AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮಧ್ಯರಾತ್ರಿ ನಂತರ ಎಸ್​ಬಿಐನ ಯುಪಿಐ ಕೆಲಸ ಮಾಡೋದಿಲ್ಲ; ಎಷ್ಟು ಹೊತ್ತು ಸರ್ವಿಸ್ ಡೌನ್ ಆಗಿರುತ್ತೆ, ಏನು ಕಾರಣ, ನೋಡಿ ಮಾಹಿತಿ

SBI UPI Transaction Down: ನವೆಂಬರ್ 26ರಂದು ರಾತ್ರಿ 12:30ರಿಂದ ಮುಂಜಾವು 3ರವರೆಗೆ ನಾವು ಯುಪಿಐನಲ್ಲಿ ಟೆಕ್ನಾಲಜಿ ಅಪ್​ಗ್ರೇಡ್ ಮಾಡುತ್ತಿದ್ದೇವೆ. ಈ ಅವಧಿಯಲ್ಲಿ ಯುಪಿಐ ಹೊರತುಪಡಿಸಿ ಇಂಟರ್ನೆಟ್ ಬ್ಯಾಂಕಿಂಗ್, ಯೋನೋ, ಯೋನೋ ಲೈಟ್ ಮತ್ತು ಎಟಿಎಂ ಮೊದಲಾದ ಡಿಜಿಟಲ್ ಚಾನಲ್​ಗಳು ಲಭ್ಯ ಇರುತ್ತವೆ ಎಂದು ಎಸ್​ಬಿಐ ಶನಿವಾರ ಟ್ವೀಟ್ ಮಾಡಿದೆ.

ಇಂದು ಮಧ್ಯರಾತ್ರಿ ನಂತರ ಎಸ್​ಬಿಐನ ಯುಪಿಐ ಕೆಲಸ ಮಾಡೋದಿಲ್ಲ; ಎಷ್ಟು ಹೊತ್ತು ಸರ್ವಿಸ್ ಡೌನ್ ಆಗಿರುತ್ತೆ, ಏನು ಕಾರಣ, ನೋಡಿ ಮಾಹಿತಿ
ಎಸ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 25, 2023 | 6:26 PM

Share

ನವದೆಹಲಿ, ನವೆಂಬರ್ 25: ನಿಮ್ಮ ಯುಪಿಐ ಆ್ಯಪ್​ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಬ್ಯಾಂಕ್ ಖಾತೆಯನ್ನು ಬಳಸುತ್ತಿದ್ದೀರಾ? ನವೆಂಬರ್ 26, ಅಂದರೆ ನಾಳೆ ಭಾನುವಾರದಂದು ಎಸ್​ಬಿಐನ ಯುಪಿಐ ವಹಿವಾಟುಗಳು ಸಾಧ್ಯವಾಗುವುದಿಲ್ಲ. ಎಸ್​ಬಿಐನ ಯುಪಿಐ ಪ್ಲಾಟ್​ಫಾರ್ಮ್​ನಲ್ಲಿ ಟೆಕ್ನಾಲಜಿ ಅಪ್​ಗ್ರೇಡ್ ಮಾಡಲಾಗುತ್ತಿರುವುದರಿಂದ ಭಾನುವಾರ ಹಲವು ಹೊತ್ತು ಅದರ ವಹಿವಾಟು ಸ್ಥಗಿತಗೊಂಡಿರುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಅಲರ್ಟ್ ಮಾಡಿದೆ. ಅದರ ಪ್ರಕಾರ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾವಿನ ಮಧ್ಯೆ ಎರಡೂವರೆ ಗಂಟೆ ಕಾಲ ಸರ್ವಿಸ್ ಡೌನ್ ಅಗಿರುತ್ತದೆ.

‘26-11-2023ರಂದು 00:30ರಿಂದ 3:00 ಗಂಟೆಯವರೆಗೆ ನಾವು ಯುಪಿಐನಲ್ಲಿ ಟೆಕ್ನಾಲಜಿ ಅಪ್​ಗ್ರೇಡ್ ಮಾಡುತ್ತಿದ್ದೇವೆ. ಈ ಅವಧಿಯಲ್ಲಿ ಯುಪಿಐ ಹೊರತುಪಡಿಸಿ ಇಂಟರ್ನೆಟ್ ಬ್ಯಾಂಕಿಂಗ್, ಯೋನೋ, ಯೋನೋ ಲೈಟ್ ಮತ್ತು ಎಟಿಎಂ ಮೊದಲಾದ ಡಿಜಿಟಲ್ ಚಾನಲ್​ಗಳು ಲಭ್ಯ ಇರುತ್ತವೆ,’ ಎಂದು ಎಸ್​ಬಿಐ ಇಂದು ಟ್ವೀಟ್ ಮಾಡಿದೆ.

ಅಂದರೆ, ಶನಿವಾರ ಮಧ್ಯರಾತ್ರಿ 12:30ರಿಂದ ಮುಂಜಾವು 3 ಗಂಟೆಯವರೆಗೆ ಅದರ ಯುಪಿಐ ವಹಿವಾಟು ಕೆಲಸ ಮಾಡುವುದಿಲ್ಲ. ಆ ಸಮಯದಲ್ಲಿ ಹಣದ ವಹಿವಾಟು ಮಾಡಬೇಕೆನ್ನುವವರಿಗೆ ಇತರ ಅವಕಾಶಗಳು ಇದ್ದೇ ಇವೆ. ಎಟಿಎಂ, ಇಂಟರ್ನನೆಟ್ ಬ್ಯಾಂಕಿಂಗ್, ಯೋನೋ ಬ್ಯಾಂಕಿಂಗ್ ಆ್ಯಪ್ ಇತ್ಯಾದಿಯನ್ನು ಬಳಸಬಹುದು. ಫೋನ್ ಬ್ಯಾಂಕಿಂಗ್ ಕೂಡ ನಡೆಯುತ್ತದೆ.

ಇದನ್ನೂ ಓದಿ: ಟಾಟಾನಾ, ಬಿರ್ಲಾನಾ?; ದೇಶದ ಅತಿದೊಡ್ಡ ಸಾಲಗಾರರು ಯಾರು? ಇಲ್ಲಿದೆ ಟಾಪ್-10 ಪಟ್ಟಿ

ಭಾರತದಲ್ಲಿ ಯುಪಿಐ ಅತಿಹೆಚ್ಚು ಬಳಸಲಾಗುತ್ತಿರುವ ಡಿಜಿಟಲ್ ಪೇಮೆಂಟ್ ಪ್ಲಾಟ್​ಫಾರ್ಮ್. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯುಪಿಐ ಪ್ಲಾಟ್​ಫಾರ್ಮ್ ಸರಿಯಾಗಿ ಕೆಲಸ ಮಾಡುವುದಿಲ್ಲ ಎಂಬ ದೂರು ಸಾಕಷ್ಟು ಕೇಳಿಬಂದಿದೆ. 44 ಕೋಟಿ ಗ್ರಾಹಕರ ಬಳಗ ಹೊಂದಿರುವ ಎಸ್​ಬಿಐಗೆ ಇದನ್ನು ಸರಿಪಡಿಸುವುದು ಅತ್ಯಗತ್ಯವಾಗಿದೆ. ಈ ಕಾರಣಕ್ಕೆ ತಂತ್ರಜ್ಞಾನ ಉನ್ನತೀಕರಣ ಮಾಡುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Sat, 25 November 23

ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ