AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಶೇ. 7ರಷ್ಟಾಗಬಹುದು: ನಿರೀಕ್ಷೆಹೆಚ್ಚಿಸಿದ ಎಸ್​ಬಿಐ ರಿಸರ್ಚ್

India's Growth Forecast For 24FY: 2023ರ ಏಪ್ರಿಲ್​ನಿಂದ 2024ರ ಮಾರ್ಚ್​ವರೆಗಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 7ರಷ್ಟು ಬೆಳೆಯಬಹುದು ಎಂದು ಎಸ್​ಬಿಐನ ರಿಸರ್ಚ್ ವಿಭಾಗವು ಹೇಳಿದೆ. ಈ ಹಣಕಾಸು ವರ್ಷದಲ್ಲಿ ಆರ್ಥಿಕತೆ ಶೇ. 6.7ರಷ್ಟು ಬೆಳೆಯಬಹುದು ಎಂದು ಎಸ್​ಬಿಐ ರಿಸರ್ಚ್ ಕಳೆದ ಬಾರಿಯ ಲೆಕ್ಕಾಚಾರದಲ್ಲಿ ಅಭಿಪ್ರಾಯಪಟ್ಟಿತ್ತು. ನವೆಂಬರ್ 30ರಂದು ಎನ್​ಎಸ್​ಒ ಬಿಡುಗಡೆ ಮಾಡಿದ ವರದಿ ಪ್ರಕಾರ ಭಾರತದ ಜಿಡಿಪಿ ಎರಡನೇ ಕ್ವಾರ್ಟರ್​ನಲ್ಲಿ ಶೇ. 7.6ರಷ್ಟು ಬೆಳೆದಿದೆ. ಈ ಹಿನ್ನೆಲೆಯಲ್ಲಿ ಜಿಡಿಪಿ ಅಂದಾಜು ಪರಿಷ್ಕರಿಸಲಾಗಿದೆ.

ಈ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಶೇ. 7ರಷ್ಟಾಗಬಹುದು: ನಿರೀಕ್ಷೆಹೆಚ್ಚಿಸಿದ ಎಸ್​ಬಿಐ ರಿಸರ್ಚ್
ಭಾರತದ ಜಿಡಿಪಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 01, 2023 | 11:59 AM

Share

ಮುಖ್ಯಾಂಶಗಳು

  • 2023ರ ಏಪ್ರಿಲ್​ನಿಂದ 2024ರ ಮಾರ್ಚ್​ವರೆಗಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 7ರಷ್ಟು ಬೆಳೆಯಬಹುದು ಎಂದು ಎಸ್​ಬಿಐನ ರಿಸರ್ಚ್ ವಿಭಾಗವು ಹೇಳಿದೆ.
  • ಈ ಹಣಕಾಸು ವರ್ಷದಲ್ಲಿ ಆರ್ಥಿಕತೆ ಶೇ. 6.7ರಷ್ಟು ಬೆಳೆಯಬಹುದು ಎಂದು ಎಸ್​ಬಿಐ ರಿಸರ್ಚ್ ಕಳೆದ ಬಾರಿಯ ಲೆಕ್ಕಾಚಾರದಲ್ಲಿ ಅಭಿಪ್ರಾಯಪಟ್ಟಿತ್ತು
  • ನವೆಂಬರ್ 30ರಂದು ಎನ್​ಎಸ್​ಒ ಬಿಡುಗಡೆ ಮಾಡಿದ ವರದಿ ಪ್ರಕಾರ ಭಾರತದ ಜಿಡಿಪಿ ಎರಡನೇ ಕ್ವಾರ್ಟರ್​ನಲ್ಲಿ ಶೇ. 7.6ರಷ್ಟು ಬೆಳೆದಿದೆ. ಈ ಹಿನ್ನೆಲೆಯಲ್ಲಿ ಜಿಡಿಪಿ ಅಂದಾಜು ಪರಿಷ್ಕರಿಸಲಾಗಿದೆ.

ನವದೆಹಲಿ, ಡಿಸೆಂಬರ್ 1: ಈ ಹಣಕಾಸು ವರ್ಷದ ಎರಡನೇ ಕ್ವಾರ್ಟರ್​ನಲ್ಲಿ ದೇಶದ ಜಿಡಿಪಿ (India GDP) ಶೇ. 7.6ರಷ್ಟು ಬೆಳೆದು, ಎಲ್ಲರ ನಿರೀಕ್ಷೆ ಮೀರುವಂತೆ ಹೆಚ್ಚು ಮಟ್ಟದಲ್ಲಿದೆ. ಇದರ ಬೆನ್ನಲ್ಲೇ ಎಸ್​ಬಿಐನ ರಿಸರ್ಚ್ ವಿಭಾಗವು (SBI Research) ಈ ಹಣಕಾಸು ವರ್ಷಕ್ಕೆ ತನ್ನ ಲೆಕ್ಕಾಚಾರವನ್ನು (GDP growth forecast) ಬದಲಿಸಿದೆ. 2023-24ರ ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 6.7ರಷ್ಟು ಬೆಳೆಯಬಹುದು ಎಂದು ಹೇಳಿದ್ದ ಎಸ್​ಬಿಐ ರಿಸರ್ಚ್ ಇದೀಗ ತನ್ನ ನಿರೀಕ್ಷೆಯನ್ನು ಶೇ. 7ಕ್ಕೆ ಹೆಚ್ಚಿಸಿದೆ. ಎರಡನೇ ಕ್ವಾರ್ಟರ್​ನಲ್ಲಿ ಬಂದ ನಿರೀಕ್ಷೆಮೀರಿದ ಆರ್ಥಿಕ ವೃದ್ಧಿಯಿಂದಾಗಿ ಎಸ್​ಬಿಐ ಲೆಕ್ಕಾಚಾರ ಬದಲಿಸುವಂತೆ ಮಾಡಿದೆ.

‘ಇವತ್ತು ಬಿಡುಗಡೆ ಆದ ಎರಡನೇ ತ್ರೈಮಾಸಿಕ ವರದಿಯಲ್ಲಿ ಉತ್ತಮ ಸಂಖ್ಯೆ ಬಂದಿರುವುದು ಮುಂದಿನ ದಿನಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ. ಜಾಗತಿಕ ಕಾರ್ಪೊರೇಟ್ ಸಂಸ್ಥೆಗಳು, ನೀತಿರೂಪಕರು, ಹೂಡಿಕೆ ಗುರುಗಳು, ಫಂಡ್ ಮ್ಯಾನೇಜರ್​ಗಳು ಭಾರದತ್ತ ಹೊಸ ಉತ್ಸಾಹದಿಂದ ನೋಡಬಹುದು’ ಎಂದು ಎಸ್​ಬಿಐ ರಿಸರ್ಚ್ ನಿನ್ನೆ ನ. 30ರಂದು ಹೇಳಿಕೆ ನೀಡಿದೆ.

ಇದನ್ನೂ ಓದಿ: ನಿರೀಕ್ಷೆಮೀರಿಸಿದ ಆರ್ಥಿಕ ವೃದ್ಧಿ; ಎರಡನೇ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.6ರಷ್ಟು ಹೆಚ್ಚಳ; ಸರ್ಕಾರದ ನಿರೀಕ್ಷೆಗಿಂತಲೂ ಮಿಗಿಲು

‘ಆರ್​ಬಿಐನ ಶೇ. 6.5ರಷ್ಟು ಪ್ರಗತಿ ಅಂದಾಜಿಗಿಂತ ನಾವು ತುಸು ಮೇಲೆಯೆ ನಿರೀಕ್ಷೆ ಇಟ್ಟುಕೊಂಡಿದ್ದೆವು. ನಮ್ಮ ಈ ನಿರೀಕ್ಷೆ ಹುಸಿಯಾಗಲಿಲ್ಲ. ಜೊತೆಗೆ, ನಮ್ಮ ಅಂದಾಜನ್ನು ಮತ್ತೆ ಪರಾಮರ್ಶಿಸುವಂತೆ ಮಾಡಿದೆ,’ ಎಂದು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾದ ರಿಸರ್ಚ್ ವಿಭಾಗ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಎಸ್​ಬಿಐಗಿಂತ ಮುಂಚೆ ಮಿಂಟ್ ಸ್ಟ್ರೀಟ್ ಕೂಡ ತನ್ನ ಜಿಡಿಪಿ ವೃದ್ಧಿ ಅಂದಾಜನ್ನು ಶೇ. 6.5ರಿಂದ ಶೇ. 6.8ಕ್ಕೆ ಹೆಚ್ಚಿಸಿದೆ. ಈಗ ಬಹುತೇಕ ಎಲ್ಲಾ ಹಣಕಾಸು ವಿಶ್ಲೇಷಕ ಸಂಸ್ಥೆಗಳು ತಮ್ಮ ಅಂದಾನ್ನು ಪರಿಷ್ಕರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: S&P Global Ratings: ಈ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 6.4ರಷ್ಟು ಹೆಚ್ಚಳ: ಎಸ್ ಅಂಡ್ ಪಿ ಗ್ಲೋಬಲ್ ರೇಟಿಂಗ್ಸ್ ಅಂದಾಜು

ಭಾರತದ ಜಿಡಿಪಿ ಮೊದಲ ಕ್ವಾರ್ಟರ್ ಆದ ಏಪ್ರಿಲ್​ನಿಂದ ಜೂನ್​ವರೆಗಿನ ಅವಧಿಯಲ್ಲಿ ಶೇ. 7.8ರಷ್ಟು ಹೆಚ್ಚಳವಾಗಿತ್ತು. ಈ ವರ್ಷ ಸತತ ಎರಡು ತ್ರೈಮಾಸಿಕದಲ್ಲಿ ಜಿಡಿಪಿ ವೃದ್ಧಿದರ ಶೇ. 7ಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿದೆ. ಮುಂದಿನ ಉಳಿದೆರಡು ಕ್ವಾರ್ಟರ್​ಗಳಲ್ಲಿ ಜಿಡಿಪಿ ಶೇ. 6ಕ್ಕಿಂತಲೂ ಕಡಿಮೆ ಇರಬಹುದು ಎಂದು ಎಲ್ಲರೂ ಮಾಡಿರುವ ಅಂದಾಜು. ಈ ಲೆಕ್ಕಾಚಾರವೂ ತಲೆಕೆಳಗಾಗುವಂತೆ ಭಾರತದ ಜಿಡಿಪಿ ಹೆಚ್ಚುತ್ತದಾ ಕಾದುನೋಡಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Fri, 1 December 23

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?