AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್ ಮಲ್ಹೋತ್ರಾ ಹೊಸ ಆರ್​ಬಿಐ ಗವರ್ನರ್ ಆಗಿ ನೇಮಕ; ಶಕ್ತಿಕಾಂತ ದಾಸ್ ಅವಧಿ ಡಿ. 10ಕ್ಕೆ ಅಂತ್ಯ

Sanjay Malhotra appointed as new RBI governor: ಭಾರತೀಯ ರಿಸರ್ವ್ ಬ್ಯಾಂಕ್​ಗೆ ನೂತನ ಗವರ್ನರ್ ನೇಮಕವಾಗಿದೆ. ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್ ಮಲ್ಹೋತ್ರಾ ಅವರನ್ನು ಆರ್​ಬಿಐನ ಗವರ್ನರ್ ಆಗಿ ಸರ್ಕಾರ ನೇಮಕ ಮಾಡಿದೆ.

ಸಂಜಯ್ ಮಲ್ಹೋತ್ರಾ ಹೊಸ ಆರ್​ಬಿಐ ಗವರ್ನರ್ ಆಗಿ ನೇಮಕ; ಶಕ್ತಿಕಾಂತ ದಾಸ್ ಅವಧಿ ಡಿ. 10ಕ್ಕೆ ಅಂತ್ಯ
ಸಂಜಯ್ ಮಲ್ಹೋತ್ರಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 09, 2024 | 5:59 PM

Share

ನವದೆಹಲಿ, ಡಿಸೆಂಬರ್ 9: ಭಾರತೀಯ ರಿಸರ್ವ್ ಬ್ಯಾಂಕ್​ಗೆ ನೂತನ ಗವರ್ನರ್ ನೇಮಕವಾಗಿದೆ. ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್ ಮಲ್ಹೋತ್ರಾ ಅವರನ್ನು ಆರ್​ಬಿಐನ ಗವರ್ನರ್ ಆಗಿ ಸರ್ಕಾರ ನೇಮಕ ಮಾಡಿದೆ. ಪ್ರಸಕ್ತ ಆರ್​ಬಿಐ ಗವರ್ನರ್ ಆಗಿರುವ ಶಕ್ತಿಕಾಂತ ದಾಸ್ ಅವರ ಸೇವಾವಧಿ ಡಿಸೆಂಬರ್ 10, ನಾಳೆ ಮಂಗಳವಾರ ಅಂತ್ಯವಾಗುತ್ತಿದೆ. ಡಿಸೆಂಬರ್ 11ಕ್ಕೆ ಸಂಜಯ್ ಮಲ್ಹೋತ್ರಾ ಆರ್​ಬಿಐ ಗವರ್ನರ್ ಆಗಿ ಪದಗ್ರಹಣ ಮಾಡಲಿದ್ದಾರೆ. ಮೂರು ವರ್ಷ ಕಾಲ ಅವರ ಸೇವಾವಧಿ ಇದೆ.

ಸಂಜಯ್ ಮಲ್ಹೋತ್ರಾ ಅವರು ರಾಜಸ್ಥಾನ ಕೇಡರ್​ನ 1990ರ ಬ್ಯಾಚ್​ನ ಐಎಎಸ್ ಅಧಿಕಾರಿಯಾಗಿದ್ದಾರೆ. ಐಐಟಿ ಕಾನ್ಪುರ್​ನಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ಮಾಡಿದ್ದಾರೆ. ಅಮೆರಿಕದ ಪ್ರಿನ್ಸ್​ಟನ್ ಯೂನಿವರ್ಸಿಟಿಯಲ್ಲಿ ಪಬ್ಲಿಕ್ ಪಾಲಿಸಿಯಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡಿದ್ದಾರೆ. ಹಣಕಾಸು ಸಚಿವಾಲಯದಲ್ಲಿ ರೆವೆನ್ಯೂ ಕಾರ್ಯದರ್ಶಿಯಾಗಿ ಸದ್ಯ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್​ಇಸಿಯ ಛೇರ್ಮನ್ ಮತ್ತು ಎಂಡಿಯಾಗಿ ಕೆಲಸ ಮಾಡಿದ್ದರು. ಜಿಎಸ್​ಟಿ ಮಂಡಳಿಯಲ್ಲೂ ಅವರಿದ್ದರು. ವಿದ್ಯುತ್, ಹಣಕಾಸು, ತೆರಿಗೆ, ಐಟಿ, ಗಣಿ ಇತ್ಯಾದಿ ಹಲವು ಕ್ಷೇತ್ರಗಳಲ್ಲಿ ಸಂಜಯ್ ಮಲ್ಹೋತ್ರಾ ಕೆಲಸ ಮಾಡಿದ ಅನುಭವಿ ಎನಿಸಿದ್ದಾರೆ.

ಇದನ್ನೂ ಓದಿ: ಭಾರತದ ಸಮಗ್ರ ಬೆಳವಣಿಗೆ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯದಿಂದ ಮೆಚ್ಚುಗೆ: ಐಎಂಎಫ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕೆವಿ ಸುಬ್ರಮಣಿಯನ್

ವಿದ್ಯುತ್ ಸಚಿವಾಲಯದಲ್ಲಿ ಅಪರ ಕಾರ್ಯದರ್ಶಿಯಾಗಿದ್ದ ಅವರು 3 ಲಕ್ಷ ಕೋಟಿ ರೂ ಮೊತ್ತದ ವಿದ್ಯುತ್ ವಿತರಣೆಯಲ್ಲಿ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲು ಪ್ರಮುಖ ಪಾತ್ರ ವಹಿಸಿದ್ದಾರೆ. ತೆರಿಗೆ, ಪಬ್ಲಿಕ್ ಫೈನಾನ್ಸ್, ಇಂಧನ ವಲಯದ ಸುಧಾರಣೆ, ಆರ್ಥಿಕ ಆಡಳಿತದ ವಿಚಾರಗಳಲ್ಲಿ ಅವರಿಗಿರುವ ಪರಿಣಿತಿಯು ಸರ್ಕಾರಕ್ಕೆ ಲಾಭವಾಗುವ ನಿರೀಕ್ಷೆ ಇದೆ. ಆರ್​ಬಿಐ ಗವರ್ನರ್ ಆಗಿ ಅವರು ಮೂರು ವರ್ಷ ಸೇವೆ ಸಲ್ಲಿಸಲಿದ್ದಾರೆ.

ಸುದೀರ್ಘ ಅವಧಿ ಕೆಲಸ ಮಾಡಿದ್ದ ಶಕ್ತಿಕಾಂತದಾಸ್

ಪ್ರಸಕ್ತ ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್ 2018ರ ಡಿಸೆಂಬರ್​ನಲ್ಲಿ ನೇಮಕವಾದವರು. ಎರಡು ಬಾರಿ ಅವರ ಸೇವಾವಧಿ ವಿಸ್ತರಣೆ ಆಗಿದೆ. ಅತಿಹೆಚ್ಚು ಕಾಲ ಆರ್​ಬಿಐ ಗವರ್ನರ್ ಆದವರಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ ದಾಸ್. ಬೆನೆಗಲ್ ರಾಮರಾವು ಎಂಬುವವರು 1949ರಿಂದ 1957ರವರೆಗೆ ಏಳೂವರೆ ವರ್ಷ ಕಾಲ ಆರ್​ಬಿಐ ಗವರ್ನರ್ ಆಗಿದ್ದರು. ಶಕ್ತಿಕಾಂತ ದಾಸ್ ಆರು ವರ್ಷ ಆರ್​ಬಿಐ ಗವರ್ನರ್ ಆಗಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Mon, 9 December 24

ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?