AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಮಾಡದಿದ್ರೆ ಇಲ್ಲ ಸಂಬಳ; ಸ್ಟ್ರೈಕ್​ನಿರತ ಉದ್ಯೋಗಿಗಳಿಗೆ ಸ್ಯಾಮ್ಸುಂಗ್ ಮ್ಯಾನೇಜ್ಮೆಂಟ್ ಎಚ್ಚರಿಕೆ

Samsung electronics face strike by employees: ಸ್ಯಾಮ್ಸುಂಗ್ ಎಲೆಕ್ಟ್ರಾನಿಕ್ಸ್​ನ ಚೆನ್ನೈ ಘಟಕದ ಉದ್ಯೋಗಿಗಳು ಸೆಪ್ಟೆಂಬರ್ 9ರಂದು ಆರಂಭಿಸಿದ ಪ್ರತಿಭಟನೆ ಇನ್ನೂ ನಿಂತಿಲ್ಲ. ಈ ಪ್ರತಿಭಟನೆ ಅಮಾನ್ಯವಾಗಿದ್ದು, ವಾಪಸ್ ಕೆಲಸಕ್ಕೆ ಬರುವವವರೆಗ ಅಷ್ಟು ದಿನದ ಸಂಬಳ ನೀಡೋದಿಲ್ಲ ಎಂದು ಸಂಸ್ಥೆಯ ಮ್ಯಾನೇಜ್ಮೆಂಟ್ ಹೇಳಿದೆ. ವೇತನ ಹೆಚ್ಚಿಸಬೇಕು, ಕಾರ್ಮಿಕರ ಒಕ್ಕೂಟಕ್ಕೆ ಮಾನ್ಯತೆ ಕೊಡಬೇಕು ಎನ್ನುವ ಪ್ರಮುಖ ಎರಡು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ.

ಕೆಲಸ ಮಾಡದಿದ್ರೆ ಇಲ್ಲ ಸಂಬಳ; ಸ್ಟ್ರೈಕ್​ನಿರತ ಉದ್ಯೋಗಿಗಳಿಗೆ ಸ್ಯಾಮ್ಸುಂಗ್ ಮ್ಯಾನೇಜ್ಮೆಂಟ್ ಎಚ್ಚರಿಕೆ
ಸ್ಯಾಮ್ಸುಂಗ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 20, 2024 | 5:28 PM

Share

ಚೆನ್ನೈ, ಸೆಪ್ಟೆಂಬರ್ 20: ಸೌತ್ ಕೊರಿಯಾ ಮೂಲದ ಸ್ಯಾಮ್ಸುಂಗ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಭಾರತದಲ್ಲಿ ಕಾರ್ಮಿಕರ ಪ್ರತಿಭಟನೆ ಎದುರಿಸುತ್ತಿದೆ. ಚೆನ್ನೈನ ಸ್ಯಾಮ್ಸುಂಗ್​ನ ಗೃಹೋಪಕರಣ ತಯಾರಿಕೆಯ ಫ್ಯಾಕ್ಟರಿಯಲ್ಲಿನ ಹಲವು ಕಾರ್ಮಿಕರು ಕಳೆದ 10-11 ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ನಡೆಸುವಷ್ಟು ದಿನದ್ದು ಸಂಬಳ ಕೊಡೋದಿಲ್ಲ. ಕೆಲಸ ಮಾಡಿದ ದಿನಕ್ಕೆ ಮಾತ್ರವೇ ಹಾಜರಾತಿ ಇರುತ್ತದೆ ಎಂದು ಸ್ಯಾಮ್ಸುಂಗ್ ಮ್ಯಾನೇಜ್ಮೆಂಟ್ ತನ್ನ ಉದ್ಯೋಗಿಗಳಿಗೆ ಇಮೇಲ್ ಮೂಲಕ ನೋಟೀಸ್ ನೀಡಿದೆ.

ಸ್ಯಾಮ್ಸುಂಗ್ ಉದ್ಯೋಗಿಗಳು ಪ್ರತಿಭಟನೆ ನಡೆಸುತ್ತಿರುವುದು ಯಾಕೆ?

ಚೆನ್ನೈನಲ್ಲಿರುವ ಸ್ಯಾಮ್ಸುಂಗ್ ಘಟಕದಲ್ಲಿ ಟಿವಿ, ರೆಫ್ರಿಜರೇಟರ್ ಇತ್ಯಾದಿ ಹೋಮ್ ಅಪ್ಲಯನ್ಸ್​ಗಳ ತಯಾರಿಕೆ ನಡೆಯುತ್ತದೆ. ಭಾರತದಲ್ಲಿ ಸಂಸ್ಥೆ ಗಳಿಸುವ 12 ಬಿಲಿಯನ್ ಡಾಲರ್ ಆದಾಯದಲ್ಲಿ ಈ ಗೃಹೋಪಕರಣಗಳ ಪಾಲು ಮೂರನೇ ಒಂದರಷ್ಟಿದೆ. ಸಾಕಷ್ಟು ಆದಾಯ ಇದ್ದರೂ ಉದ್ಯೋಗಿಗಳಿಗೆ ಸಾಕಷ್ಟು ವೇತನ ನೀಡುತ್ತಿಲ್ಲ ಎನ್ನುವ ಆರೋಪ ಕೆಲ ಸ್ತರದಲ್ಲಿ ಕೇಳಿಬರುತ್ತಿದೆ. ಹಾಗೆಯೇ, ಕಾರ್ಮಿಕ ಒಕ್ಕೂಟವನ್ನು ರಚಿಸಲಾಗಿದ್ದು, ಅದಕ್ಕೆ ಮಾನ್ಯತೆ ನೀಡಬೇಕು ಎನ್ನುವ ಬೇಡಿಕೆಯನ್ನೂ ಉದ್ಯೋಗಿಗಳು ಇಟ್ಟಿದ್ದಾರೆ.

ಉದ್ಯೋಗಿಗಳ ಈ ಎರಡು ಪ್ರಮುಖ ಬೇಡಿಕೆಗಳಿಗೆ ಸ್ಯಾಮ್ಸುಂಗ್ ಆಡಳಿತ ಕಿವಿಗೊಡುತ್ತಿಲ್ಲ. ಸಂಬಳ ಹೆಚ್ಚಳಕ್ಕೆ ನಿರಾಕರಿಸುತ್ತಿದೆ. ಈಗ ಪ್ರತಿಭಟನೆ ನಡೆಸುತ್ತಿರುವುದು ಕಾರ್ಮಿಕರ ಒಕ್ಕೂಟವೇ. ಫ್ಯಾಕ್ಟರಿ ಸಮೀಪವೇ ಒಂದು ತಾತ್ಕಾಲಿಕ ಡೇರೆ ಹಾಕಿದ್ದು ಅಲ್ಲಿ ಹಲವು ಉದ್ಯೋಗಿಗಳು ಪ್ರತಿಭಟನೆ ನಡೆಸಿದ್ದಾರೆ. ಮ್ಯಾನೇಜ್ಮೆಂಟ್ ವಿರುದ್ಧ ಭಾಷಣಗಳನ್ನು ಮಾಡುತ್ತಿದ್ದಾರೆ. ಕಳೆದ ವಾರ ಜಿಲ್ಲಾ ಕೋರ್ಟ್ ಬಳಿಕ ಪ್ರತಿಭಟನೆ ವಿರುದ್ಧ ತಾತ್ಕಾಲಿಕ ತಡೆ ತರುವ ಸ್ಯಾಮ್ಸುಂಗ್ ಪ್ರಯತ್ನ ವಿಫಲವಾಗಿತ್ತು.

ಇದನ್ನೂ ಓದಿ: ಅಪ್ಪ ಇಷ್ಟು ಶ್ರೀಮಂತ ಅಂತ ದೊಡ್ಡವಳಾಗೋವರೆಗೂ ಗೊತ್ತೇ ಇರ್ಲಿಲ್ಲ: ಅಚ್ಚರಿ ಹುಟ್ಟಿಸುತ್ತವೆ ವಾರನ್ ಬಫೆಟ್ ಮಗಳ ಮಾತುಗಳು

ಕೆಲಸ ಮಾಡದಿದ್ದರೆ ಸಂಬಳ ಇಲ್ಲ

ಉದ್ಯೋಗಿಗಳು ಮಾಡುತ್ತಿರುವ ಪ್ರತಿಭಟನೆ ಅಕ್ರಮವಾಗಿದೆ. ಪ್ರತಿಭಟನೆ ನಡೆಸುವ ಅಷ್ಟೂ ಅವಧಿಗೆ ಸಂಬಳ ಕೊಡೋದಿಲ್ಲ. ನೀವು ಕೆಲಸಕ್ಕೆ ಹಾಜರಾಗುವ ದಿನದಿಂದ ಸಂಬಳಕ್ಕೆ ಲೆಕ್ಕ ಇಡಲಾಗುತ್ತದೆ ಎಂದು ಸ್ಯಾಮ್ಸುಂಗ್ ಸಂಸ್ಥೆಯ ಎಚ್​ಆರ್ ವಿಭಾಗವು ಉದ್ಯೋಗಿಗಳಿಗೆ ಇಮೇಲ್ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು