ಇವತ್ತು ಆರ್​ಬಿಐ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ಪದಗ್ರಹಣ; ಮುಂದಿನ ಎಂಪಿಸಿಯಿಂದ ಬಡ್ಡಿದರ ಇಳಿಸುವ ನಿರೀಕ್ಷೆ

Expectations from new RBI governor Sanjay Malhotra: ಆರ್​ಬಿಐನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಡಿ. 11ರಂದು ಅಧಿಕಾರ ವಹಿಸಿಕೊಂಡಿದ್ದಾರೆ. 26ನೇ ಆರ್​ಬಿಐ ಗವರ್ನರ್ ಆದ ಅವರು ಮೂರು ವರ್ಷ ಕಾರ್ಯಾವಧಿ ಹೊಂದಿದ್ದಾರೆ. ಬ್ಯೂರೋಕ್ರಸಿ ವ್ಯವಸ್ಥೆಯಲ್ಲಿ ಬೆಳೆದಿರುವ ಸಂಜಯ್ ಮಲ್ಹೋತ್ರಾ ನಾಯಕತ್ವದಲ್ಲಿ ಆರ್​ಬಿಐ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆಗಳಿವೆ...

ಇವತ್ತು ಆರ್​ಬಿಐ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ಪದಗ್ರಹಣ; ಮುಂದಿನ ಎಂಪಿಸಿಯಿಂದ ಬಡ್ಡಿದರ ಇಳಿಸುವ ನಿರೀಕ್ಷೆ
ಸಂಜಯ್ ಮಲ್ಹೋತ್ರಾ

Updated on: Dec 11, 2024 | 2:04 PM

ನವದೆಹಲಿ, ಡಿಸೆಂಬರ್ 11: ಭಾರತೀಯ ರಿಸರ್ವ್ ಬ್ಯಾಂಕ್​ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಇಂದು ಬುಧವಾರ ಪದಗ್ರಹಣ ಮಾಡಿದ್ದಾರೆ. ಹಿಂದಿನ ಗವರ್ನರ್ ಶಕ್ತಿಕಾಂತ ದಾಸ್ ಅವರ ಸೇವಾವಧಿ ನಿನ್ನೆ (ಡಿ. 10) ಮುಗಿದಿತ್ತು. ಇಂದಿನಿಂದ ಮೂರು ವರ್ಷ ಕಾಲ ಆರ್​ಬಿಐನ ಚುಕ್ಕಾಣಿ ಸಂಜಯ್ ಮಲ್ಹೋತ್ರಾ ಅವರದ್ದಾಗಿದೆ. ಹೊಸ ಆರ್​ಬಿಐ ಗವರ್ನರ್ ಆಗಮನದ ಬಳಿಕ ಬಡ್ಡಿದರಗಳ ಇಳಿಕೆ ಬಗ್ಗೆ ಚರ್ಚೆಗಳು ನಡೆಯತೊಡಗಿವೆ.

ಶಕ್ತಿಕಾಂತ ದಾಸ್ ಅವರಂತೆ ಸಂಜಯ್ ಮಲ್ಹೋತ್ರಾ ಕೂಡ ಬ್ಯೂರೋಕ್ರಸಿಯೊಳಗಿಂದ ಆರ್​ಬಿಐ ಗವರ್ನರ್ ಹುದ್ದೆ ಪಡೆದವರು. ಸಂಜಯ್ ಮಲ್ಹೋತ್ರಾ ಅವರು ಈ ಮುಂಚೆ ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಅದಕ್ಕೂ ಮುನ್ನ ಅವರು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: MSSC scheme: ಮಹಿಳಾ ಸಮ್ಮಾನ್ ಸೇವಿಂಗ್ಸ್ ಸರ್ಟಿಫಿಕೇಟ್; ಠೇವಣಿ ಮೊತ್ತ, ಅವಧಿ, ಬಡ್ಡಿ ಇತ್ಯಾದಿ ವಿವರ

ಸಂಜಯ್ ಮಲ್ಹೋತ್ರಾ ನೇತೃತ್ವದಲ್ಲಿ ಆರ್​ಬಿಐ ದೃಷ್ಟಿಕೋನದಲ್ಲಿ ಬದಲಾವಣೆ?

ಸಂಜಯ್ ಮಲ್ಹೋತ್ರಾ ಅವರು ನೀತಿ ರೂಪಿಸುವ ವಿಚಾರದಲ್ಲಿ ತುಸು ಸಡಿಲಿಕೆಯ ಧೋರಣೆ ಹೊಂದಿದ್ದಾರೆ ಎಂಬುದು ತಜ್ಞರ ಅನಿಸಿಕೆ. ಅಂದರೆ, ಒಂದು ಪಡೆಯಲು ಮತ್ತೊಂದರಲ್ಲಿ ರಾಜಿಗೆ ಸಿದ್ಧವಿರುವ ಧೋರಣೆ. ಜಪಾನ್​ನ ಬ್ರೋಕರೇಜ್ ಸಂಸ್ಥೆಯಾದ ನೊಮುರಾ ಪ್ರಕಾರ ಮುಂದಿನ ಆರ್​ಬಿಐ ಎಂಪಿಸಿ ಸಭೆಯಲ್ಲಿ ರಿಪೋ ದರ ಇಳಿಕೆ ಶತಃಸಿದ್ಧವಂತೆ.

ಡಿಸೆಂಬರ್​ನಲ್ಲಿ ನಡೆದಿದ್ದ ಸಭೆಯಲ್ಲಿ ರಿಪೋ ದರ ಯಥಾಸ್ಥಿತಿ ಉಳಿಸಲು ನಿರ್ಧರಿಸಲಾಗಿತ್ತು. ಫೆಬ್ರುವರಿಯಲ್ಲಿ ಮುಂದಿನ ಎಂಪಿಸಿ ಸಭೆ ನಡೆಯಲಿದೆ. ಬಜೆಟ್ ಮಂಡನೆಯಾದ ಕೆಲವೇ ದಿನಗಳಲ್ಲಿ ಎಂಪಿಸಿ ಸಭೆ ನಡೆಯಲಿರುವುದರಿಂದ ಮಹತ್ವದ ನಿರ್ಧಾರಗಳನ್ನು ನಿರೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ಮೂರೂವರೆ ಲಕ್ಷ ಕೋಟಿ ರೂ ಗಾತ್ರ ಮುಟ್ಟಲಿರುವ ಭಾರತದ ಮನರಂಜನೆ-ಮಾಧ್ಯಮ ಉದ್ಯಮ

ನೂತನ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರನ್ನು ಬಲ್ಲವರ ಪ್ರಕಾರ, ಅವರು ಹಣಕಾಸು ಹಾಗೂ ಅದರ ಸಂಬಂಧಿತ ತಂತ್ರಜ್ಞಾನಗಳ ಬಗ್ಗೆ ಹೆಚ್ಚು ಅಸ್ಥೆ ವಹಿಸುತ್ತಾರೆ. ಆಡಳಿತಶಾಹಿ ವ್ಯವಸ್ಥೆಯಿಂದ ಬೆಳೆದು ಬಂದಿರುವ ಅವರು ಸರ್ಕಾರದ ಇರಾದೆಗಳಿಗೆ ಬೇಗ ಸ್ಪಂದಿಸುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಅವರನ್ನು ಆರ್​ಬಿಐ ಗವರ್ನರ್ ಆಗಿ ನೇಮಿಸಿರಬಹುದು ಎಂದು ಭಾವಿಸಲಡ್ಡಿಯಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us