AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI 3 in 1 Account: ಎಸ್​ಬಿಐ 3 ಇನ್ 1 ಖಾತೆ ವೈಶಿಷ್ಟ್ಯ, ಅನುಕೂಲ ಹಾಗೂ ಇತರ ಮಾಹಿತಿಗಳು ಇಲ್ಲಿವೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 3 ಇನ್ 1 ಖಾತೆಯ ವೈಶಿಷ್ಟ್ಯ, ಅನುಕೂಲ ಮತ್ತು ಇತರ ವಿವರಗಳನ್ನು ಇಲ್ಲಿ ನೀಡಲಾಗಿದೆ. ಇದರಿಂದ ಗ್ರಾಹಕರಿಗೆ ಅನುಕೂಲ ಆಗಲಿದೆ.

SBI 3 in 1 Account: ಎಸ್​ಬಿಐ 3 ಇನ್ 1 ಖಾತೆ ವೈಶಿಷ್ಟ್ಯ, ಅನುಕೂಲ ಹಾಗೂ ಇತರ ಮಾಹಿತಿಗಳು ಇಲ್ಲಿವೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 16, 2021 | 9:23 PM

ದೇಶದ ಅತಿ ದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 3-ಇನ್-1 ಖಾತೆಯನ್ನು ಒದಗಿಸುತ್ತದೆ. ಉಳಿತಾಯ ಬ್ಯಾಂಕ್ ಖಾತೆ, ಡಿಮ್ಯಾಟ್ ಖಾತೆ ಮತ್ತು ಆನ್‌ಲೈನ್ ಟ್ರೇಡಿಂಗ್ ಖಾತೆಯನ್ನು ಸಂಯೋಜಿಸಿ, ಸರಳ ಮತ್ತು ಕಾಗದರಹಿತ (ಪೇಪರ್​ಲೆಸ್) ವ್ಯವಹಾರದ ಅನುಭವವನ್ನು ಒದಗಿಸುತ್ತದೆ. ಆದ್ದರಿಂದ ಷೇರು ಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಡಿಮ್ಯಾಟ್ ಮತ್ತು ಟ್ರೇಡಿಂಗ್ ಖಾತೆಯು ಕಡ್ಡಾಯವಾಗಿದೆ. ಇ-ಮಾರ್ಜಿನ್ ಸೌಲಭ್ಯದೊಂದಿಗೆ 3 ಇನ್ 1 ಖಾತೆ ತೆರೆಯುವುದು ಹೇಗೆಂಬ ವಿವರ ಇಲ್ಲಿದೆ. ಉಳಿತಾಯ ಖಾತೆ, ಡಿಮ್ಯಾಟ್ ಖಾತೆ ಮತ್ತು ಟ್ರೇಡಿಂಗ್ ಖಾತೆಯ ಅನುಕೂಲಗಳನ್ನು ಒಂದೇ ಸೂರಿನಡಿ ಪಡೆಯಿರಿ ಎಂದು ಎಸ್‌ಬಿಐ ಹೇಳಿದೆ. “3-ಇನ್-1 ಶಕ್ತಿಯನ್ನು ಅನುಭವಿಸಿ! ಉಳಿತಾಯ ಖಾತೆ, ಡಿಮ್ಯಾಟ್ ಖಾತೆ ಮತ್ತು ಟ್ರೇಡಿಂಗ್ ಖಾತೆಯನ್ನು ಸಂಯೋಜಿಸುವ ಖಾತೆಯು ಸರಳ ಮತ್ತು ಪೇಪರ್‌ಲೆಸ್ ಟ್ರೇಡಿಂಗ್ ಅನುಭವವನ್ನು ಒದಗಿಸುತ್ತದೆ,” ಎಂದು ಎಸ್‌ಬಿಐ ಟ್ವೀಟ್‌ನಲ್ಲಿ ತಿಳಿಸಿದೆ.

SBI ಉಳಿತಾಯ ಬ್ಯಾಂಕ್ ಖಾತೆ: ಅಗತ್ಯ ದಾಖಲೆಗಳು – ಪ್ಯಾನ್ ಅಥವಾ ಫಾರ್ಮ್ 60 – ಭಾವಚಿತ್ರ

ಕೆಳಗಿನಂತೆ ಅಧಿಕೃತವಾಗಿ ಮಾನ್ಯವಾದ ದಾಖಲೆಗಳಲ್ಲಿ (OVD) ಒಂದು: – ಪಾಸ್​ಪೋರ್ಟ್ – ಆಧಾರ್ ಹೊಂದಿರುವ ಪುರಾವೆ – ಚಾಲನಾ ಪರವಾನಗಿ – ಮತದಾರರ ಗುರುತಿನ ಚೀಟಿ – MNREGA ನೀಡಿದ ಜಾಬ್ ಕಾರ್ಡ್ – ಹೆಸರು ಮತ್ತು ವಿಳಾಸದ ವಿವರಗಳನ್ನು ಹೊಂದಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಿಂದ ಹೊರಡಿಸಲಾದ ಪತ್ರ.

SBI ಡಿಮ್ಯಾಟ್ ಮತ್ತು ವ್ಯಾಪಾರ ಖಾತೆ: ಅಗತ್ಯ ದಾಖಲೆಗಳು – ಪಾಸ್​ಪೋರ್ಟ್ ಅಳತೆಯ ಭಾವಚಿತ್ರ (ಒಂದು) – ಪ್ಯಾನ್ ಕಾರ್ಡ್ ನಕಲು – ಆಧಾರ್ ಕಾರ್ಡ್ ನಕಲು – ಒಂದು ರದ್ದಾದ (ಕ್ಯಾನ್ಸಲ್ಡ್) ಚೆಕ್ ಲೀಫ್/ಇತ್ತೀಚಿನ ಬ್ಯಾಂಕ್ ಸ್ಟೇಟ್‌ಮೆಂಟ್.

ಎಸ್‌ಬಿಐ ಪ್ರಕಾರ, ಡಿಮ್ಯಾಟ್ ಖಾತೆಯು ಭೌತಿಕ ಷೇರು ಪ್ರಮಾಣಪತ್ರವನ್ನು ಎಲೆಕ್ಟ್ರಾನಿಕ್ ಬ್ಯಾಲೆನ್ಸ್‌ಗಳಾಗಿ ಪರಿವರ್ತಿಸಲು ಅನುವು ಮಾಡಿಕೊಡುತ್ತದೆ. ಅಲ್ಲದೆ, ಇದು ಮಾರುಕಟ್ಟೆ/ ಆಫ್-ಮಾರುಕಟ್ಟೆ ವಹಿವಾಟುಗಳ ಪರಿಣಾಮವಾಗಿ ಎಲೆಕ್ಟ್ರಾನಿಕ್ ಬ್ಯಾಲೆನ್ಸ್‌ಗಳ ವಿತರಣೆ/ ರಶೀದಿಯನ್ನು ಸುಗಮಗೊಳಿಸುತ್ತದೆ ಎಂದು ಎಸ್‌ಬಿಐ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಇದನ್ನೂ ಓದಿ: Personal loan: ಎಸ್​ಬಿಐ ಗ್ರಾಹಕರಿಗೆ ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲದ ಮೇಲೆ ವಿಶೇಷ ವಿನಾಯಿತಿ; ಪಡೆಯುವುದು ಹೇಗೆ?

ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್