AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಶೇ. 7ರಷ್ಟಾಗಬಹುದು: ನಿರೀಕ್ಷೆಹೆಚ್ಚಿಸಿದ ಎಸ್​ಬಿಐ ರಿಸರ್ಚ್

India's Growth Forecast For 24FY: 2023ರ ಏಪ್ರಿಲ್​ನಿಂದ 2024ರ ಮಾರ್ಚ್​ವರೆಗಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 7ರಷ್ಟು ಬೆಳೆಯಬಹುದು ಎಂದು ಎಸ್​ಬಿಐನ ರಿಸರ್ಚ್ ವಿಭಾಗವು ಹೇಳಿದೆ. ಈ ಹಣಕಾಸು ವರ್ಷದಲ್ಲಿ ಆರ್ಥಿಕತೆ ಶೇ. 6.7ರಷ್ಟು ಬೆಳೆಯಬಹುದು ಎಂದು ಎಸ್​ಬಿಐ ರಿಸರ್ಚ್ ಕಳೆದ ಬಾರಿಯ ಲೆಕ್ಕಾಚಾರದಲ್ಲಿ ಅಭಿಪ್ರಾಯಪಟ್ಟಿತ್ತು. ನವೆಂಬರ್ 30ರಂದು ಎನ್​ಎಸ್​ಒ ಬಿಡುಗಡೆ ಮಾಡಿದ ವರದಿ ಪ್ರಕಾರ ಭಾರತದ ಜಿಡಿಪಿ ಎರಡನೇ ಕ್ವಾರ್ಟರ್​ನಲ್ಲಿ ಶೇ. 7.6ರಷ್ಟು ಬೆಳೆದಿದೆ. ಈ ಹಿನ್ನೆಲೆಯಲ್ಲಿ ಜಿಡಿಪಿ ಅಂದಾಜು ಪರಿಷ್ಕರಿಸಲಾಗಿದೆ.

ಈ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಶೇ. 7ರಷ್ಟಾಗಬಹುದು: ನಿರೀಕ್ಷೆಹೆಚ್ಚಿಸಿದ ಎಸ್​ಬಿಐ ರಿಸರ್ಚ್
ಭಾರತದ ಜಿಡಿಪಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 01, 2023 | 11:59 AM

Share

ನವದೆಹಲಿ, ಡಿಸೆಂಬರ್ 1: ಈ ಹಣಕಾಸು ವರ್ಷದ ಎರಡನೇ ಕ್ವಾರ್ಟರ್​ನಲ್ಲಿ ದೇಶದ ಜಿಡಿಪಿ (India GDP) ಶೇ. 7.6ರಷ್ಟು ಬೆಳೆದು, ಎಲ್ಲರ ನಿರೀಕ್ಷೆ ಮೀರುವಂತೆ ಹೆಚ್ಚು ಮಟ್ಟದಲ್ಲಿದೆ. ಇದರ ಬೆನ್ನಲ್ಲೇ ಎಸ್​ಬಿಐನ ರಿಸರ್ಚ್ ವಿಭಾಗವು (SBI Research) ಈ ಹಣಕಾಸು ವರ್ಷಕ್ಕೆ ತನ್ನ ಲೆಕ್ಕಾಚಾರವನ್ನು (GDP growth forecast) ಬದಲಿಸಿದೆ. 2023-24ರ ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 6.7ರಷ್ಟು ಬೆಳೆಯಬಹುದು ಎಂದು ಹೇಳಿದ್ದ ಎಸ್​ಬಿಐ ರಿಸರ್ಚ್ ಇದೀಗ ತನ್ನ ನಿರೀಕ್ಷೆಯನ್ನು ಶೇ. 7ಕ್ಕೆ ಹೆಚ್ಚಿಸಿದೆ. ಎರಡನೇ ಕ್ವಾರ್ಟರ್​ನಲ್ಲಿ ಬಂದ ನಿರೀಕ್ಷೆಮೀರಿದ ಆರ್ಥಿಕ ವೃದ್ಧಿಯಿಂದಾಗಿ ಎಸ್​ಬಿಐ ಲೆಕ್ಕಾಚಾರ ಬದಲಿಸುವಂತೆ ಮಾಡಿದೆ.

‘ಇವತ್ತು ಬಿಡುಗಡೆ ಆದ ಎರಡನೇ ತ್ರೈಮಾಸಿಕ ವರದಿಯಲ್ಲಿ ಉತ್ತಮ ಸಂಖ್ಯೆ ಬಂದಿರುವುದು ಮುಂದಿನ ದಿನಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ. ಜಾಗತಿಕ ಕಾರ್ಪೊರೇಟ್ ಸಂಸ್ಥೆಗಳು, ನೀತಿರೂಪಕರು, ಹೂಡಿಕೆ ಗುರುಗಳು, ಫಂಡ್ ಮ್ಯಾನೇಜರ್​ಗಳು ಭಾರದತ್ತ ಹೊಸ ಉತ್ಸಾಹದಿಂದ ನೋಡಬಹುದು’ ಎಂದು ಎಸ್​ಬಿಐ ರಿಸರ್ಚ್ ನಿನ್ನೆ ನ. 30ರಂದು ಹೇಳಿಕೆ ನೀಡಿದೆ.

ಇದನ್ನೂ ಓದಿ: ನಿರೀಕ್ಷೆಮೀರಿಸಿದ ಆರ್ಥಿಕ ವೃದ್ಧಿ; ಎರಡನೇ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.6ರಷ್ಟು ಹೆಚ್ಚಳ; ಸರ್ಕಾರದ ನಿರೀಕ್ಷೆಗಿಂತಲೂ ಮಿಗಿಲು

‘ಆರ್​ಬಿಐನ ಶೇ. 6.5ರಷ್ಟು ಪ್ರಗತಿ ಅಂದಾಜಿಗಿಂತ ನಾವು ತುಸು ಮೇಲೆಯೆ ನಿರೀಕ್ಷೆ ಇಟ್ಟುಕೊಂಡಿದ್ದೆವು. ನಮ್ಮ ಈ ನಿರೀಕ್ಷೆ ಹುಸಿಯಾಗಲಿಲ್ಲ. ಜೊತೆಗೆ, ನಮ್ಮ ಅಂದಾಜನ್ನು ಮತ್ತೆ ಪರಾಮರ್ಶಿಸುವಂತೆ ಮಾಡಿದೆ,’ ಎಂದು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾದ ರಿಸರ್ಚ್ ವಿಭಾಗ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಎಸ್​ಬಿಐಗಿಂತ ಮುಂಚೆ ಮಿಂಟ್ ಸ್ಟ್ರೀಟ್ ಕೂಡ ತನ್ನ ಜಿಡಿಪಿ ವೃದ್ಧಿ ಅಂದಾಜನ್ನು ಶೇ. 6.5ರಿಂದ ಶೇ. 6.8ಕ್ಕೆ ಹೆಚ್ಚಿಸಿದೆ. ಈಗ ಬಹುತೇಕ ಎಲ್ಲಾ ಹಣಕಾಸು ವಿಶ್ಲೇಷಕ ಸಂಸ್ಥೆಗಳು ತಮ್ಮ ಅಂದಾನ್ನು ಪರಿಷ್ಕರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: S&P Global Ratings: ಈ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 6.4ರಷ್ಟು ಹೆಚ್ಚಳ: ಎಸ್ ಅಂಡ್ ಪಿ ಗ್ಲೋಬಲ್ ರೇಟಿಂಗ್ಸ್ ಅಂದಾಜು

ಭಾರತದ ಜಿಡಿಪಿ ಮೊದಲ ಕ್ವಾರ್ಟರ್ ಆದ ಏಪ್ರಿಲ್​ನಿಂದ ಜೂನ್​ವರೆಗಿನ ಅವಧಿಯಲ್ಲಿ ಶೇ. 7.8ರಷ್ಟು ಹೆಚ್ಚಳವಾಗಿತ್ತು. ಈ ವರ್ಷ ಸತತ ಎರಡು ತ್ರೈಮಾಸಿಕದಲ್ಲಿ ಜಿಡಿಪಿ ವೃದ್ಧಿದರ ಶೇ. 7ಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿದೆ. ಮುಂದಿನ ಉಳಿದೆರಡು ಕ್ವಾರ್ಟರ್​ಗಳಲ್ಲಿ ಜಿಡಿಪಿ ಶೇ. 6ಕ್ಕಿಂತಲೂ ಕಡಿಮೆ ಇರಬಹುದು ಎಂದು ಎಲ್ಲರೂ ಮಾಡಿರುವ ಅಂದಾಜು. ಈ ಲೆಕ್ಕಾಚಾರವೂ ತಲೆಕೆಳಗಾಗುವಂತೆ ಭಾರತದ ಜಿಡಿಪಿ ಹೆಚ್ಚುತ್ತದಾ ಕಾದುನೋಡಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Fri, 1 December 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​