SBI home loan: ಗೃಹ ಸಾಲ ಬಡ್ಡಿ ದರ ಹೆಚ್ಚಿಸಿದ ಎಸ್​ಬಿಐನಿಂದ ಪ್ರೊಸೆಸಿಂಗ್ ಶುಲ್ಕ ಮನ್ನಾ ಕೂಡ ಇಲ್ಲ

SBI home loan: ಭಾರತದ ಅತಿ ದೊಡ್ಡ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಏಪ್ರಿಲ್ 1ರಿಂದ ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಹೆಚ್ಚಳ ಮಾಡಿದೆ. ಅಷ್ಟೇ ಅಲ್ಲ, ಪ್ರೊಸೆಸಿಂಗ್ ಶುಲ್ಕ ಮನ್ನಾ ಕೂಡ ಇಲ್ಲ.

SBI home loan: ಗೃಹ ಸಾಲ ಬಡ್ಡಿ ದರ ಹೆಚ್ಚಿಸಿದ ಎಸ್​ಬಿಐನಿಂದ ಪ್ರೊಸೆಸಿಂಗ್ ಶುಲ್ಕ ಮನ್ನಾ ಕೂಡ ಇಲ್ಲ
ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಎಸ್‌ಬಿಐ ಎರಡು ಖಾತೆಗಳನ್ನು ಒದಗಿಸುತ್ತದೆ - ಪೆಹ್ಲಾಕದಮ್ ಮತ್ತು ಪೆಹ್ಲಿಉಡಾನ್. ಇವೆರಡನ್ನು ವಿಶೇಷವಾಗಿ ಮಕ್ಕಳಿಗಾಗಿಯೇ ರೂಪಿಸಲಾಗಿದೆ. ಪೆಹ್ಲಾಕದಮ್ ಉಳಿತಾಯ ಖಾತೆಯನ್ನು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮಗು ತೆರೆಯಬಹುದು. ಈ ಉಳಿತಾಯ ಖಾತೆಯು ಪೋಷಕರು ಮತ್ತು ಮಗುವಿನ ಜಂಟಿ ಖಾತೆಯಾಗಿದ್ದು, ಅಲ್ಲಿ ಪೋಷಕರು ಸೆಕೆಂಡರಿ ಖಾತೆದಾರರಾಗಿರುತ್ತಾರೆ ಮತ್ತು ಮಗು ಪ್ರಾಥಮಿಕ ಹೋಲ್ಡರ್ ಆಗಿರುತ್ತದೆ. ಸಾಮಾನ್ಯ ಉಳಿತಾಯ ಖಾತೆಯಂತೆ, ಈ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಮಾನದಂಡಗಳಿಲ್ಲ. ಮೊಬೈಲ್ ಬ್ಯಾಂಕಿಂಗ್ ಮತ್ತು ಚೆಕ್ ಪುಸ್ತಕಗಳ ವಿತರಣೆಯಂತಹ ವೈಶಿಷ್ಟ್ಯಗಳು ಎರಡರಲ್ಲೂ ಲಭ್ಯವಿವೆ. ಓವರ್ ಡ್ರಾಫ್ಟ್, ಎಟಿಎಂ ಸೌಲಭ್ಯ ಮತ್ತು ಇತರ ಹೂಡಿಕೆ ಆಯ್ಕೆಗಳನ್ನು ಈ ಖಾತೆಗಳೊಂದಿಗೆ ಸೇರಿಸಲಾಗಿದೆ.
Follow us
|

Updated on: Apr 06, 2021 | 9:28 PM

ಭಾರತದ ಅತಿ ದೊಡ್ಡ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಏಪ್ರಿಲ್ 1, 2021ರಿಂದ ಅನ್ವಯ ಆಗುವಂತೆ ಗೃಹ ಸಾಲದ (ಹೋಮ್ ಲೋನ್) ಮೇಲಿನ ಬಡ್ಡಿ ದರವನ್ನು ಪರಿಷ್ಕರಣೆ ಮಾಡಿದೆ. ಈಗಿನ ಹೊಸ ದರದ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗೃಹ ಸಾಲವು ದುಬಾರಿ ಆಗಲಿದೆ. ಜತೆಗೆ ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಶೇ 6.70ಯಿಂದ ಶೇ 6.95ಕ್ಕೆ ಏರಿಕೆ ಮಾಡಲಾಗಿದೆ. ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ನೆಲ ಕಚ್ಚಿದ್ದ ರಿಯಲ್ ಎಸ್ಟೇಟ್ ವಲಯದಲ್ಲಿ ಬೇಡಿಕೆ ಹೆಚ್ಚಾಗಲಿ ಎಂಬ ಕಾರಣಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಈ ಹಿಂದೆ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರವನ್ನು ಶೇ 6.70ಗೆ ಇಳಿಕೆ ಮಾಡಿತ್ತು.

75 ಲಕ್ಷ ರೂಪಾಯಿವರೆಗಿನ ಗೃಹ ಸಾಲಕ್ಕೆ ಆರಂಭಿಕ ಬಡ್ಡಿ ದರ ಶೇ 6.70 ಇದ್ದರೆ, 75 ಲಕ್ಷ ರೂಪಾಯಿ ಮೇಲ್ಪಟ್ಟು, ರೂ. 5 ಕೋಟಿ ತನಕದ ಗೃಹ ಸಾಲಕ್ಕೆ ಆರಂಭದ ಬಡ್ಡಿ ದರ ಶೇ 6.75 ಇತ್ತು. ಆದರೆ ಈ ಸೀಮಿತ ಅವಧಿಯ ಆಫರ್ ಈಚಿನ ತಿದ್ದುಪಡಿಯೊಂದಿಗೆ ಮಾರ್ಚ್ 31, 2021ಕ್ಕೆ ಕೊನೆಯಾಯಿತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವೆಬ್​ಸೈಟ್​ನ ಮಾಹಿತಿ ಆಧರಿಸಿ ಹೇಳುವುದಾದರೆ, ಗೃಹ ಸಾಲದ ಮೇಲಿನ ಹೊಸ ಪರಿಷ್ಕೃತ ದರವು ಏಪ್ರಿಲ್ 1, 2021ರಿಂದ ಅನ್ವಯ ಆಗುತ್ತದೆ. ಅದು ಶೇಕಡಾ 6.95 ಆಗಿರುತ್ತದೆ.

ದೇಶದ ಅತಿ ದೊಡ್ಡ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ನಿಂದಲೇ ಹೀಗೆ ಬಡ್ಡಿ ದರ ಹೆಚ್ಚಳ ಆದ ಮೇಲೆ ಇತರ ಹಲವು ಬ್ಯಾಂಕ್​ಗಳು, ಹೌಸಿಂಗ್ ಫೈನಾನ್ಸ್ ಕಂಪೆನಿಗಳು ಸಹ ಈಗ ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಹೆಚ್ಚಿಸುವ ಸಾಧ್ಯತೆ ಇದೆ. ಇನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಗೃಹ ಸಾಲದ ಮೇಲೆ ಪ್ರೊಸೆಸಿಂಗ್ ಶುಲ್ಕವನ್ನು ಸಹ ವಿಧಿಸಲಿದೆ. ಬ್ಯಾಂಕ್​ನಿಂದ ಒದಗಿಸಿರುವ ಮಾಹಿತಿ ಅನ್ವಯ, ಒಟ್ಟು ಸಾಲದ ಮೊತ್ತದ ಮೇಲೆ ಶೇ 0.40 ಶುಲ್ಕವನ್ನು ಪ್ರೊಸೆಸಿಂಗ್ ಶುಲ್ಕವಾಗಿ ವಿಧಿಸಲಾಗುತ್ತದೆ. ಇದರ ಜತೆಗೆ ಜಿಎಸ್​ಟಿಯನ್ನು ಸಹ ಪಾವತಿಸಬೇಕಾಗುತ್ತದೆ. ಹೀಗೆ ಬ್ಯಾಂಕ್​ನಿಂದ ಕನಿಷ್ಠ ರೂ. 10,000 ಹಾಗೂ ಗರಿಷ್ಠ ರೂ. 30,000 ಮತ್ತು ಜಿಎಸ್​ಟಿಯನ್ನು ಪ್ರೊಸೆಸಿಂಗ್ ಶುಲ್ಕವಾಗಿ ಪಾವತಿಸಬೇಕಾಗುತ್ತದೆ.

ಕಳೆದ ತಿಂಗಳು ಹಬ್ಬದ ಋತುವನ್ನು ಗಮನದಲ್ಲಿ ಇಟ್ಟುಕೊಂಡು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಗೃಹಸಾಲದ ಮೇಲಿನ ಪ್ರೊಸೆಸಿಂಗ್ ಶುಲ್ಕ ಮನ್ನಾವನ್ನು ಮುಂದುವರಿಸಿತ್ತು. ಗೃಹ ಸಾಲದ ಬಡ್ಡಿ ದರವು ಕಳೆದ ಹದಿನೈದು ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ತಲುಪಿದ್ದರಿಂದ ಕಳೆದ ಎರಡು ತ್ರೈ ಮಾಸಿಕದಿಂದ ರಿಯಲ್ ಎಸ್ಟೇಟ್ ವಲಯದಲ್ಲಿ ಚೇತರಿಕೆ ಕಾಣಿಸಿಕೊಂಡಿತ್ತು.

ಇದನ್ನೂ ಓದಿ: Housing Loan: ಮನೆ ಕಟ್ಟಲು, ಖರೀದಿ ಮಾಡಲು ಸಾಲ ಮಾಡುವ ಮುನ್ನ ತಿಳಿಯಲೇಬೇಕಾದ ಸಂಗತಿಗಳು

(India’s leading lender State Bank Of India increased the home loan rate of interest from April 1, 2021. Processing fee waives off also taken back.)

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್