AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Microsoft: ಸತ್ಯ ನಾದೆಲ್ಲಾ ಸಿಇಒ ಆದ 10 ವರ್ಷದಲ್ಲಿ 11 ಪಟ್ಟು ಬೆಳೆದಿರುವ ಮೈಕ್ರೋಸಾಫ್ಟ್ ಷೇರು; ಭಾರತಕ್ಕೆ ಎಐ ನೆರವು ನೀಡಲು ಸಿಇಒ ಅಪೇಕ್ಷೆ

Satya Nadella See 10 Years As Microsoft CEO: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಭಾರತಕ್ಕೆ ಎರಡು ದಿನದ ಭೇಟಿ ನೀಡಿದ್ಧಾರೆ. ಇವತ್ತು ಮುಂಬೈ, ನಾಳೆ ಬೆಂಗಳೂರಿನಲ್ಲಿ ಇರಲಿದ್ದಾರೆ. ಸತ್ಯ ನಾದೆಲ್ಲಾ ಮೈಕ್ರೋಸಾಫ್ಟ್ ಸಿಇಒ ಆಗಿ 10 ವರ್ಷ ಆಗಿದೆ. 2014ರಲ್ಲಿ ಅವರು ಆ ಹುದ್ದೆ ಪಡೆದಿದ್ದರು. ಹತ್ತು ವರ್ಷದಲ್ಲಿ ಮೈಕ್ರೋಸಾಫ್ಟ್ ಅಗಾಧವಾಗಿ ಬೆಳೆದಿದೆ. 3 ಟ್ರಿಲಿಯನ್ ಡಾಲರ್ ಮಾರ್ಕೆಟ್ ಕ್ಯಾಪ್ ಹೊಂದಿದೆ. ಆ್ಯಪಲ್ ಅನ್ನೂ ಮೀರಿಸಿದೆ.

Microsoft: ಸತ್ಯ ನಾದೆಲ್ಲಾ ಸಿಇಒ ಆದ 10 ವರ್ಷದಲ್ಲಿ 11 ಪಟ್ಟು ಬೆಳೆದಿರುವ ಮೈಕ್ರೋಸಾಫ್ಟ್ ಷೇರು; ಭಾರತಕ್ಕೆ ಎಐ ನೆರವು ನೀಡಲು ಸಿಇಒ ಅಪೇಕ್ಷೆ
ಸತ್ಯ ನಾದೆಲ್ಲಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 07, 2024 | 2:53 PM

Share

ನವದೆಹಲಿ, ಫೆಬ್ರುವರಿ 7: ಆಂಧ್ರ ಮೂಲದ ಸತ್ಯ ನಾದೆಲ್ಲಾ (Satya Nadella) ಮೈಕ್ರೋಸಾಫ್ಟ್ ಸಿಇಒ ಆಗಿ 10 ವರ್ಷ ಆಗಿದೆ. ಅದು ನಿಜಕ್ಕೂ ಒಂದು ಮೈಲಿಗಲ್ಲು. ಆ್ಯಪಲ್ ಅನ್ನೂ ಮೀರಿಸಿ ವಿಶ್ವದಲ್ಲೇ ಅತಿ ಹೆಚ್ಚು ಮಾರ್ಕೆಟ್ ಕ್ಯಾಪ್ ಹೊಂದಿರುವ ಮೈಕ್ರೋಸಾಫ್ಟ್ (Microsoft) ಸಂಸ್ಥೆಗೆ 10 ವರ್ಷ ಸಿಇಒ ಆಗುವುದು ಬಹಳ ಕ್ಲಿಷ್ಟಕರ ಕೆಲಸ. ಅದರಲ್ಲೂ ಆ್ಯಪಲ್​ನಂತಹ ಕಂಪನಿಯ ಪೈಪೋಟಿ ಹಾಗೂ ನಿರಂತರ ತಂತ್ರಜ್ಞಾನ ಆವಿಷ್ಕರಣೆಯ ಸ್ಪರ್ಧೆಗಳ ನಡುವೆ ಆ ಉನ್ನತ ಮಟ್ಟದಲ್ಲಿ ಹುದ್ದೆ ಹೊಂದುವುದು ಖಂಡಿತ ಸಾಮಾನ್ಯವಲ್ಲ. 1975ರಲ್ಲಿ ಸ್ಥಾಪನೆಯಾದ ಮೈಕ್ರೋಸಾಫ್ಟ್​ಗೆ ಈವರೆಗೆ ಸತ್ಯ ನಾದೆಲ್ಲಾ ಸೇರಿ ಮೂವರು ಮಾತ್ರವೇ ಸಿಇಒ ಆಗಿರುವುದು. ಸಂಸ್ಥಾಪಕ ಬಿಲ್ ಗೇಟ್ಸ್, ಸ್ಟೀವ್ ಬಾಲ್ಮರ್ ಹಾಗೂ ಸತ್ಯ ನಾದೆಲ್ಲಾ ಈ ಸಂಸ್ಥೆಯ ಚುಕ್ಕಾಣಿ ಹಿಡಿದವರು. ಸ್ಟೀವ್ ಬಾಲ್ಮರ್ 14 ವರ್ಷ ಸಿಇಒ ಆಗಿದ್ದರು. ಸತ್ಯ ನಾದೆಲ್ಲಾ 2014ರಿಂದ ಸಿಇಒ ಆಗಿದ್ದಾರೆ.

ಸತ್ಯ ನಾದೆಲ್ಲಾ ಸಂಬಳ ಎಷ್ಟು?

ವಿಶ್ವದಲ್ಲಿ ಅತಿಹೆಚ್ಚು ಸಂಬಳ ಪಡೆಯುವ ಸಿಇಒಗಳ ಪೈಕಿ ಸತ್ಯ ನಾದೆಲ್ಲಾ ಒಬ್ಬರು. 2022ರಲ್ಲಿ ಒಂದು ವರ್ಷದಲ್ಲಿ ಅವರು 55 ಮಿಲಿಯನ್ ಡಾಲರ್​ನಷ್ಟು ಸಂಬಳ ಪಡೆದಿದ್ದಾರೆ. ಅಂದರೆ ಒಂದು ವರ್ಷದಲ್ಲಿ ಬರೋಬ್ಬರಿ 456 ಕೋಟಿ ರೂನಷ್ಟು ಸಂಪಾದನೆ ಮಾಡಿದ್ದಾರೆ. 2023ರಲ್ಲಿ ಇವರ ಸಂಬಳ ತುಸು ಕಡಿಮೆ ಆಗಿದೆ. ನಾದೆಲ್ಲಾ ಅವರು 2023ರಲ್ಲಿ ಹೊಂದಿರುವ ಒಟ್ಟು ಮೈಕ್ರೋಸಾಫ್ಟ್ ಷೇರುಗಳ ಸಂಖ್ಯೆ 8,00,667 ಎನ್ನಲಾಗಿದೆ. ಅಂದರೆ ಇವರ ಬಳಿ 324 ಮಿಲಿಯನ್ ಡಾಲರ್ (2,694 ಕೋಟಿ ರೂ) ಮೌಲ್ಯದ ಷೇರುಸಂಪತ್ತು ಇದೆ.

ಇದನ್ನೂ ಓದಿ: ಕೇವಲ 15,000 ರೂ ಸಂಬಳ ಪಡೆಯುವ ಸಿಇಒ; ಜೀವನ ಹೇಗೆ ನಡೆಸ್ತಾರೆ ಕುನಾಲ್? ಎಂಥವರನ್ನೂ ಕರಗಿಸೀತು ಇವರ ಜೀವನ ಕಥೆ

ಮಲ್ಟಿಬ್ಯಾಗರ್ ಆಗಿರುವ ಮೈಕ್ರೋಸಾಫ್ಟ್ ಷೇರು

ಸತ್ಯನಾದೆಲ್ಲಾ ಸಿಇಒ ಆದಾಗ ಮೈಕ್ರೋಸಾಫ್ಟ್ ಇದ್ದ ಷೇರುಬೆಲೆ 10 ವರ್ಷದಲ್ಲಿ 11 ಪಟ್ಟು ಬೆಳೆದಿದೆ. ಇವತ್ತು ಮೈಕ್ರೋಸಾಫ್ಟ್​ನ ಒಂದು ಷೇರುಬೆಲೆ 405 ಡಾಲರ್ ಇದೆ. ಸಂಸ್ಥೆಯ ಒಟ್ಟು ಮಾರ್ಕೆಟ್ ಕ್ಯಾಪ್ ಅಥವಾ ಷೇರುಸಂಪತ್ತು 3.01 ಟ್ರಿಲಿಯನ್ ಡಾಲರ್ ಇದೆ.

ಹತ್ತು ವರ್ಷದ ಹಿಂದೆ ಯಾರಾದರೂ ಮೈಕ್ರೋಸಾಫ್ಟ್ ಷೇರಿನ ಮೇಲೆ ಒಂದು ಲಕ್ಷ ರೂ ಹೂಡಿಕೆ ಮಾಡಿದ್ದರೆ ಇವತ್ತು ಅದರ ಮೌಲ್ಯ 11 ಲಕ್ಷ ರೂ ಆಗಿರುತ್ತಿತ್ತು. ಅಷ್ಟು ಅಗಾಧವಾಗಿ ಷೇರುಬೆಲೆ ಹೆಚ್ಚಳವಾಗಿದೆ.

ಇದನ್ನೂ ಓದಿ: ‘ನಾವೇನು ಮಾಡಲು ಸಾಧ್ಯವಿಲ್ಲ’- ಪೇಟಿಎಂ ಸಿಇಒಗೆ ಖಚಿತ ಉತ್ತರ ಕೊಟ್ಟ ಆರ್​ಬಿಐ ಮತ್ತು ಸರ್ಕಾರ

ಎಐ ಕ್ಷೇತ್ರದಲ್ಲಿ ಭಾರತಕ್ಕೆ ನೆರವಾಗುವ ಬಯಕೆ ಸತ್ಯ ನಾದೆಲ್ಲಾಗೆ

ಭಾರತಕ್ಕೆ ಎರಡು ದಿನದ ಭೇಟಿ ನೀಡಿರುವ ಮೈಕ್ರೋಸಾಫ್ಟ್ ಸಿಇಒ ಅವರು, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದಲ್ಲಿ ಭಾರತಕ್ಕೆ ನೆರವಾಗುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಭಾರತ ತನ್ನದೇ ಎಐ ಉತ್ಪನ್ನಗಳನ್ನು ತಯಾರಿಸಿ ಅವುಗಳನ್ನು ವಿಶ್ವಕ್ಕೆ ರಫ್ತು ಮಾಡಬೇಕು. ಆ ನಿಟ್ಟಿನಲ್ಲಿ ಮೈಕ್ರೋಸಾಫ್ಟ್ ನೆರವಾಗಲು ಬಯಸುತ್ತದೆ ಎಂದು ಸಂದರ್ಶನವೊಂದರಲ್ಲಿ ಸತ್ಯ ಹೇಳಿದ್ದಾರೆ.

ಇವತ್ತು ಮುಂಬೈನಲ್ಲಿರುವ ಸತ್ಯ ನಾದೆಲ್ಲಾ ಫೆಬ್ರುವರಿ 8, ನಾಳೆ ಬೆಂಗಳೂರಿಗೆ ಬರಲಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?