AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವತ್ತು ಆರ್​ಬಿಐ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ಪದಗ್ರಹಣ; ಮುಂದಿನ ಎಂಪಿಸಿಯಿಂದ ಬಡ್ಡಿದರ ಇಳಿಸುವ ನಿರೀಕ್ಷೆ

Expectations from new RBI governor Sanjay Malhotra: ಆರ್​ಬಿಐನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಡಿ. 11ರಂದು ಅಧಿಕಾರ ವಹಿಸಿಕೊಂಡಿದ್ದಾರೆ. 26ನೇ ಆರ್​ಬಿಐ ಗವರ್ನರ್ ಆದ ಅವರು ಮೂರು ವರ್ಷ ಕಾರ್ಯಾವಧಿ ಹೊಂದಿದ್ದಾರೆ. ಬ್ಯೂರೋಕ್ರಸಿ ವ್ಯವಸ್ಥೆಯಲ್ಲಿ ಬೆಳೆದಿರುವ ಸಂಜಯ್ ಮಲ್ಹೋತ್ರಾ ನಾಯಕತ್ವದಲ್ಲಿ ಆರ್​ಬಿಐ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆಗಳಿವೆ...

ಇವತ್ತು ಆರ್​ಬಿಐ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ಪದಗ್ರಹಣ; ಮುಂದಿನ ಎಂಪಿಸಿಯಿಂದ ಬಡ್ಡಿದರ ಇಳಿಸುವ ನಿರೀಕ್ಷೆ
ಸಂಜಯ್ ಮಲ್ಹೋತ್ರಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 11, 2024 | 2:04 PM

Share

ನವದೆಹಲಿ, ಡಿಸೆಂಬರ್ 11: ಭಾರತೀಯ ರಿಸರ್ವ್ ಬ್ಯಾಂಕ್​ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಇಂದು ಬುಧವಾರ ಪದಗ್ರಹಣ ಮಾಡಿದ್ದಾರೆ. ಹಿಂದಿನ ಗವರ್ನರ್ ಶಕ್ತಿಕಾಂತ ದಾಸ್ ಅವರ ಸೇವಾವಧಿ ನಿನ್ನೆ (ಡಿ. 10) ಮುಗಿದಿತ್ತು. ಇಂದಿನಿಂದ ಮೂರು ವರ್ಷ ಕಾಲ ಆರ್​ಬಿಐನ ಚುಕ್ಕಾಣಿ ಸಂಜಯ್ ಮಲ್ಹೋತ್ರಾ ಅವರದ್ದಾಗಿದೆ. ಹೊಸ ಆರ್​ಬಿಐ ಗವರ್ನರ್ ಆಗಮನದ ಬಳಿಕ ಬಡ್ಡಿದರಗಳ ಇಳಿಕೆ ಬಗ್ಗೆ ಚರ್ಚೆಗಳು ನಡೆಯತೊಡಗಿವೆ.

ಶಕ್ತಿಕಾಂತ ದಾಸ್ ಅವರಂತೆ ಸಂಜಯ್ ಮಲ್ಹೋತ್ರಾ ಕೂಡ ಬ್ಯೂರೋಕ್ರಸಿಯೊಳಗಿಂದ ಆರ್​ಬಿಐ ಗವರ್ನರ್ ಹುದ್ದೆ ಪಡೆದವರು. ಸಂಜಯ್ ಮಲ್ಹೋತ್ರಾ ಅವರು ಈ ಮುಂಚೆ ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಅದಕ್ಕೂ ಮುನ್ನ ಅವರು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: MSSC scheme: ಮಹಿಳಾ ಸಮ್ಮಾನ್ ಸೇವಿಂಗ್ಸ್ ಸರ್ಟಿಫಿಕೇಟ್; ಠೇವಣಿ ಮೊತ್ತ, ಅವಧಿ, ಬಡ್ಡಿ ಇತ್ಯಾದಿ ವಿವರ

ಸಂಜಯ್ ಮಲ್ಹೋತ್ರಾ ನೇತೃತ್ವದಲ್ಲಿ ಆರ್​ಬಿಐ ದೃಷ್ಟಿಕೋನದಲ್ಲಿ ಬದಲಾವಣೆ?

ಸಂಜಯ್ ಮಲ್ಹೋತ್ರಾ ಅವರು ನೀತಿ ರೂಪಿಸುವ ವಿಚಾರದಲ್ಲಿ ತುಸು ಸಡಿಲಿಕೆಯ ಧೋರಣೆ ಹೊಂದಿದ್ದಾರೆ ಎಂಬುದು ತಜ್ಞರ ಅನಿಸಿಕೆ. ಅಂದರೆ, ಒಂದು ಪಡೆಯಲು ಮತ್ತೊಂದರಲ್ಲಿ ರಾಜಿಗೆ ಸಿದ್ಧವಿರುವ ಧೋರಣೆ. ಜಪಾನ್​ನ ಬ್ರೋಕರೇಜ್ ಸಂಸ್ಥೆಯಾದ ನೊಮುರಾ ಪ್ರಕಾರ ಮುಂದಿನ ಆರ್​ಬಿಐ ಎಂಪಿಸಿ ಸಭೆಯಲ್ಲಿ ರಿಪೋ ದರ ಇಳಿಕೆ ಶತಃಸಿದ್ಧವಂತೆ.

ಡಿಸೆಂಬರ್​ನಲ್ಲಿ ನಡೆದಿದ್ದ ಸಭೆಯಲ್ಲಿ ರಿಪೋ ದರ ಯಥಾಸ್ಥಿತಿ ಉಳಿಸಲು ನಿರ್ಧರಿಸಲಾಗಿತ್ತು. ಫೆಬ್ರುವರಿಯಲ್ಲಿ ಮುಂದಿನ ಎಂಪಿಸಿ ಸಭೆ ನಡೆಯಲಿದೆ. ಬಜೆಟ್ ಮಂಡನೆಯಾದ ಕೆಲವೇ ದಿನಗಳಲ್ಲಿ ಎಂಪಿಸಿ ಸಭೆ ನಡೆಯಲಿರುವುದರಿಂದ ಮಹತ್ವದ ನಿರ್ಧಾರಗಳನ್ನು ನಿರೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ಮೂರೂವರೆ ಲಕ್ಷ ಕೋಟಿ ರೂ ಗಾತ್ರ ಮುಟ್ಟಲಿರುವ ಭಾರತದ ಮನರಂಜನೆ-ಮಾಧ್ಯಮ ಉದ್ಯಮ

ನೂತನ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರನ್ನು ಬಲ್ಲವರ ಪ್ರಕಾರ, ಅವರು ಹಣಕಾಸು ಹಾಗೂ ಅದರ ಸಂಬಂಧಿತ ತಂತ್ರಜ್ಞಾನಗಳ ಬಗ್ಗೆ ಹೆಚ್ಚು ಅಸ್ಥೆ ವಹಿಸುತ್ತಾರೆ. ಆಡಳಿತಶಾಹಿ ವ್ಯವಸ್ಥೆಯಿಂದ ಬೆಳೆದು ಬಂದಿರುವ ಅವರು ಸರ್ಕಾರದ ಇರಾದೆಗಳಿಗೆ ಬೇಗ ಸ್ಪಂದಿಸುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಅವರನ್ನು ಆರ್​ಬಿಐ ಗವರ್ನರ್ ಆಗಿ ನೇಮಿಸಿರಬಹುದು ಎಂದು ಭಾವಿಸಲಡ್ಡಿಯಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!