AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಬಿಐನಿಂದ ನಡೆಯಲಿದೆ 12,000 ಹುದ್ದೆಗಳ ನೇಮಕಾತಿ; ಎಂಜಿನಿಯರಿಂಗ್ ಮಾಡಿದ್ದರೆ ಸುವರ್ಣಾವಕಾಶ

SBI recruitment 2024-25: ಭಾರತದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎನಿಸಿದ ಎಸ್​ಬಿಐ ಈ ಹಣಕಾಸು ವರ್ಷದಲ್ಲಿ 12,000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ. ಇದರಲ್ಲಿ ಶೇ. 85ರಷ್ಟು ಎಂಜಿನಿಯರುಗಳಿಗೆ ಆದ್ಯತೆ ಇರಲಿದೆ. ಅಂದರೆ, 10,000 ಹುದ್ದೆಗಳಿಗೆ ಎಂಜಿನಿಯರುಗಳನ್ನು ರೆಕ್ರೂಟ್ ಮಾಡಿಕೊಳ್ಳಲಿದೆ ಎಸ್​ಬಿಐ. ಬ್ಯಾಂಕಿಂಗ್​ನಲ್ಲಿ ತಂತ್ರಜ್ಞಾನ ನಿರ್ವಹಣೆಯನ್ನು ಹೆಚ್ಚು ಸಮರ್ಪಕಗೊಳಿಸಲು ಈ ಯೋಜನೆ ಮಾಡಲಾಗಿದೆ.

ಎಸ್​ಬಿಐನಿಂದ ನಡೆಯಲಿದೆ 12,000 ಹುದ್ದೆಗಳ ನೇಮಕಾತಿ; ಎಂಜಿನಿಯರಿಂಗ್ ಮಾಡಿದ್ದರೆ ಸುವರ್ಣಾವಕಾಶ
ಎಸ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 12, 2024 | 7:26 PM

Share

ನವದೆಹಲಿ, ಮೇ 12: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2024-25ರ ಹಣಕಾಸು ವರ್ಷದಲ್ಲಿ 12,000 ಮಂದಿ ಹೊಸ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಿದೆ. ಪ್ರೊಬೇಶನರಿ ಆಫೀಸರ್ಸ್ (Probationary Officers) ಮತ್ತು ಅಸೋಸಿಯೇಟ್ಸ್​ಗಳಾಗಿ ಕೆಲಸಕ್ಕೆ ಸೇರಿಸಿಕೊಳ್ಳಲಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯ ಹುದ್ದೆಗಳಿಗೆ ಎಂಜಿನಿಯರಿಂಗ್ ಪದವೀಧರರನ್ನು ಸೇರಿಸಿಕೊಳ್ಳಲಾಗಲಿದೆ. ಎಸ್​ಬಿಐ ಛೇರ್ಮನ್ ದಿನೇಶ್ ಖರ (Dinesh Khara) ನೀಡಿದ ಮಾಹಿತಿ ಪ್ರಕಾರ ನೇಮಕಾತಿ ಆಗುವ ಶೇ. 85ರಷ್ಟು ಹುದ್ದೆಗಳಿಗೆ ಎಂಜಿನಿಯರ್​ಗಳ ನೇಮಕಾತಿ ಆಗಲಿದೆ. ಡಿಜಿಟಲ್ ವಿಭಾಗದಲ್ಲಿ ಸರಿಯಾದ ರೀತಿಯಲ್ಲಿ ಸೆಕ್ಯೂರಿಟಿ ವ್ಯವಸ್ಥೆ ಇಲ್ಲದಿರುವ ಕಾರಣವೊಡ್ಡಿ ಆರ್​ಬಿಐ ಕೋಟಕ್ ಮಹೀಂದ್ರ ಬ್ಯಾಂಕ್ ಮೇಲೆ ನಿರ್ಬಂಧಗಳನ್ನು ಹೇರಿದ ಕ್ರಮ ಇತ್ತೀಚೆಗಷ್ಟೇ ನಡೆದಿದೆ. ಕೋಟಕ್ ಮಾತ್ರವಲ್ಲ, ಭಾರತದ ಹೆಚ್ಚಿನ ಬ್ಯಾಂಕುಗಳಲ್ಲಿ ಇನ್ನೂ ಹಳೆಯ ತಂತ್ರಜ್ಞಾನವೇ ಚಾಲ್ತಿಯಲ್ಲಿದೆ. ಒಂದೊಂದಾಗಿ ಬ್ಯಾಂಕುಗಳ ಮೇಲೆ ಆರ್​ಬಿಐ ಕ್ರಮ ಜರುಗಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಸ್​ಬಿಐ ಎಂಜಿನಿಯರುಗಳನ್ನು ನೇಮಕ ಮಾಡಿಕೊಳ್ಳಲು ಹೊರಟಿರಬಹುದು.

ವರದಿಗಳ ಪ್ರಕಾರ ಎಸ್​ಬಿಐ ಸಾಕಷ್ಟು ದೊಡ್ಡ ಮಟ್ಟದಲ್ಲಿ ತಂತ್ರಜ್ಞಾನಕ್ಕೆ ವ್ಯಯಿಸಲು ಹೊರಟಿದೆ. ಸದ್ಯ ಭಾರತದ ಬ್ಯಾಂಕಿಂಗ್ ವಲಯದಲ್ಲಿ ತಂತ್ರಜ್ಞಾನ ನಿರ್ವಹಣಾ ವೆಚ್ಚ ಒಟ್ಟು ಬಜೆಟ್​ನಲ್ಲಿ ಸರಾಸರಿ ಶೇ. 7ರಿಂದ 8ರಷ್ಟಿದೆ. ಎಸ್​ಬಿಐ ಇದಕ್ಕಿಂತ ಬಹಳ ಹೆಚ್ಚಿನ ಮಟ್ಟದಲ್ಲಿ ತಂತ್ರಜ್ಞಾನಕ್ಕಾಗಿ ವ್ಯಯಿಸಲಿದೆ ಎನ್ನುವ ಮಾಹಿತಿಯನ್ನು ಎಸ್​ಬಿಐ ಛೇರ್ಮನ್ ನೀಡಿದ್ದಾರೆ.

ಇದನ್ನೂ ಓದಿ: Google Jobs: ಅಮೆರಿಕದಲ್ಲಿ ಲೇ ಆಫ್ ಮಾಡಿದರೂ ಭಾರತದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದ ಗೂಗಲ್

ಎಂಜಿನಿಯರ್​ಗಳನ್ನು ಬ್ಯಾಂಕಿಂಗ್ ಕ್ಷೇತ್ರಕ್ಕೆ ತಂದು ಏನು ಮಾಡುತ್ತದೆ ಎಸ್​ಬಿಐ?

ಸದ್ಯ ಬ್ಯಾಂಕಿಂಗ್ ಜ್ಞಾನ ಇರುವಂತಹ ಎಂಜಿನಿಯರುಗಳಿಗೆ ಎಸ್​ಬಿಐ ನೇಮಕಾತಿಯಲ್ಲಿ ಆದ್ಯತೆ ಸಿಗಲಿದೆ. 3,000 ಪ್ರೊಬೇಶನರಿ ಆಫೀಸರ್​ಗಳು ಹಾಗೂ 8,000 ಅಸೋಸಿಯೇಟ್​ಗಳ ಹುದ್ದೆಗೆ ನೇಮಕವಾಗುವ ಎಂಜಿನಿಯರುಗಳಿಗೆ ಆರಂಭಿಕ ತರಬೇತಿ ನೀಡಿ, ವಿವಿಧ ಬಿಸಿನೆಸ್ ಜವಾಬ್ದಾರಿಗಳಿಗೆ ನಿಯೋಜಿಸಲಾಗಲಿದೆ.

ತಾಂತ್ರಿಕವಾಗಿ ಪಳಗಿರುವ ಎಂಜಿನಿಯರುಗಳನ್ನು ಐಟಿ ಮತ್ತು ಬಿಸಿನೆಸ್ ರೋಲ್​ಗಳಿಗೆ ಹಾಕಿದರೆ ಗ್ರಾಹಕರೊಂದಿಗಿನ ವ್ಯವಹಾರ ಸಮರ್ಪಕವಾಗಿ ನಡೆಯಬಹುದು ಎನ್ನುವುದು ಎಸ್​ಬಿಐನ ಎಣಿಕೆ.

ಇದನ್ನೂ ಓದಿ: KPSC PDO Recruitment 2024: 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳು -ಅರ್ಹತೆ ವಿವರ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

‘ನಾವು ಅವರನ್ನು ಮೊದಲು ಬ್ಯಾಂಕಿಂಗ್​ಗೆ ಹಾಕುತ್ತೇವೆ. ಬಳಿಕ ಅವರ ಅಭಿರುಚಿ, ಸಾಮರ್ಥ್ಯ ಇತ್ಯಾದಿ ಆಧಾರದ ಮೇಲೆ ಐಟಿ ಅಥವಾ ಬಿಸಿನೆಸ್ ಜವಾಬ್ದಾರಿಗಳಿಗೆ ನಿಯೋಜಿಸಲಾಗುವುದು. ಇದರಿಂದ ತಂತ್ರಜ್ಞಾನ ಅರಿವು ಇರುವ ಮಾನವ ಸಂಪನ್ಮೂಲದ ನಿರಂತರ ಲಭ್ಯತೆ ಇದ್ದಂತಾಗುತ್ತದೆ ಎಂದು ಎಸ್​ಬಿಐ ಮುಖ್ಯಸ್ಥರು ಹೇಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?