ಜಿಡಿಪಿ ಬೆಳೆಯಬಹುದು ಎನ್ನುವ ನಮ್ಮ ನಿರೀಕ್ಷೆಯ ದಿಕ್ಕಿನಲ್ಲೇ ಜೂನ್ ಕ್ವಾರ್ಟರ್​ನಲ್ಲಿ ಆರ್ಥಿಕ ಬೆಳವಣಿಗೆ ಆಗಿದೆ,’ ಎಂದು ಎಸ್ ಅಂಡ್ ಪಿ ವಿವರಣೆ ನೀಡಿದೆ.

ಇದನ್ನೂ ಓದಿ: ಭಾರತದ ಶಕ್ತಿ..! ಅಮೆರಿಕದ ಸಹಭಾಗಿತ್ವದಲ್ಲಿ ಮೊದಲ ರಾಷ್ಟ್ರೀಯ ಭದ್ರತಾ ಸೆಮಿಕಂಡಕ್ಟರ್ ಫ್ಯಾಬ್ ಘಟಕ

ಆಹಾರ ಬೆಲೆ ಏರಿಕೆ ಸಮಸ್ಯೆ

ಎಸ್ ಅಂಡ್ ಪಿ ಗ್ಲೋಬಲ್ ರೇಟಿಂಗ್ಸ್ ಪ್ರಕಾರ ಆರ್​ಬಿಐ ಬಡ್ಡಿದರ ಕಡಿತಗೊಳಿಸಬಯಸಿದರೂ ಆಹಾರ ಬೆಲೆ ಏರಿಕೆಯು ಅದನ್ನು ತಡೆಯುತ್ತಿದೆ. ಈ ಆಹಾರ ವಸ್ತುಗಳ ಬೆಲೆ ಏರಿಕೆ ಕಡಿಮೆ ಆಗದೇ ಹೋದರೆ ಹಣದುಬ್ಬರವನ್ನು ಶೇ. 4ಕ್ಕೆ ತಂದು ನಿಲ್ಲಿಸುವುದು ಕಷ್ಟವಾಗುತ್ತದೆ. ಆದಾಗ್ಯೂ ಅಕ್ಟೋಬರ್​ನಿಂದಲೇ ಆರ್​ಬಿಐ ಬಡ್ಡಿದರ ಕಡಿತ ಶುರುವಿಟ್ಟುಕೊಳ್ಳಬಹುದು. ಈ ಹಣಕಾಸು ವರ್ಷ ಮುಗಿಯುವುದರೊಳಗೆ ಎರಡು ಬಾರಿ ಬಡ್ಡಿದರ ಕಡಿತಗೊಳಿಸಬಹುದು ಎಂದಿದೆ.

ಈ ಹಣಕಾಸು ವರ್ಷದಲ್ಲಿ ಹಣದುಬ್ಬರ ಸರಾಸರಿಯಾಗಿ ಶೇ. 4.5ರಷ್ಟಿರಬಹುದು ಎಂಬುದು ಎಸ್ ಅಂಡ್ ಪಿ ಅಂದಾಜು. ಆರ್​ಬಿಐ ಬಡ್ಡಿದರ ಬದಲಾಯಿಸಿ ವರ್ಷದ ಮೇಲಾಗಿದೆ. ಹಣದುಬ್ಬರ ಶೇ. 4ರ ಆಸುಪಾಸಿನಲ್ಲಿ ಸ್ಥಿರ ಆಗುವವರೆಗೂ ಬಡ್ಡಿದರ ಪರಿಷ್ಕರಿಸುವ ಗೋಜಿಗೆ ಹೋಗೋದಿಲ್ಲ ಎನ್ನುವಂತಹ ಸುಳಿವನ್ನು ಆರ್​ಬಿಐ ನೀಡಿದೆ. ಕೆಲ ತಿಂಗಳಿಂದ ಹಣದುಬ್ಬರ ದರ ಶೇ. 5ರ ಮಟ್ಟಕ್ಕಿಂತ ಕೆಳಗೇ ಇದೆ. ಇಲ್ಲಿ ಆಹಾರವಸ್ತುಗಳ ಬೆಲೆ ಏರಿಕೆ ಆಗದೇ ಹೋಗಿದ್ದರೆ ಹಣದುಬ್ಬರ ಶೇ. 4ಕ್ಕೆ ಬಂದು ಇಳಿಯುವ ಸಾಧ್ಯತೆ ಇತ್ತು ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: ಶಂಖ್ ಏರ್; ಭಾರತದಲ್ಲಿ ಪದಾರ್ಪಣೆ ಮಾಡಲಿದೆ ಹೊಸ ಏರ್​ಲೈನ್ಸ್ ಸಂಸ್ಥೆ

ಇನ್ನೊಂದೆಡೆ ಅಮೆರಿಕದಲ್ಲಿದ್ದ ಹಣದುಬ್ಬರ ದರ ತಹಬದಿಗೆ ಬಂದಿದೆ. ಅಲ್ಲಿನ ಫೆಡರಲ್ ರಿಸರ್ವ್ ನಿರೀಕ್ಷೆ ಮೀರಿ 50 ಮೂಲಾಂಕಗಳಷ್ಟು ಬಡ್ಡಿದರ ಕಡಿಮೆಗೊಳಿಸಿತ್ತು. ಆರ್​ಬಿಐ ಕೂಡ ದರ ಕಡಿತದ ನಿರ್ಧಾರ ಕೈಗೊಳ್ಳುತ್ತದಾ ಎನ್ನುವ ಕುತೂಹಲ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ