AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವೇದಾಂತ ಸಂಸ್ಥೆಗೆ ಸೌದಿಯಲ್ಲಿ ಕಾಪರ್ ಫ್ಯಾಕ್ಟರಿ ಸ್ಥಾಪಿಸುವ ಯೋಜನೆ; 16,000 ಕೋಟಿ ರೂ ಹೂಡಿಕೆ ಸಾಧ್ಯತೆ

Vedanta gets copper project in Saudi: ಭಾರತದ ಮೈನಿಂಗ್ ಮತ್ತು ಲೋಹ ತಯಾರಿಕೆಯ ಕಂಪನಿಯಾದ ವೇದಾಂತಕ್ಕೆ ಸೌದಿಯಲ್ಲಿ ಒಳ್ಳೆಯ ಒಪ್ಪಂದ ಸಿಕ್ಕಿದೆ. ಸೌದಿಯ ರಾಸ್ ಅಲ್ ಖೇರ್ ಎಂಬಲ್ಲಿ 16,000 ಕೋಟಿ ರೂ ಬಂಡವಾಳದಲ್ಲಿ ತಾಮ್ರ ಉತ್ಪಾದನಾ ಘಟಕಗಳು ವೇದಾಂತದಿಂದ ನಿರ್ಮಾಣವಾಗಲಿವೆ. ರಿಯಾಧ್​ನಲ್ಲಿ ನಡೆದ ವರ್ಲ್ಡ್ ಇನ್ವೆಸ್ಟ್​ಮೆಂಟ್ ಕಾನ್ಫರೆನ್ಸ್​ನಲ್ಲಿ ವೇದಾಂತ ಅಲ್ಲದೆ, ಬೇರೆ ಬೇರೆ ದೇಶಗಳ ವಿವಿಧ ಕಂಪನಿಗಳೊಂದಿಗೆ ಅಲ್ಲಿನ ಸರ್ಕಾರ ಒಪ್ಪಂದ ಮಾಡಿಕೊಂಡಿದೆ.

ಭಾರತದ ವೇದಾಂತ ಸಂಸ್ಥೆಗೆ ಸೌದಿಯಲ್ಲಿ ಕಾಪರ್ ಫ್ಯಾಕ್ಟರಿ ಸ್ಥಾಪಿಸುವ ಯೋಜನೆ; 16,000 ಕೋಟಿ ರೂ ಹೂಡಿಕೆ ಸಾಧ್ಯತೆ
ವೇದಾಂತ ಸಂಸ್ಥೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 26, 2024 | 7:21 PM

ನವದೆಹಲಿ, ನವೆಂಬರ್ 26: ಸೌದಿ ಅರೇಬಿಯಾ ರಾಜಧಾನಿ ರಿಯಾಧ್​ನಲ್ಲಿ ನಡೆಯುತ್ತಿರುವ ವಿಶ್ವ ಹೂಡಿಕೆ ಸಮಾವೇಶದಲ್ಲಿ ಅಲ್ಲಿನ ಸರ್ಕಾರ ಲೋಹ ಹಾಗೂ ಮೈನಿಂಗ್ ಕ್ಷೇತ್ರದಲ್ಲಿ 35 ಬಿಲಿಯನ್ ರಿಯಾಲ್ (ಸುಮಾರು 85,000 ಕೋಟಿ ರೂ) ಮೌಲ್ಯದ ಒಂಬತ್ತು ಒಪ್ಪಂದಗಳಿಗೆ ಸಮ್ಮತಿ ನೀಡಿದೆ. ಭಾರತದ ವೇದಾಂತ ಸಂಸ್ಥೆಯೂ ಒಳಗೊಂಡಂತೆ ವಿಶ್ವದ ಬೇರೆ ಬೇರೆ ಕಂಪನಿಗಳು ಈ ಯೋಜನೆಗಳನ್ನು ಪಡೆದಿವೆ.

ಸೌದಿ ಅರೇಬಿಯಾ ಸರ್ಕಾರವು ಆರ್ಥಿಕತೆಯನ್ನು ವಿಸ್ತರಿಸಲು ಮತ್ತು ಪಳೆಯುಳಿಕೆ ಇಂಧನದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ವಿಶನ್ 2030 ಯೋಜನೆ ಹಾಕಿದೆ. ಅದರ ಭಾಗವಾಗಿ ಗಣಿಗಾರಿಕೆ ಉದ್ಯಮಕ್ಕೆ ಅದು ಪುಷ್ಟಿ ಕೊಡುತ್ತಿದೆ. 2030ರೊಳಗೆ ಮೈನಿಂಗ್ ಉದ್ಯಮಕ್ಕೆ ವಾರ್ಷಿಕವಾಗಿ 100 ಬಿಲಿಯನ್ ಡಾಲರ್ ವಿದೇಶೀ ಹೂಡಿಕೆ ಹರಿದುಬರುವ ಆಶಯ ಇಟ್ಟುಕೊಂಡು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಇದನ್ನೂ ಓದಿ: ಏಪ್ರಿಲ್​ನಿಂದ ಅಕ್ಟೋಬರ್​ವರೆಗೆ 10 ಬಿಲಿಯನ್ ಡಾಲರ್ ಮೌಲ್ಯದ ಐಫೋನ್ ತಯಾರಿಕೆ; 10 ಬಿಲಿಯನ್ ಡಾಲರ್​ಗೂ ಅಧಿಕ ಸ್ಮಾರ್ಟ್​ಫೋನ್ ರಫ್ತು

ಭಾರತದ ವೇದಾಂತ ಸಂಸ್ಥೆಯು ಸೌದಿಯ ರಾಸ್ ಅಲ್ ಖೇರ್ ಎಂಬಲ್ಲಿ 7.5 ಬಿಲಿಯನ್ ರಿಯಾಲ್ ಬಂಡವಾಳದಲ್ಲಿ ಕಾಪರ್ ರಿಫೈನರಿ ಸೇರಿದಂತೆ ವಿವಿಧ ತಾಮ್ರ ಘಟಕಗಳನ್ನು ನಿರ್ಮಿಸಲಿದೆ. ವಾರ್ಷಿಕವಾಗಿ ನಾಲ್ಕು ಲಕ್ಷ ಮೆಟ್ರಿಕ್ ಟನ್ ಉತ್ಪಾದನಾ ಸಾಮರ್ಥ್ಯವು ಈ ಘಟಕಗಳಲ್ಲಿ ಇರಲಿದೆ. ಹಾಗೆಯೇ, ವಾರ್ಷಿಕ ಮೂರು ಲಕ್ಷ ಟನ್ ಕಾಪರ್ ರಾಡ್ ಉತ್ಪಾದನಾ ಘಟಕವನ್ನೂ ಅದು ನಿರ್ಮಿಸಲಿದೆ.

ತಾಮ್ರ ಉತ್ಪಾದನೆಯಲ್ಲಿ ಸೌದಿ ಸ್ವಾಲಂಬನೆ ಸಾಧಿಸಲು ವೇದಾಂತದೊಂದಿಗೆ ಮಾಡಿಕೊಳ್ಳಲಾಗಿರುವ ಈ ಒಪ್ಪಂದ ಸಹಕಾರಿಯಾಗಲಿದೆ. ಆ ದೇಶದ ಆರ್ಥಿಕತೆಯ ಬೆಳವಣಿಗೆಗೆ ಅಂದಾಜು 70 ಬಿಲಿಯನ್ ರಿಯಾಲ್​​ಗಳಷ್ಟು ಕೊಡುಗೆ ಸಿಗುವ ನಿರೀಕ್ಷೆಯೂ ಇದೆ.

ಇದನ್ನೂ ಓದಿ: ಮಾರುತಿ ಸುಜುಕಿಯ 30 ಲಕ್ಷ ಕಾರುಗಳ ರಫ್ತು, ಹೊಸ ಮೈಲಿಗಲ್ಲು; ಕಿಯಾದ 1 ಲಕ್ಷ ಸಿಕೆಡಿ ಯೂನಿಟ್ಸ್ ರಫ್ತು

ಚೀನಾದ ಝಿಜಿನ್ ಸಂಸ್ಥೆಯು ಸೌದಿಯಲ್ಲಿ ಜಿಂಕ್ ಉತ್ಪಾದನೆಗೆ ಗುತ್ತಿಗೆಗಳನ್ನು ಪಡೆದಿದೆ. ಆಸ್ಟ್ರೇಲಿಯಾದ ಹೇಸ್ಟಿಂಗ್ಸ್ ಟೆಕ್ನಾಲಜಿ ಮೆಟಲ್ಸ್ ಸಂಸ್ಥೆಯು ಅಪರೂಪದ ಭೂ ಖನಿಜಗಳ ಸಂಸ್ಕರಣಾ ಘಟಕಗಳನ್ನು ನಿರ್ಮಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ