AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI 3 in 1 Account: ಎಸ್​ಬಿಐ 3 ಇನ್ 1 ಖಾತೆ ವೈಶಿಷ್ಟ್ಯ, ಅನುಕೂಲ ಹಾಗೂ ಇತರ ಮಾಹಿತಿಗಳು ಇಲ್ಲಿವೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 3 ಇನ್ 1 ಖಾತೆಯ ವೈಶಿಷ್ಟ್ಯ, ಅನುಕೂಲ ಮತ್ತು ಇತರ ವಿವರಗಳನ್ನು ಇಲ್ಲಿ ನೀಡಲಾಗಿದೆ. ಇದರಿಂದ ಗ್ರಾಹಕರಿಗೆ ಅನುಕೂಲ ಆಗಲಿದೆ.

SBI 3 in 1 Account: ಎಸ್​ಬಿಐ 3 ಇನ್ 1 ಖಾತೆ ವೈಶಿಷ್ಟ್ಯ, ಅನುಕೂಲ ಹಾಗೂ ಇತರ ಮಾಹಿತಿಗಳು ಇಲ್ಲಿವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 16, 2021 | 9:23 PM

Share

ದೇಶದ ಅತಿ ದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 3-ಇನ್-1 ಖಾತೆಯನ್ನು ಒದಗಿಸುತ್ತದೆ. ಉಳಿತಾಯ ಬ್ಯಾಂಕ್ ಖಾತೆ, ಡಿಮ್ಯಾಟ್ ಖಾತೆ ಮತ್ತು ಆನ್‌ಲೈನ್ ಟ್ರೇಡಿಂಗ್ ಖಾತೆಯನ್ನು ಸಂಯೋಜಿಸಿ, ಸರಳ ಮತ್ತು ಕಾಗದರಹಿತ (ಪೇಪರ್​ಲೆಸ್) ವ್ಯವಹಾರದ ಅನುಭವವನ್ನು ಒದಗಿಸುತ್ತದೆ. ಆದ್ದರಿಂದ ಷೇರು ಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಡಿಮ್ಯಾಟ್ ಮತ್ತು ಟ್ರೇಡಿಂಗ್ ಖಾತೆಯು ಕಡ್ಡಾಯವಾಗಿದೆ. ಇ-ಮಾರ್ಜಿನ್ ಸೌಲಭ್ಯದೊಂದಿಗೆ 3 ಇನ್ 1 ಖಾತೆ ತೆರೆಯುವುದು ಹೇಗೆಂಬ ವಿವರ ಇಲ್ಲಿದೆ. ಉಳಿತಾಯ ಖಾತೆ, ಡಿಮ್ಯಾಟ್ ಖಾತೆ ಮತ್ತು ಟ್ರೇಡಿಂಗ್ ಖಾತೆಯ ಅನುಕೂಲಗಳನ್ನು ಒಂದೇ ಸೂರಿನಡಿ ಪಡೆಯಿರಿ ಎಂದು ಎಸ್‌ಬಿಐ ಹೇಳಿದೆ. “3-ಇನ್-1 ಶಕ್ತಿಯನ್ನು ಅನುಭವಿಸಿ! ಉಳಿತಾಯ ಖಾತೆ, ಡಿಮ್ಯಾಟ್ ಖಾತೆ ಮತ್ತು ಟ್ರೇಡಿಂಗ್ ಖಾತೆಯನ್ನು ಸಂಯೋಜಿಸುವ ಖಾತೆಯು ಸರಳ ಮತ್ತು ಪೇಪರ್‌ಲೆಸ್ ಟ್ರೇಡಿಂಗ್ ಅನುಭವವನ್ನು ಒದಗಿಸುತ್ತದೆ,” ಎಂದು ಎಸ್‌ಬಿಐ ಟ್ವೀಟ್‌ನಲ್ಲಿ ತಿಳಿಸಿದೆ.

SBI ಉಳಿತಾಯ ಬ್ಯಾಂಕ್ ಖಾತೆ: ಅಗತ್ಯ ದಾಖಲೆಗಳು – ಪ್ಯಾನ್ ಅಥವಾ ಫಾರ್ಮ್ 60 – ಭಾವಚಿತ್ರ

ಕೆಳಗಿನಂತೆ ಅಧಿಕೃತವಾಗಿ ಮಾನ್ಯವಾದ ದಾಖಲೆಗಳಲ್ಲಿ (OVD) ಒಂದು: – ಪಾಸ್​ಪೋರ್ಟ್ – ಆಧಾರ್ ಹೊಂದಿರುವ ಪುರಾವೆ – ಚಾಲನಾ ಪರವಾನಗಿ – ಮತದಾರರ ಗುರುತಿನ ಚೀಟಿ – MNREGA ನೀಡಿದ ಜಾಬ್ ಕಾರ್ಡ್ – ಹೆಸರು ಮತ್ತು ವಿಳಾಸದ ವಿವರಗಳನ್ನು ಹೊಂದಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಿಂದ ಹೊರಡಿಸಲಾದ ಪತ್ರ.

SBI ಡಿಮ್ಯಾಟ್ ಮತ್ತು ವ್ಯಾಪಾರ ಖಾತೆ: ಅಗತ್ಯ ದಾಖಲೆಗಳು – ಪಾಸ್​ಪೋರ್ಟ್ ಅಳತೆಯ ಭಾವಚಿತ್ರ (ಒಂದು) – ಪ್ಯಾನ್ ಕಾರ್ಡ್ ನಕಲು – ಆಧಾರ್ ಕಾರ್ಡ್ ನಕಲು – ಒಂದು ರದ್ದಾದ (ಕ್ಯಾನ್ಸಲ್ಡ್) ಚೆಕ್ ಲೀಫ್/ಇತ್ತೀಚಿನ ಬ್ಯಾಂಕ್ ಸ್ಟೇಟ್‌ಮೆಂಟ್.

ಎಸ್‌ಬಿಐ ಪ್ರಕಾರ, ಡಿಮ್ಯಾಟ್ ಖಾತೆಯು ಭೌತಿಕ ಷೇರು ಪ್ರಮಾಣಪತ್ರವನ್ನು ಎಲೆಕ್ಟ್ರಾನಿಕ್ ಬ್ಯಾಲೆನ್ಸ್‌ಗಳಾಗಿ ಪರಿವರ್ತಿಸಲು ಅನುವು ಮಾಡಿಕೊಡುತ್ತದೆ. ಅಲ್ಲದೆ, ಇದು ಮಾರುಕಟ್ಟೆ/ ಆಫ್-ಮಾರುಕಟ್ಟೆ ವಹಿವಾಟುಗಳ ಪರಿಣಾಮವಾಗಿ ಎಲೆಕ್ಟ್ರಾನಿಕ್ ಬ್ಯಾಲೆನ್ಸ್‌ಗಳ ವಿತರಣೆ/ ರಶೀದಿಯನ್ನು ಸುಗಮಗೊಳಿಸುತ್ತದೆ ಎಂದು ಎಸ್‌ಬಿಐ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಇದನ್ನೂ ಓದಿ: Personal loan: ಎಸ್​ಬಿಐ ಗ್ರಾಹಕರಿಗೆ ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲದ ಮೇಲೆ ವಿಶೇಷ ವಿನಾಯಿತಿ; ಪಡೆಯುವುದು ಹೇಗೆ?

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ